AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ ಗ್ರೂಪ್ ವಿರುದ್ಧ ಹಿಂಡನ್​ಬರ್ಗ್ ಮಾಡಿರುವ ಆರೋಪ ಆಧಾರರಹಿತ; ಸುಪ್ರೀಂ ಕೋರ್ಟ್​ಗೆ ಸೆಬಿ

ಅದಾನಿ ಸಮೂಹದ ವಿರುದ್ಧ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪ ಆಧಾರರಹಿರ ಎಂದು ಸುಪ್ರೀಂ ಕೋರ್ಟ್​ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸೋಮವಾರ ತಿಳಿಸಿದೆ.

ಅದಾನಿ ಗ್ರೂಪ್ ವಿರುದ್ಧ ಹಿಂಡನ್​ಬರ್ಗ್ ಮಾಡಿರುವ ಆರೋಪ ಆಧಾರರಹಿತ; ಸುಪ್ರೀಂ ಕೋರ್ಟ್​ಗೆ ಸೆಬಿ
ಅದಾನಿ ಗ್ರೂಪ್ (ಸಾಂದರ್ಭಿಕ ಚಿತ್ರ)
TV9 Web
| Updated By: Ganapathi Sharma|

Updated on: May 15, 2023 | 10:22 PM

Share

ನವದೆಹಲಿ: ಅದಾನಿ ಸಮೂಹದ (Adani Group) ವಿರುದ್ಧ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪ ಆಧಾರರಹಿರ ಎಂದು ಸುಪ್ರೀಂ ಕೋರ್ಟ್​ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಸೋಮವಾರ ತಿಳಿಸಿದೆ. ಈ ವಿಚಾರವಾಗಿ ವಕೀಲ, ಆರ್​ಟಿಐ ಹೋರಾಟಗಾರ ಶ್ಯಾಮ್ ಕುಮಾರ್ ವಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಹಿಂಡನ್‌ಬರ್ಗ್ ವರದಿಯಲ್ಲಿ ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಆರೋಪಗಳು ವಾಸ್ತವವಾಗಿ ಆಧಾರರಹಿತ ಎಂದು ಸೆಬಿ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅದಾನಿ ಸಂಘಟನೆಯ ವಿರುದ್ಧ ಹಿಂಡನ್‌ಬರ್ಗ್ ವರದಿಯಲ್ಲಿ ಮಾಡಿರುವ ಆರೋಪದ ಬಗ್ಗೆ ತನಿಖೆಯಲ್ಲಿ ಯಾವುದೇ ವಾಸ್ತವವನ್ನು ಕಂಡುಹಿಡಿಯಲಾಗಲಿಲ್ಲ ಎಂದು ಸೆಬಿಯ ಅಫಿಡವಿಟ್ ಹೇಳಿದೆ ಎಂದು ಅವರು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅದಾನಿ ಸಮೂಹದ ವಿರುದ್ಧ ನಡೆಸುತ್ತಿರುವ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಸಮಯಾವಕಾಶ ಬೇಕು ಎಂದು ಸೆಬಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಜತೆಗೆ, 2016ರಿಂದಲೂ ತಾನು ಅದಾನಿ ಸಮೂಹದ ಕುರಿತು ತನಿಖೆ ನಡೆಸುತ್ತಿದ್ದೇನೆ ಎಂಬುದು ವಾಸ್ತವಕ್ಕೆ ದೂರವಾದುದು ಎಂದು ಹೇಳಿದೆ.

ಇದನ್ನೂ ಓದಿ: Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಹಿಂಡನ್‌ಬರ್ಗ್ ರಿಸರ್ಚ್‌ನ ಆರೋಪಗಳ ಬಗ್ಗೆ ತನಿಖೆಗೆ ಕೋರಿರುವ ಕೆಲವು ಅರ್ಜಿದಾರರು ಆರೋಪಿಸಿರುವಂತೆ, 2016 ರಿಂದ ಯಾವುದೇ ಅದಾನಿ ಗ್ರೂಪ್ ಕಂಪನಿಗಳನ್ನು ತನಿಖೆ ಮಾಡಿಲ್ಲ ಎಂದು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಹೇಳಿದೆ.

ಅದಾನಿ ಸಮೂಹವು ಷೇರುಗಳ ಮೌಲ್ಯ ತಿರುಚುವಿಕೆಯಲ್ಲಿ ತೊಡಗಿಕೊಂಡಿರುವುದಲ್ಲದೆ ದಶಕಗಳಿಂದ ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಹಿಂಡನ್​ಬರ್ಗ್ ರಿಸರ್ಚ್ ಆರೋಪಿಸಿತ್ತು. ಈ ವಿಚಾರವಾಗಿ ಹಿಂಡನ್​ಬರ್ಗ್ ರಿಸರ್ಚ್ ಸುಮಾರು ಎರಡು ವರ್ಷಗಳಿಂದ ತನಿಖೆ ನಡೆಸುತ್ತಿತ್ತು ಎನ್ನಲಾಗಿತ್ತು. ಈ ಆರೋಪ ದೇಶದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ