AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ಪವಾರ್ ಆಸ್ತಿಮೌಲ್ಯ 120 ಕೋಟಿಗೂ ಅಧಿಕ; ಮನೆ, ಕಾರು, ಬಾಂಡ್, ಠೇವಣಿ, ಇನ್ಷೂರೆನ್ಸ್ ಇತ್ಯಾದಿ ಅವರ ಆಸ್ತಿ ವಿವರ

Ajit Pawar net worth of over Rs 120 crore: ವಿಮಾನಾಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಕುಟುಂಬ 124 ಕೋಟಿ ರೂ ಮೌಲ್ಯದ ಆಸ್ತಿಪಾಸ್ತಿ ಹೊಂದಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿರುವ ಮಾಹಿತಿ ಪ್ರಕಾರ ಅಜಿತ್ ಪವಾರ್ ಬಳಿ 8.22 ಕೋಟಿ ರೂ ಚರಾಸ್ತಿ, 37.15 ಕೋಟಿ ರೂ ಚಿರಾಸ್ತಿಗಳಿವೆ. ಅವರ ಪತ್ನಿ ಬಳಿ ಇನ್ನೂ ಹೆಚ್ಚು ಮೌಲ್ಯದ ಆಸ್ತಿ ಇದೆ.

ಅಜಿತ್ ಪವಾರ್ ಆಸ್ತಿಮೌಲ್ಯ 120 ಕೋಟಿಗೂ ಅಧಿಕ; ಮನೆ, ಕಾರು, ಬಾಂಡ್, ಠೇವಣಿ, ಇನ್ಷೂರೆನ್ಸ್ ಇತ್ಯಾದಿ ಅವರ ಆಸ್ತಿ ವಿವರ
ಅಜಿತ್ ಪವಾರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 28, 2026 | 12:58 PM

Share

ಪುಣೆ, ಜನವರಿ 28: ಮಹಾರಾಷ್ಟ್ರದ ಬಾರಾಮತಿ ಏರ್ಪೋರ್ಟ್ ಬಳಿ ವಿಮಾನಾಪಘಾತದಲ್ಲಿ ದುರ್ಮರಣ ಅಪ್ಪಿದ ಉಪಮುಖ್ಯಮಂತ್ರಿ ಹಾಗೂ ಎನ್​ಸಿಪಿ ಮುಖ್ಯಸ್ಥ ಅಜಿತ್ ಪವಾರ್ (Ajit Pawar) ಅವರು ಮಹಾರಾಷ್ಟ್ರ ರಾಜಕಾರಣದ ಅತ್ಯಂತ ಪ್ರಭಾವಿ ರಾಜಕಾರಣಿಗಳ ಪೈಕಿ ಒಬ್ಬರೆಂದು ಗುರುತಾದವರು. ಮೂರು ದಶಕಗಳ ಕಾಲ ನಿರಂತರವಾಗಿ ಶಾಸಕರಾಗಿರುವ ಮತ್ತು ಮಹಾರಾಷ್ಟ್ರದಲ್ಲಿ ಅತಿಹೆಚ್ಚು ವರ್ಷ ಉಪಮುಖ್ಯಮಂತ್ರಿಯಾದ ದಾಖಲೆ ಹೊಂದಿರುವ ಅಜಿತ್ ಪವಾರ್ ಬಹಳ ಅನುಭವಿ ರಾಜಕಾರಣಿ ಎನಿಸಿದ್ದರು. ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು ಎಂದೂ ಹೇಳಲಾಗುತ್ತದೆ.

2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ (Maharashtra Assembly Elections 2024) ವೇಳೆ ಅವರು ಎಲೆಕ್ಷನ್ ಕಮಿಷನ್​ಗೆ ಸಲ್ಲಿಸಿದ ಅಫಿಡವಿಟ್​ನಲ್ಲಿ 124 ಕೋಟಿ ರೂ ಮೌಲ್ಯದ ಆಸ್ತಿಪಾಸ್ತಿ ಘೋಷಿಸಿಕೊಂಡಿದ್ದಾರೆ. ಇದು ಅವರ ಹಾಗೂ ಅವರ ಪತ್ನಿ ಸುನೇತ್ರಾ ಪವಾರ್ ಅವರಿಬ್ಬರದ್ದೂ ಸೇರಿ ಇರುವ ಆಸ್ತಿ.

ಅಜಿತ್ ಪವಾರ್ ಅವರ ಘೋಷಿತ ಆಸ್ತಿ ಹಾಗು ಮೌಲ್ಯ

  • ಚರಾಸ್ತಿ: 8.22 ಕೋಟಿ ರೂ
  • ಸ್ಥಿರಾಸ್ತಿ: 37.15 ಕೋಟಿ ರೂ

ಸುನೇತ್ರಾ ಪವಾರ್ ಅವರ ಘೋಷಿತ ಆಸ್ತಿಗಳು

  • ಚರಾಸ್ತಿ: 14.57 ಕೋಟಿ ರೂ
  • ಸ್ಥಿರಾಸ್ತಿ: 58.39 ಕೋಟಿ ರೂ

ಇದನ್ನೂ ಓದಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ, ಡಿಸಿಎಂ ಅಜಿತ್ ಪವಾರ್ ಸಾವು

ಅಜಿತ್ ಪವಾರ್ ಅವರ ಚರಾಸ್ತಿಗಳು: 1 ಟೊಯೊಟಾ ಕ್ಯಾಮ್ರಿ ಕಾರು, 1 ಹೊಂಡಾ ಸಿಆರ್​ವಿ ಕಾರು, 1 ಟ್ರಾಕ್ಟರ್, ಬೆಳ್ಳಿ ವಸ್ತುಗಳು, ಎಫ್​ಡಿ, ಷೇರು, ಬಾಂಡು ಇತ್ಯಾದಿ ಇವೆ.

14.12 ಲಕ್ಷ ರೂ ಕ್ಯಾಷ್, ವಿವಿಧ ಬ್ಯಾಂಕ್ ಅಕೌಂಟ್​ಗಳಲ್ಲಿ 6.81 ಕೋಟಿ ರೂ ಹಣ. ಬಾಂಡ್, ಡಿಬಂಚರ್, ಷೇರು ಇತ್ಯಾದಿಗಳಲ್ಲಿ 55 ಲಕ್ಷ ರೂಗೂ ಅಧಿಕದಷ್ಟು ಹೂಡಿಕೆ. ಒಂದು ಕೋಟಿ ರೂಗೂ ಅಧಿಕ ಮೌಲ್ಯದ ಎಲ್​ಐಸಿ ಪಾಲಿಸಿ ಮಾಡಿಸಿದ್ದರು.

ಅಜಿತ್ ಪವಾರ್ ಪತ್ನಿ ಹಾಗೂ ರಾಜ್ಯ ಸಭಾ ಸದಸ್ಯೆಯಾದ ಸುನೇತ್ರಾ ಪವಾರ್ ಅವರು 44 ಲಕ್ಷ ರೂಗೂ ಅಧಿಕ ಮೌಲ್ಯದ ಎಲ್​​ಐಸಿ ಪಾಲಿಸಿಗಳನ್ನು ಹೊಂದಿದ್ದಾರೆ. ಸುನೇತ್ರಾ ಹೆಸರಿನಲ್ಲಿ ಸ್ಥಿರಾಸ್ತಿಗಳಿವೆ. ಈ ಇಬ್ಬರ ಹೆಸರಲ್ಲಿ ಇರುವ ಘೋಷಿತ ಆಸ್ತಿಪಾಸ್ತಿಗಳ ಒಟ್ಟು ಮೌಲ್ಯ 124 ಕೋಟಿ ರೂಗೂ ಅಧಿಕ ಎನ್ನಲಾಗಿದೆ.

ಅಜಿತ್ ಪವಾರ್ ಅಪಘಾತದಿಂದ ದುರ್ಮರಣ

ಅಜಿತ್ ಪವಾರ್ ಅವರು ಮಹಾರಾಷ್ಟ್ರದ ರಾಜಕೀಯ ಭೀಷ್ಮ ಎಂದು ಕರೆಯಲಾಗುವ ಶರದ್ ಪವಾರ್ ಅವರ ಅಣ್ಣ ಮಗ. 1982ರಲ್ಲಿ ಸಕ್ಕರೆ ಸಹಕಾರ ರಂಗಕ್ಕೆ ಪದಾರ್ಪಣೆ ಮಾಡುತ್ತಾರೆ. 1991ರಲ್ಲಿ ಬಾರಾಮತಿ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಶಾಸಕರಾಗುತ್ತಾರೆ. ಆ ಬಳಿಕ ಸತತವಾಗಿ ಅದೇ ಕ್ಷೇತ್ರದಲ್ಲಿ ಗೆಲ್ಲುತ್ತಾ ಬಂದಿದ್ದರು. ವಿಧಿಯಾಟವೆಂದರೆ, ತಮ್ಮ ಸ್ವಕ್ಷೇತ್ರದಲ್ಲೇ ಅವರು ಸ್ವರ್ಗಸ್ಥರಾಗಿದ್ದಾರೆ.

ಇದನ್ನೂ ಓದಿ: ಲಿಯರ್ ಜೆಟ್ 45 ತುಂಬಾ ಸುರಕ್ಷಿತ ವಿಮಾನ, ಪತನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಜ್ಞರು

ಮುಂಬೈನಿಂದ ಬಾರಾಮತಿಗೆ ಚಾರ್ಟರ್ಡ್ ಫ್ಲೈಟ್​ನಲ್ಲಿ ಆಗಮಿಸಿದ್ದರು. ತಾಂತ್ರಿಕ ದೋಷದಿಂದ ಬಾರಾಮತಿ ಏರ್​ಪೋರ್ಟ್​ನಲ್ಲಿ ವಿಮಾನ ಅಪಘಾತಗೊಂಡಿದೆ. ಅಜಿತ್ ಪವಾರ್, ಪೈಲಟ್ ಸೇರಿ ಅದರಲ್ಲಿದ್ದ ಎಲ್ಲಾ ಐವರೂ ನಿಧನರಾಗಿದ್ದಾರೆ. ಅಜಿತ್ ಪವಾರ್ ತಮ್ಮ ಪತ್ನಿ ಸುನೇತ್ರಾ ಹಾಗೂ ಇಬ್ಬರು ಮಕ್ಕಳಾದ ಪಾರ್ಥ್ ಮತ್ತು ಜಯ್ ಪವಾರ್ ಅವರನ್ನು ಅಗಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!