AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಎಸ್​ಬಿಐ, ಬ್ಯಾಂಕ್ ಆಫ್ ಬರೋಡದಿಂದ 18,000 ಕೋಟಿ ಸಾಲ ಪಡೆಯಲಿದೆ ಏರ್ ಇಂಡಿಯಾ

ಕಳೆದ ವರ್ಷ ಎಸ್​​ಬಿಐಯಿಂದ ಟಾಟಾ ಸನ್ಸ್​ 10,000 ಕೋಟಿ ಸಾಲ ಹಾಗೂ ಬ್ಯಾಂಕ್ ಆಫ್ ಬರೋಡದಿಂದ 5,000 ಕೋಟಿ ರೂ. ಸಾಲ ಪಡೆದಿತ್ತು.

Air India: ಎಸ್​ಬಿಐ, ಬ್ಯಾಂಕ್ ಆಫ್ ಬರೋಡದಿಂದ 18,000 ಕೋಟಿ ಸಾಲ ಪಡೆಯಲಿದೆ ಏರ್ ಇಂಡಿಯಾ
ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on:Feb 07, 2023 | 3:16 PM

Share

ನವದೆಹಲಿ: ಟಾಟಾ ಸಮೂಹದ (Tata Group) ಒಡೆತನದಲ್ಲಿರುವ ಏರ್ ಇಂಡಿಯಾ (Air India) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಬ್ಯಾಂಕ್ ಆಫ್ ಬರೋಡದಿಂದ (BoB) 18,000 ಕೋಟಿ ರೂ. ಸಾಲ ಪಡೆಯಲಿದೆ. ಅಸ್ತಿತ್ವದಲ್ಲಿರುವ ಅಲ್ಪಾವಧಿಯ ಸಾಲವನ್ನು ಮರು ಹೊಂದಿಸುವುದಕ್ಕಾಗಿ ಈ ಸಾಲ ಪಡೆಯಲಿದೆ. ಅಸ್ತಿತ್ವದಲ್ಲಿರುವ ಸಾಲದ ಅವಧಿ ಒಂದು ವರ್ಷವಾಗಿದ್ದು, ಅದನ್ನು ದೀರ್ಘಾವಧಿಯ ಸಾಲವಾಗಿ ಪರಿವರ್ತಿಸಲು ಏರ್ ಇಂಡಿಯಾ ಉದ್ದೇಶಿಸಿದೆ ಎಂದು ವರದಿಯಾಗಿದೆ. ಟಾಟಾ ಸಮೂಹವು ಮಾಲೀಕತ್ವ ವಹಿಸಿಕೊಂಡ ಬಳಿಕ ದೊರೆತ ಸಾಲ ಸೌಲಭ್ಯದ ಅಡಿ ಪಡೆದ ಸಾಲಗಳನ್ನು ಮುಂದುವರಿಸುವುದಕ್ಕಾಗಿ ಏರ್ ಇಂಡಿಯಾ ಹೊಸದಾಗಿ ಸಾಲ ಪಡೆಯಲು ಮುಂದಾಗಿದೆ. ದೀರ್ಘಾವಧಿಯ ತಂತ್ರಗಾರಿಕೆಯ ಭಾಗವಾಗಿ ಈ ಕ್ರಮಕ್ಕೆ ಮುಂದಾಗಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಟಾಟಾ ಸಮೂಹವು ಏರ್ ಇಂಡಿಯಾ ಮಾಲೀಕತ್ವ ವಹಿಸಿದ ಬಳಿಕ ಅದಕ್ಕೊಂದು ಸ್ಪಷ್ಟ ರೂಪ ನೀಡುವ ನಿಟ್ಟಿನಲ್ಲಿ ಈಗಲೂ ಕಾರ್ಯಾಚರಿಸುತ್ತಿದೆ. ಬ್ಯಾಂಕ್​ಗಳೊಂದಿಗಿನ ಸಹಭಾಗಿತ್ವವನ್ನು ಅಧಿಕೃತವಾಗಿ ಗಟ್ಟಿಗೊಳಿಸಲು ಸಂಸ್ಥೆ ಪ್ರತ್ನಿಸುತ್ತಿದೆ. ದೀರ್ಘಾವಧಿಗೆ ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಸಂಸ್ಥೆಯ ಗುರಿಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಕನಾಮಿಕ್ ಟೈಮ್ಸ್’ ವರದಿ ಮಾಡಿದೆ.

ಇದನ್ನೂ ಓದಿ: Layoff: ಇನ್ಫೋಸಿಸ್​ನಿಂದ 600 ಮಂದಿ ಹೊಸ ಉದ್ಯೋಗಿಗಳ ವಜಾ; ವರದಿ

ಈ ಮಧ್ಯೆ ಕಂಪನಿಯು ಏರ್ ಏಷ್ಯಾ, ವಿಸ್ತಾರ ಬ್ರ್ಯಾಂಡ್​​ಗಳನ್ನು ವಿಲೀನಗೊಳಿಸುವ ನಿಟ್ಟಿನಲ್ಲಿಯೂ ಕಾರ್ಯಾಚರಿಸುತ್ತಿದೆ. ಹೊಸ ವಿಮಾನಗಳ ಖರೀದಿಗೆ ಹೂಡಿಕೆ, ಅಸ್ತಿತ್ವದಲ್ಲಿರುವ ಹಳೆಯ ವಿಮಾನಗಳ ಬದಲಾವಣೆ, ಜಾಲವನ್ನು ವಿಸ್ತರಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ.

ಕಳೆದ ವರ್ಷ ಎಸ್​​ಬಿಐಯಿಂದ ಟಾಟಾ ಸನ್ಸ್​ 10,000 ಕೋಟಿ ಸಾಲ ಹಾಗೂ ಬ್ಯಾಂಕ್ ಆಫ್ ಬರೋಡದಿಂದ 5,000 ಕೋಟಿ ರೂ. ಸಾಲ ಪಡೆದಿತ್ತು. ಶೇ 4.25ರ ಬಡ್ಡಿ ದರದಲ್ಲಿ ಈ ಸಾಲ ಪಡೆಯಲಾಗಿತ್ತು. ನಂತರ ಆರ್​​ಬಿಐ ರೆಪೊ ದರವನ್ನು ನಿರಂತರವಾಗಿ ಹೆಚ್ಚಿಸಿದ್ದರಿಂದ ಬಡ್ಡಿ ದರ ಶೇ 6.50 ಆಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 7 February 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್