AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ ಗ್ರೂಪ್ ವಿರುದ್ಧ ಹಿಂಡನ್​ಬರ್ಗ್ ಮಾಡಿರುವ ಆರೋಪ ಆಧಾರರಹಿತ; ಸುಪ್ರೀಂ ಕೋರ್ಟ್​ಗೆ ಸೆಬಿ

ಅದಾನಿ ಸಮೂಹದ ವಿರುದ್ಧ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪ ಆಧಾರರಹಿರ ಎಂದು ಸುಪ್ರೀಂ ಕೋರ್ಟ್​ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸೋಮವಾರ ತಿಳಿಸಿದೆ.

ಅದಾನಿ ಗ್ರೂಪ್ ವಿರುದ್ಧ ಹಿಂಡನ್​ಬರ್ಗ್ ಮಾಡಿರುವ ಆರೋಪ ಆಧಾರರಹಿತ; ಸುಪ್ರೀಂ ಕೋರ್ಟ್​ಗೆ ಸೆಬಿ
ಅದಾನಿ ಗ್ರೂಪ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: May 15, 2023 | 10:22 PM

Share

ನವದೆಹಲಿ: ಅದಾನಿ ಸಮೂಹದ (Adani Group) ವಿರುದ್ಧ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪ ಆಧಾರರಹಿರ ಎಂದು ಸುಪ್ರೀಂ ಕೋರ್ಟ್​ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಸೋಮವಾರ ತಿಳಿಸಿದೆ. ಈ ವಿಚಾರವಾಗಿ ವಕೀಲ, ಆರ್​ಟಿಐ ಹೋರಾಟಗಾರ ಶ್ಯಾಮ್ ಕುಮಾರ್ ವಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಹಿಂಡನ್‌ಬರ್ಗ್ ವರದಿಯಲ್ಲಿ ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಆರೋಪಗಳು ವಾಸ್ತವವಾಗಿ ಆಧಾರರಹಿತ ಎಂದು ಸೆಬಿ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅದಾನಿ ಸಂಘಟನೆಯ ವಿರುದ್ಧ ಹಿಂಡನ್‌ಬರ್ಗ್ ವರದಿಯಲ್ಲಿ ಮಾಡಿರುವ ಆರೋಪದ ಬಗ್ಗೆ ತನಿಖೆಯಲ್ಲಿ ಯಾವುದೇ ವಾಸ್ತವವನ್ನು ಕಂಡುಹಿಡಿಯಲಾಗಲಿಲ್ಲ ಎಂದು ಸೆಬಿಯ ಅಫಿಡವಿಟ್ ಹೇಳಿದೆ ಎಂದು ಅವರು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅದಾನಿ ಸಮೂಹದ ವಿರುದ್ಧ ನಡೆಸುತ್ತಿರುವ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಸಮಯಾವಕಾಶ ಬೇಕು ಎಂದು ಸೆಬಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಜತೆಗೆ, 2016ರಿಂದಲೂ ತಾನು ಅದಾನಿ ಸಮೂಹದ ಕುರಿತು ತನಿಖೆ ನಡೆಸುತ್ತಿದ್ದೇನೆ ಎಂಬುದು ವಾಸ್ತವಕ್ಕೆ ದೂರವಾದುದು ಎಂದು ಹೇಳಿದೆ.

ಇದನ್ನೂ ಓದಿ: Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಹಿಂಡನ್‌ಬರ್ಗ್ ರಿಸರ್ಚ್‌ನ ಆರೋಪಗಳ ಬಗ್ಗೆ ತನಿಖೆಗೆ ಕೋರಿರುವ ಕೆಲವು ಅರ್ಜಿದಾರರು ಆರೋಪಿಸಿರುವಂತೆ, 2016 ರಿಂದ ಯಾವುದೇ ಅದಾನಿ ಗ್ರೂಪ್ ಕಂಪನಿಗಳನ್ನು ತನಿಖೆ ಮಾಡಿಲ್ಲ ಎಂದು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಹೇಳಿದೆ.

ಅದಾನಿ ಸಮೂಹವು ಷೇರುಗಳ ಮೌಲ್ಯ ತಿರುಚುವಿಕೆಯಲ್ಲಿ ತೊಡಗಿಕೊಂಡಿರುವುದಲ್ಲದೆ ದಶಕಗಳಿಂದ ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಹಿಂಡನ್​ಬರ್ಗ್ ರಿಸರ್ಚ್ ಆರೋಪಿಸಿತ್ತು. ಈ ವಿಚಾರವಾಗಿ ಹಿಂಡನ್​ಬರ್ಗ್ ರಿಸರ್ಚ್ ಸುಮಾರು ಎರಡು ವರ್ಷಗಳಿಂದ ತನಿಖೆ ನಡೆಸುತ್ತಿತ್ತು ಎನ್ನಲಾಗಿತ್ತು. ಈ ಆರೋಪ ದೇಶದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ