ಅಕ್ಷಯ ತೃತೀಯ ದಿನದಂದು ಚಿನ್ನವಲ್ಲದೇ ಈ ನಾಲ್ಕು ವಸ್ತುಗಳೂ ಕೂಡ ಶುಭಕರ; ಸಾಧ್ಯವಾದರೆ ಇವತ್ತೇ ಖರೀದಿಸಿ

Good to buy these items on Akshaya Tritiya day: ಅಕ್ಷಯ ತೃತೀಯ ದಿನದಂದು ಚಿನ್ನವನ್ನು ಖರೀದಿಸಿದರೆ ಸಂಪತ್ತು ತುಂಬಿ ಬರುತ್ತದೆ ಎಂಬ ನಂಬಿಕೆ ಹಿಂದೂ ಧಾರ್ಮಿಕರಲ್ಲಿ ಇದೆ. ಹಾಗೆಯೇ, ಒಂದು ವರ್ಷದಲ್ಲಿ ಇರುವ ಅತ್ಯಂತ ಶುಭ ದಿನಗಳಲ್ಲಿ ಅಕ್ಷಯ ತೃತೀಯ ಪ್ರಧಾನವಾದುದು. ಇಂದು ಹೊಸ ಬಿಸಿನೆಸ್ ಅಥವಾ ಕೆಲಸ ಆರಂಭಿಸುವುದು ಶುಭಕರ ಎಂದು ಹೇಳಲಾಗುತ್ತದೆ. ಚಿನ್ನ ಮಾತ್ರವಲ್ಲದೇ ಇನ್ನೂ ನಾಲ್ಕು ವಸ್ತುಗಳನ್ನು ಶುಭವೆಂದು ಪರಿಗಣಿಸಲಾಗಿದೆ. ಚಿನ್ನ ಸೇರಿ ಈ ಐದು ವಸ್ತುಗಳನ್ನು ಅಕ್ಷಯ ತೃತೀಯ ದಿನದಂದು ಖರೀದಿಸುವುದು ಒಳ್ಳೆಯದು.

ಅಕ್ಷಯ ತೃತೀಯ ದಿನದಂದು ಚಿನ್ನವಲ್ಲದೇ ಈ ನಾಲ್ಕು ವಸ್ತುಗಳೂ ಕೂಡ ಶುಭಕರ; ಸಾಧ್ಯವಾದರೆ ಇವತ್ತೇ ಖರೀದಿಸಿ
ಮಣ್ಣಿನ ಕುಡಿಕೆ

Updated on: May 10, 2024 | 11:59 AM

ಇವತ್ತು ಈ ವರ್ಷದ ಅಕ್ಷಯ ತೃತೀಯ (Akshaya Tritiya) ದಿನ. ಭಾರತೀಯರಿಗೆ, ಅದರಲ್ಲೂ ಹಿಂದೂಗಳಿಗೆ ಬಹಳ ಶುಭ ದಿನವೆಂದು ಪರಿಗಣಿಸಲಾಗುತ್ತದೆ. ಹೊಸ ಕಾರ್ಯ ಆರಂಭಿಸಲು ಇದು ಶುಭ ದಿನ. ನೀವು ಬಿಸಿನೆಸ್ ಆರಂಭಿಸಬಹುದು. ಈ ದಿನದಂದು ಚಿನ್ನವನ್ನು ಖರೀದಿಸಿದರೆ ದಂತಕಥೆಯಲ್ಲಿರುವ ಅಕ್ಷಯ ಪಾತ್ರೆಯ ರೀತಿ ಸಂಪತ್ತು ವೃದ್ಧಿಸುತ್ತಲೇ ಇರುತ್ತದೆ. ಚಿನ್ನವನ್ನು ಖರೀದಿಸಿದ ಬಳಿಕ ಅದನ್ನು ಲಕ್ಷ್ಮೀ ಮತ್ತು ಕುಬೇರನ ಫೋಟೋಗಳ ಮುಂದಿಟ್ಟು ಪೂಜಿಸುತ್ತಾರೆ. ಮನೆಯಲ್ಲಿ ಸಮೃದ್ಧಿಯಾಗುತ್ತದೆ (prosperity) ಎನ್ನುವ ನಂಬಿಕೆ ಇದೆ. ಅಕ್ಷಯ ತೃತೀಯ ದಿನದಂದು ಚಿನ್ನವಲ್ಲದೇ ಇನ್ನೂ ನಾಲ್ಕು ವಸ್ತುಗಳನ್ನು ಖರೀದಿಸುವುದು ಶುಭಕರ ಎಂಬ ನಂಬಿಕೆ ಇದೆ.

ಅಕ್ಷಯ ತೃತೀಯ ದಿನದಂದು ಮನೆ ಖರೀದಿಸಿ…

ಅಕ್ಷಯ ತೃತೀಯ ದಿನದಂದು ಹೊಸ ಮನೆ ಖರೀದಿಸುವುದು ಶುಭ ಎನ್ನಲಾಗಿದೆ. ಮನೆ ಎಂಬುದು ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಆಶ್ರಯವಾಗಿರುತ್ತದೆ. ಈ ಆಶ್ರಯ ಶಾಶ್ವತವಾಗಿ ನಿಮಗೆ ಉಳಿಯುತ್ತದೆ ಎನ್ನುವ ನಂಬಿಕೆ ಇದೆ.

ಇದನ್ನೂ ಓದಿ: ಭೌತಿಕ ಚಿನ್ನವಾ, ಬಾಂಡ್​ಗಳಾ? ಅಕ್ಷಯ ತೃತೀಯ ದಿನದಂದು ಬಂಗಾರದಂಥ ತೀರ್ಮಾನ ಕೈಗೊಳ್ಳಿ

ಅಕ್ಷಯ ತೃತೀಯ ದಿನದಂದು ವಾಹನ ಖರೀದಿಸುವುದು ಶುಭ

ನೀವು ವಾಹನ ಖರೀದಿಸುವ ಇರಾದೆಯಲ್ಲಿದ್ದರೆ ಅಕ್ಷಯ ತೃತೀಯ ದಿನದಂದು ಆ ಕೆಲಸ ಮಾಡಿ. ಒಂದು ವರ್ಷದಲ್ಲಿ ಇರುವ ಅತ್ಯಂತ ಶುಭ ಘಳಿಗೆಗಳಲ್ಲಿ ಅಕ್ಷಯ ತೃತೀಯ ಒಂದು. ಆ ದಿನದಂದು ಹೊಸ ವಾಹನ ಖರೀದಿಸುವುದು ಶುಭಕರ ಎನ್ನಲಾಗಿದೆ.

ಅಕ್ಷಯ ತೃತೀಯ ದಿನದಂದು ಬೆಳ್ಳಿ ಖರೀದಿಸಿ….

ಚಿನ್ನದಂತೆ ಬೆಳ್ಳಿಯೂ ಕೂಡ ಲಕ್ಷ್ಮೀ ದೇವರ ಪ್ರತೀಕವಾಗಿದೆ. ಬೆಳ್ಳಿಯನ್ನು ಮನೆಗೆ ತಂದರೆ ಲಕ್ಷ್ಮೀಯನ್ನು ಮನೆಗೆ ಆಹ್ವಾನಿಸಿದಂತೆ. ಸಂಪತ್ತಿನ ಅಧಿದೇವತೆಯಾದ ಲಕ್ಷ್ಮೀ ಪ್ರಸನ್ನಳಾಗಿ ನಿಮ್ಮ ಮನೆಯಲ್ಲಿ ನೆಲಸಿ ಸಂಪತ್ತು ವೃದ್ಧಿಸುವಂತೆ ಮಾಡುತ್ತಾಳೆ. ಇಂದು ಬೆಳ್ಳಿ ಖರೀದಿಸಿ ತಂದು ಅದನ್ನು ಲಕ್ಷ್ಮೀ ದೇವರ ಪಟದ ಬಳಿ ಇಟ್ಟು ಪೂಜೆ ಮಾಡಿ. ಬಳಿಕ ನೀವು ಹಣ ಇರಿಸುವ ಸ್ಥಳದ ಬಳಿ ಬೆಳ್ಳಿಯನ್ನು ಇಟ್ಟುಕೊಂಡಿರಿ.

ಇದನ್ನೂ ಓದಿ: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು?

ಮಣ್ಣಿನ ಕುಡಿಕೆ ಖರೀದಿಸುವುದು ಒಳ್ಳೆಯದು…

ಮಣ್ಣಿನ ಕುಡಿಕೆಯು ಹಣ ಮತ್ತು ಸಂಪತ್ತನ್ನು ಪ್ರತಿನಿಧಿಸುತ್ತದೆ ಎಂಬ ನಂಬಿಕೆ ಇದೆ. ಹೀಆಗಿ, ಅಕ್ಷಯ ತೃತೀಯ ದಿನದಂದು ಒಂದು ಪುಟ್ಟ ಮಡಿಕೆ ಖರೀದಿಸಿ ತಂದು, ಅದಕ್ಕೆ ಪೂಜೆ ಮಾಡಿ ಒಂದಿಡಿ ಅಕ್ಷತೆ ಕಾಳು ಅದರೊಳಗೆ ಹಾಕಿ ಒಂದು ವರ್ಷದವರೆಗೂ ಇಟ್ಟಿರಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us