AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Airtel Recharge Price Hike: ಕರ್ನಾಟಕ ಸೇರಿ 8 ಕಡೆಗಳಲ್ಲಿ ಏರ್​ಟೆಲ್ ತಿಂಗಳ ಕನಿಷ್ಠ ರಿಚಾರ್ಜ್ ದರ ಭಾರೀ ಹೆಚ್ಚಳ

ಮುಂದಿನ ಕೆಲವೇ ದಿನಗಳಲ್ಲಿ ದೇಶದಾದ್ಯಂತ 155 ರೂ. ಪ್ಲಾನ್​ ಅನ್ನು ಏರ್​​ಟೆಲ್ ಜಾರಿಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ. 155 ರೂ.ಗಿಂತ ಕಡಿಮೆ ಮೊತ್ತದ ಎಲ್ಲ ಕರೆ ಮತ್ತು ಎಸ್​ಎಂಎಸ್ ಪ್ಲಾನ್​​ಗಳನ್ನು ರದ್ದುಗೊಳಿಸಲು ಕಂಪನಿ ಚಿಂತನೆ ನಡೆಸಿದೆ ಎನ್ನಲಾಗಿದೆ.

Airtel Recharge Price Hike: ಕರ್ನಾಟಕ ಸೇರಿ 8 ಕಡೆಗಳಲ್ಲಿ ಏರ್​ಟೆಲ್ ತಿಂಗಳ ಕನಿಷ್ಠ ರಿಚಾರ್ಜ್ ದರ ಭಾರೀ ಹೆಚ್ಚಳ
ಭಾರ್ತಿ ಏರ್​ಟೆಲ್
ಗಣಪತಿ ಶರ್ಮಾ
|

Updated on:Jan 25, 2023 | 12:37 PM

Share

ನವದೆಹಲಿ: ಕರ್ನಾಟಕ ಸೇರಿದಂತೆ 8 ವೃತ್ತಗಳಲ್ಲಿ ತಿಂಗಳ ಕನಿಷ್ಠ ರಿಚಾರ್ಜ್​​ ದರವನ್ನು ಭಾರ್ತಿ ಏರ್​​ಟೆಲ್ (Bharti Airtel) ಶೇ 57ರಷ್ಟು ಹೆಚ್ಚಳ ಮಾಡಿದ್ದು, 155 ರೂ. ನಿಗದಿ ಮಾಡಿದೆ. ಆಂಧ್ರ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಪಶ್ಚಿಮ, ಈಶಾನ್ಯ, ಜಮ್ಮು-ಕಾಶ್ಮೀರ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶ ಕನಿಷ್ಠ ರಿಚಾರ್ಜ್ ದರ ಹೆಚ್ಚಳವಾಗಿರುವ ಇತರ ವೃತ್ತಗಳಾಗಿವೆ. 99 ರೂ. ಕನಿಷ್ಠ ರಿಚಾರ್ಜ್​​ ಪ್ಲಾನ್ ಅನ್ನು ಕಂಪನಿ ಸ್ಥಗಿತಗೊಳಿಸಿದೆ. ಈ ಪ್ಲಾನ್​ನಲ್ಲಿ 200 ಎಂಬಿ ಡೇಟಾ, ಪ್ರತಿ ಸೆಕೆಂಡ್​ಗೆ 2.5 ರೂ.ನಂತೆ ಕರೆ ಸೌಲಭ್ಯ ದೊರೆಯುತ್ತಿತ್ತು. 155 ರೂ. ಪ್ಲಾನ್​ ಅನ್ನು ಆರಂಭದಲ್ಲಿ ಈ ಪ್ಲಾನ್​ ಅನ್ನು ಹರಿಯಾಣ ಮತ್ತು ಒಡಿಶಾದಲ್ಲಿ ನವೆಂಬರ್​​ನಲ್ಲೇ ಜಾರಿಗೊಳಿಸಲಾಗಿತ್ತು. ಅಲ್ಲಿ ಈಗಾಗಲೇ 155 ರೂ. ಪ್ಲಾನ್​ ಜಾರಿಯಾಗಿದ್ದು, ಅನಿಯಮಿತ ಕರೆ, 1 ಜಿಬಿ ಡೇಟಾ ಹಾಗೂ 300 ಎಸ್​ಎಂಎಸ್​​ ಸೌಲಭ್ಯ ಒದಗಿಸಲಾಗುತ್ತಿದೆ. ನಂತರ ಇತರ ಕಡೆಗಳಿಗೆ ವಿಸ್ತರಿಸಲಾಗಿದೆ ಎಂದು ಏರ್​ಟೆಲ್ ತಿಳಿಸಿದೆ.

ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವುದಕ್ಕಾಗಿ ಮೀಟರ್ಡ್ ಟಾರಿಫ್​ ಅನ್ನು ಸ್ಥಗಿತಗೊಳಿಸಿದ್ದು 155 ರೂ. ಪ್ಲಾನ್ ಪರಿಚಯಿಸಿದ್ದೇವೆ. ಇದರಲ್ಲಿ ಅನಿಯಮಿತ ಕರೆ, 1 ಜಿಬಿ ಡೇಟಾ ಹಾಗೂ 300 ಎಸ್​ಎಂಎಸ್ ದೊರೆಯಲಿದೆ. ಯಾವುದೇ ನಿರ್ಬಂಧಗಳಿಲ್ಲದೆ ಗ್ರಾಹಕರು ಈ ಪ್ಲಾನ್​ನ ಪ್ರಯೋಜನ ಪಡೆಯಬಹುದಾಗಿದೆ. ಈ ಯೋಜನೆಯಿಂದ ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬುದಾಗಿ ಭಾವಿಸುತ್ತೇವೆ ಎಂದು ಏರ್​ಟೆಲ್ ವಕ್ತಾರರು ತಿಳಿಸಿದ್ದಾರೆ.

ಮುಂದಿನ ಕೆಲವೇ ದಿನಗಳಲ್ಲಿ ದೇಶದಾದ್ಯಂತ 155 ರೂ. ಪ್ಲಾನ್​ ಅನ್ನು ಏರ್​​ಟೆಲ್ ಜಾರಿಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ. 155 ರೂ.ಗಿಂತ ಕಡಿಮೆ ಮೊತ್ತದ ಎಲ್ಲ ಕರೆ ಮತ್ತು ಎಸ್​ಎಂಎಸ್ ಪ್ಲಾನ್​​ಗಳನ್ನು ರದ್ದುಗೊಳಿಸಲು ಕಂಪನಿ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ: Airtel 5G: ಕೇವಲ 30 ದಿನಗಳಲ್ಲಿ 10 ಲಕ್ಷ ಗ್ರಾಹಕರ ಸಂಪಾದಿಸಿದ ಏರ್ಟೆಲ್ 5ಜಿ

ಹರಿಯಾಣ ಮತ್ತು ಒಡಿಶಾ ವಲಯಗಳಲ್ಲಿ 28 ದಿನಗಳ ಅವಧಿಯ ಕನಿಷ್ಠ ರಿಚಾರ್ಜ್ ದರವನ್ನು ಭಾರ್ತಿ ಏರ್​ಟೆಲ್ ನವೆಂಬರ್ 21ರಂದು ಪ್ರಾಯೋಗಿಕವಾಗಿ 155 ರೂ.ಗೆ ಹೆಚ್ಚಿಸಿತ್ತು. ಮುಂದಿನ ಕೆಲ ದಿನಗಳಲ್ಲಿ ದೇಶದಾದ್ಯಂತ ವಿಸ್ತರಿಸುವ ಸಾಧ್ಯತೆ ಇದೆ ಎಂದು ಆಗಲೇ ಕಂಪನಿಯ ಉನ್ನತ ಮೂಲಗಳು ತಿಳಿಸಿದ್ದವು. ಈ ಹಿಂದೆ ಕೂಡ ಏರ್​ಟೆಲ್ ಇಂಥದ್ದೇ ಮಾದರಿ ಅನುಸರಿಸಿತ್ತು. ಕನಿಷ್ಠ ರಿಚಾರ್ಜ್ ದರವನ್ನು ಆಯ್ದ ವಲಯಗಳಲ್ಲಿ 79 ರೂ.ನಿಂದ 99 ರೂ.ಗೆ ಹೆಚ್ಚಿಸಿತ್ತು. ಬಳಿಕ ದೇಶದಾದ್ಯಂತ ಅನುಷ್ಠಾನಗೊಳಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Wed, 25 January 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ