AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಎಕ್ಸ್​ಪ್ರೆಸ್ ಕ್ಯಾಬಿನ್ ಸಿಬ್ಬಂದಿಯ ಮುಷ್ಕರ ಅಂತ್ಯ; ಫ್ಲೈಟ್ ಸೇವೆ ಸಹಜ ಸ್ಥಿತಿಗೆ

Air India Express crisis: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಇದ್ದ ಉದ್ಯೋಗಿಗಳ ಬೇಗುದಿ ತಾತ್ಕಾಲಿಕವಾಗಿ ಶಮನಗೊಂಡಿದೆ. ಮುಷ್ಕರ ನಡೆಸುತ್ತಿದ್ದವರು ತಮ್ಮ ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಮರಳಲು ನಿರ್ಧರಿಸಿದ್ದಾರೆ. ಮುಷ್ಕರ ನಡೆಸಿದ್ದಕ್ಕಾಗಿ ಕೆಲಸದಿಂದ ತೆಗೆಯಲಾಗಿದ್ದ 25 ಮಂದಿಯನ್ನು ಸಂಸ್ಥೆ ಮತ್ತೆ ಕೆಲಸಕ್ಕೆ ಸೇರಿಸಿಕೊಂಡಿದೆ. ವಜಾ ಆದೇಶವನ್ನು ಹಿಂಪಡೆದಿದೆ. ಎಲ್ಲರೂ ಕೆಲಸಕ್ಕೆ ಮರಳುತ್ತಿರುವಂತೆಯೇ ಏರ್ ಇಂಡಿಯಾ ಎಕ್ಸ್​ಪ್ರೆಸ್ ಫ್ಲೈಟ್ ಸೇವೆ ಸಹಜ ಸ್ಥಿತಿಗೆ ಮರಳುತ್ತಿದೆ.

ಏರ್ ಇಂಡಿಯಾ ಎಕ್ಸ್​ಪ್ರೆಸ್ ಕ್ಯಾಬಿನ್ ಸಿಬ್ಬಂದಿಯ ಮುಷ್ಕರ ಅಂತ್ಯ; ಫ್ಲೈಟ್ ಸೇವೆ ಸಹಜ ಸ್ಥಿತಿಗೆ
ಏರ್ ಇಂಡಿಯಾ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 10, 2024 | 2:44 PM

ನವದೆಹಲಿ, ಮೇ 10: ಉದ್ಯೋಗಿಗಳಿಂದ ಪ್ರತಿಭಟನೆ ಎದುರಿಸುತ್ತಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್ (Air India Express) ಸಂಸ್ಥೆ ವಾರಾಂತ್ಯದೊಳಗೆ ಬಿಕ್ಕಟ್ಟು ಶಮನ ಮಾಡಿಕೊಂಡಿದೆ. ಕ್ಯಾಬಿನ್ ಸಿಬ್ಬಂದಿ (cabin crew) ಮುಷ್ಕರ ಅಂತ್ಯಗೊಂಡಿದ್ದು ಇಂದು ಶುಕ್ರವಾರ ಸಂಸ್ಥೆಯ ಬಹುತೇಕ ವಿಮಾನಗಳು ಇನ್ನೆರಡು ದಿನದಲ್ಲಿ ಪೂರ್ಣಪ್ರಮಾಣದಲ್ಲಿ ಸಂಚಾರ ನಡೆಸಲಿವೆ. ಮೇ 7ರಂದು ನೂರಾರು ಉದ್ಯೋಗಿಗಳು ಹೇಳದೇ ಕೇಳದೇ ರಜೆ ಹಾಕಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. 170ಕ್ಕಿಂತ ಹೆಚ್ಚು ಫ್ಲೈಟ್​ಗಳು ರದ್ದಾಗಿದ್ದವು. ನಿನ್ನೆ ಮೇ 9, ಗುರುವಾರ ಸಂಜೆ ಮುಷ್ಕರ ನಿರತ ಸಿಬ್ಬಂದಿ ತಮ್ಮ ಪ್ರತಿಭಟನೆ ನಿಲ್ಲಿಸಲು ನಿರ್ಧರಿಸಿದ್ದರು. ಅದರಂತೆ ಬಹುತೇಕ ಮಂದಿ ಇಂದು ಕೆಲಸಕ್ಕೆ ಮರಳಿದ್ದಾರೆ.

ಉದ್ಯೋಗಿಗಳು ಸಾಮೂಹಿಕವಾಗಿ ರಜೆ ಹಾಕಿದಾಗ ಕ್ಯಾಬಿನ್ ಸಿಬ್ಬಂದಿಯ ಸುಮಾರು 30 ಮಂದಿಯನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಈಗ ಪ್ರತಿಭಟನೆ ನಿಲ್ಲಿಸಿ ಕೆಲಸಕ್ಕೆ ಮರಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್​ಪ್ರೆಸ್​ನ ಮ್ಯಾನೇಜ್ಮೆಂಟ್ ಕೆಲಸದಿಂದ ತೆಗೆಯಲಾಗಿದ್ದ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಂಡಿದೆ. ಇನ್ನೆರಡು ದಿನದಲ್ಲಿ ಫ್ಲೈಟ್ ಸೇವೆ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ ಇದೆ.

ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆ ದಿನಕ್ಕೆ 380 ಫ್ಲೈಟ್​ಗಳ ಹಾರಾಟ ನಡೆಸುತ್ತದೆ. ಇದರಲ್ಲಿ ಸುಮಾರು 120 ಅಂತಾರಾಷ್ಟ್ರೀಯ ಫ್ಲೈಟ್​ಗಳಿವೆ. ಭಾರತದೊಳಗೆ 260 ಫ್ಲೈಟ್ ಸೇವೆ ನೀಡುತ್ತದೆ.

ಇದನ್ನೂ ಓದಿ: ಊಲಾ, ಊಬರ್​ಗೆ ಸೆಡ್ಡು ಹೊಡೆಯಲು ಪೇಟಿಎಂ ಎಂಟ್ರಿ; ಸಿಗಲಿದೆ ಆಟೊರಿಕ್ಷಾ ಬುಕಿಂಗ್ ಸೇವೆ

ಏರ್ ಇಂಡಿಯಾ ಎಕ್ಸ್​ಪ್ರೆಸ್​ನ ಮ್ಯಾನೇಜ್ಮೆಂಟ್ ವಿರುದ್ಧ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಅಸಮಾಧಾನಗೊಂಡಿದ್ದಾರೆ. ಉದ್ಯೋಗಿ ಉದ್ಯೋಗಿಗಳ ಮಧ್ಯೆ ತಾರತಮ್ಯತೆ ಮಾಡಲಾಗುತ್ತಿದೆ. ಉದ್ಯೋಗಿಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಸಂಬಳ ವಿಚಾರದಲ್ಲಿ ಅನ್ಯಾಯ ಆಗುತ್ತಿದೆ. ಸಂದರ್ಶನದ ವೇಳೆ ತಿಳಿಸಿದ ಹುದ್ದೆಯೇ ಬೇರೆ, ಕೆಲಸಕ್ಕೆ ಸೇರಿದ ಮೇಲೆ ನೀಡಲಾದ ಹುದ್ದೆಯೇ ಬೇರೆ ಎನ್ನುವ ಅಳಲು ಹಲವರದ್ದು. ಈ ಹಿನ್ನೆಲೆಯಲ್ಲಿ ಮೇ 7ರಂದು ನೂರಾರು ಉದ್ಯೋಗಿಗಳು ಏಕಾಏಕಿ ಸಾಮೂಹಿಕವಾಗಿ ಹುಷಾರಿಲ್ಲವೆಂದು ಸಿಕ್ ಲೀವ್ ಹಾಕಿದ್ದರು. ಅಷ್ಟೇ ಅಲ್ಲ, ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಈ ಕಾರಣಕ್ಕೆ ಸಂಸ್ಥೆಯ ಹೆಚ್ಚಿನ ಫ್ಲೈಟ್​ಗಳು ಎರಡು ದಿನ ಬಹುತೇಕ ಸ್ಥಗಿತಗೊಂಡಿದ್ದವು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ