AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಸೆ.27ರ ಭಾರತ್​ ಬಂದ್​ಗೆ ಅಖಿಲ ಭಾರತ ಬ್ಯಾಂಕ್​ ಅಧಿಕಾರಿಗಳ ಒಕ್ಕೂಟದ ಬೆಂಬಲ

ಸಂಯುಕ್ತ ಕಿಸಾನ್ ಮೋರ್ಚಾದಿಂದ ಸೆ. 27ರಂದು ಕರೆ ನೀಡಿರುವ ಭಾರತ್​ ಬಂದ್​ಗೆ ಬೆಂಬಲ ನೀಡುವುದಾಗಿ ಅಖಿಲ ಭಾರತ ಬ್ಯಾಂಕ್​ ಅಧಿಕಾರಿಗಳ ಒಕ್ಕೂಟವು ಬೆಂಬಲ ಘೋಷಣೆ ಮಾಡಿದೆ.

Bharat Bandh: ಸೆ.27ರ ಭಾರತ್​ ಬಂದ್​ಗೆ ಅಖಿಲ ಭಾರತ ಬ್ಯಾಂಕ್​ ಅಧಿಕಾರಿಗಳ ಒಕ್ಕೂಟದ ಬೆಂಬಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 23, 2021 | 12:01 AM

Share

ಸಂಯುಕ್ತ ಕಿಸಾನ್ ಮೋರ್ಚಾದಿಂದ ಸೆಪ್ಟೆಂಬರ್ 27ಕ್ಕೆ ಕರೆ ನೀಡಿರುವ ‘ಭಾರತ್ ಬಂದ್’ಗೆ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟವು (AIBOC) ಬುಧವಾರ ತನ್ನ ಬೆಂಬಲವನ್ನು ವಿಸ್ತರಿಸಿದೆ. ತಮ್ಮ ಬೇಡಿಕೆಗಳ ಕುರಿತು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಮತ್ತೆ ಮಾತುಕತೆ ನಡೆಸಲು ಮತ್ತು ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಮತ್ತೊಮ್ಮೆ ಆಲೋಚಿಸಲು ಸರ್ಕಾರವನ್ನು ಎಐಬಿಒಸಿ ವಿನಂತಿಸಿದೆ.

ದೇಶದಾದ್ಯಂತ ರೈತರ ಪ್ರತಿಭಟನಾ ಕ್ರಮಗಳಿಗೆ ಸೋಮವಾರ ಎಐಬಿಒಸಿ ಅಂಗಸಂಸ್ಥೆಗಳು ಮತ್ತು ರಾಜ್ಯ ಘಟಕಗಳು ಒಗ್ಗಟ್ಟಿನಿಂದ ಸೇರುತ್ತವೆ ಎಂದು ಒಕ್ಕೂಟವು ಪ್ರಕಟಣೆಯಲ್ಲಿ ತಿಳಿಸಿದೆ. ಎನ್‌ಎಸ್‌ಎಸ್ ಭೂಮಿ ಮತ್ತು ಜಾನುವಾರುಗಳ ಹಿಡುವಳಿಗಳು ಮತ್ತು ಕೃಷಿ ಕುಟುಂಬಗಳ ಪರಿಸ್ಥಿತಿ ಮೌಲ್ಯಮಾಪನ, ಈ ತಿಂಗಳ ಆರಂಭದಲ್ಲಿ ಬಿಡುಗಡೆ ಮಾಡಲಾದ 2018-19ರ ವರದಿಯನ್ನು ಉಲ್ಲೇಖಿಸಿ, 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸರ್ಕಾರದ ಗುರಿಯು ದೂರದ ಕನಸಾಗಿ ಕಾಣುತ್ತದೆ ಎಂದು ಒಕ್ಕೂಟ ಹೇಳಿದೆ.

ಪ್ರತಿ ಕೃಷಿ ಕುಟುಂಬದ ಸರಾಸರಿ ಸಾಲವು 2013ರಲ್ಲಿ 47,000 ರೂಪಾಯಿಯಿಂದ 2018ರಲ್ಲಿ ರೂ. 74,121ಕ್ಕೆ ಹೆಚ್ಚಾಗಿದೆ. ಕೃಷಿ ಕುಟುಂಬಗಳ ಹೆಚ್ಚುತ್ತಿರುವ ಋಣಭಾರವು ಕೃಷಿ ಸಂಕಷ್ಟವನ್ನು ಪ್ರತಿಬಿಂಬಿಸುತ್ತದೆ ಎಂದು ಅದು ಹೇಳಿದೆ.

(All India Bank Officers Confederation Announced Support To September 27th Bharath Bandh)

ಇದನ್ನೂ ಓದಿ: Farmer protests ನಾಳೆ ಹರ್ಯಾಣದಲ್ಲಿ ರೈತರ ಪ್ರತಿಭಟನೆ; ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​