Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ ಗ್ರೂಪ್ ವಿರುದ್ಧ ಹಿಂಡನ್​ಬರ್ಗ್ ಮಾಡಿರುವ ಆರೋಪ ಆಧಾರರಹಿತ; ಸುಪ್ರೀಂ ಕೋರ್ಟ್​ಗೆ ಸೆಬಿ

ಅದಾನಿ ಸಮೂಹದ ವಿರುದ್ಧ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪ ಆಧಾರರಹಿರ ಎಂದು ಸುಪ್ರೀಂ ಕೋರ್ಟ್​ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸೋಮವಾರ ತಿಳಿಸಿದೆ.

ಅದಾನಿ ಗ್ರೂಪ್ ವಿರುದ್ಧ ಹಿಂಡನ್​ಬರ್ಗ್ ಮಾಡಿರುವ ಆರೋಪ ಆಧಾರರಹಿತ; ಸುಪ್ರೀಂ ಕೋರ್ಟ್​ಗೆ ಸೆಬಿ
ಅದಾನಿ ಗ್ರೂಪ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: May 15, 2023 | 10:22 PM

ನವದೆಹಲಿ: ಅದಾನಿ ಸಮೂಹದ (Adani Group) ವಿರುದ್ಧ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪ ಆಧಾರರಹಿರ ಎಂದು ಸುಪ್ರೀಂ ಕೋರ್ಟ್​ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಸೋಮವಾರ ತಿಳಿಸಿದೆ. ಈ ವಿಚಾರವಾಗಿ ವಕೀಲ, ಆರ್​ಟಿಐ ಹೋರಾಟಗಾರ ಶ್ಯಾಮ್ ಕುಮಾರ್ ವಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಹಿಂಡನ್‌ಬರ್ಗ್ ವರದಿಯಲ್ಲಿ ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಆರೋಪಗಳು ವಾಸ್ತವವಾಗಿ ಆಧಾರರಹಿತ ಎಂದು ಸೆಬಿ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅದಾನಿ ಸಂಘಟನೆಯ ವಿರುದ್ಧ ಹಿಂಡನ್‌ಬರ್ಗ್ ವರದಿಯಲ್ಲಿ ಮಾಡಿರುವ ಆರೋಪದ ಬಗ್ಗೆ ತನಿಖೆಯಲ್ಲಿ ಯಾವುದೇ ವಾಸ್ತವವನ್ನು ಕಂಡುಹಿಡಿಯಲಾಗಲಿಲ್ಲ ಎಂದು ಸೆಬಿಯ ಅಫಿಡವಿಟ್ ಹೇಳಿದೆ ಎಂದು ಅವರು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅದಾನಿ ಸಮೂಹದ ವಿರುದ್ಧ ನಡೆಸುತ್ತಿರುವ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಸಮಯಾವಕಾಶ ಬೇಕು ಎಂದು ಸೆಬಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಜತೆಗೆ, 2016ರಿಂದಲೂ ತಾನು ಅದಾನಿ ಸಮೂಹದ ಕುರಿತು ತನಿಖೆ ನಡೆಸುತ್ತಿದ್ದೇನೆ ಎಂಬುದು ವಾಸ್ತವಕ್ಕೆ ದೂರವಾದುದು ಎಂದು ಹೇಳಿದೆ.

ಇದನ್ನೂ ಓದಿ: Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಹಿಂಡನ್‌ಬರ್ಗ್ ರಿಸರ್ಚ್‌ನ ಆರೋಪಗಳ ಬಗ್ಗೆ ತನಿಖೆಗೆ ಕೋರಿರುವ ಕೆಲವು ಅರ್ಜಿದಾರರು ಆರೋಪಿಸಿರುವಂತೆ, 2016 ರಿಂದ ಯಾವುದೇ ಅದಾನಿ ಗ್ರೂಪ್ ಕಂಪನಿಗಳನ್ನು ತನಿಖೆ ಮಾಡಿಲ್ಲ ಎಂದು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಹೇಳಿದೆ.

ಅದಾನಿ ಸಮೂಹವು ಷೇರುಗಳ ಮೌಲ್ಯ ತಿರುಚುವಿಕೆಯಲ್ಲಿ ತೊಡಗಿಕೊಂಡಿರುವುದಲ್ಲದೆ ದಶಕಗಳಿಂದ ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಹಿಂಡನ್​ಬರ್ಗ್ ರಿಸರ್ಚ್ ಆರೋಪಿಸಿತ್ತು. ಈ ವಿಚಾರವಾಗಿ ಹಿಂಡನ್​ಬರ್ಗ್ ರಿಸರ್ಚ್ ಸುಮಾರು ಎರಡು ವರ್ಷಗಳಿಂದ ತನಿಖೆ ನಡೆಸುತ್ತಿತ್ತು ಎನ್ನಲಾಗಿತ್ತು. ಈ ಆರೋಪ ದೇಶದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!