AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ ಗ್ರೂಪ್ ವಿರುದ್ಧ ಹಿಂಡನ್​ಬರ್ಗ್ ಮಾಡಿರುವ ಆರೋಪ ಆಧಾರರಹಿತ; ಸುಪ್ರೀಂ ಕೋರ್ಟ್​ಗೆ ಸೆಬಿ

ಅದಾನಿ ಸಮೂಹದ ವಿರುದ್ಧ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪ ಆಧಾರರಹಿರ ಎಂದು ಸುಪ್ರೀಂ ಕೋರ್ಟ್​ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸೋಮವಾರ ತಿಳಿಸಿದೆ.

ಅದಾನಿ ಗ್ರೂಪ್ ವಿರುದ್ಧ ಹಿಂಡನ್​ಬರ್ಗ್ ಮಾಡಿರುವ ಆರೋಪ ಆಧಾರರಹಿತ; ಸುಪ್ರೀಂ ಕೋರ್ಟ್​ಗೆ ಸೆಬಿ
ಅದಾನಿ ಗ್ರೂಪ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: May 15, 2023 | 10:22 PM

Share

ನವದೆಹಲಿ: ಅದಾನಿ ಸಮೂಹದ (Adani Group) ವಿರುದ್ಧ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪ ಆಧಾರರಹಿರ ಎಂದು ಸುಪ್ರೀಂ ಕೋರ್ಟ್​ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಸೋಮವಾರ ತಿಳಿಸಿದೆ. ಈ ವಿಚಾರವಾಗಿ ವಕೀಲ, ಆರ್​ಟಿಐ ಹೋರಾಟಗಾರ ಶ್ಯಾಮ್ ಕುಮಾರ್ ವಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಹಿಂಡನ್‌ಬರ್ಗ್ ವರದಿಯಲ್ಲಿ ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಆರೋಪಗಳು ವಾಸ್ತವವಾಗಿ ಆಧಾರರಹಿತ ಎಂದು ಸೆಬಿ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅದಾನಿ ಸಂಘಟನೆಯ ವಿರುದ್ಧ ಹಿಂಡನ್‌ಬರ್ಗ್ ವರದಿಯಲ್ಲಿ ಮಾಡಿರುವ ಆರೋಪದ ಬಗ್ಗೆ ತನಿಖೆಯಲ್ಲಿ ಯಾವುದೇ ವಾಸ್ತವವನ್ನು ಕಂಡುಹಿಡಿಯಲಾಗಲಿಲ್ಲ ಎಂದು ಸೆಬಿಯ ಅಫಿಡವಿಟ್ ಹೇಳಿದೆ ಎಂದು ಅವರು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅದಾನಿ ಸಮೂಹದ ವಿರುದ್ಧ ನಡೆಸುತ್ತಿರುವ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಸಮಯಾವಕಾಶ ಬೇಕು ಎಂದು ಸೆಬಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಜತೆಗೆ, 2016ರಿಂದಲೂ ತಾನು ಅದಾನಿ ಸಮೂಹದ ಕುರಿತು ತನಿಖೆ ನಡೆಸುತ್ತಿದ್ದೇನೆ ಎಂಬುದು ವಾಸ್ತವಕ್ಕೆ ದೂರವಾದುದು ಎಂದು ಹೇಳಿದೆ.

ಇದನ್ನೂ ಓದಿ: Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಹಿಂಡನ್‌ಬರ್ಗ್ ರಿಸರ್ಚ್‌ನ ಆರೋಪಗಳ ಬಗ್ಗೆ ತನಿಖೆಗೆ ಕೋರಿರುವ ಕೆಲವು ಅರ್ಜಿದಾರರು ಆರೋಪಿಸಿರುವಂತೆ, 2016 ರಿಂದ ಯಾವುದೇ ಅದಾನಿ ಗ್ರೂಪ್ ಕಂಪನಿಗಳನ್ನು ತನಿಖೆ ಮಾಡಿಲ್ಲ ಎಂದು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಹೇಳಿದೆ.

ಅದಾನಿ ಸಮೂಹವು ಷೇರುಗಳ ಮೌಲ್ಯ ತಿರುಚುವಿಕೆಯಲ್ಲಿ ತೊಡಗಿಕೊಂಡಿರುವುದಲ್ಲದೆ ದಶಕಗಳಿಂದ ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಹಿಂಡನ್​ಬರ್ಗ್ ರಿಸರ್ಚ್ ಆರೋಪಿಸಿತ್ತು. ಈ ವಿಚಾರವಾಗಿ ಹಿಂಡನ್​ಬರ್ಗ್ ರಿಸರ್ಚ್ ಸುಮಾರು ಎರಡು ವರ್ಷಗಳಿಂದ ತನಿಖೆ ನಡೆಸುತ್ತಿತ್ತು ಎನ್ನಲಾಗಿತ್ತು. ಈ ಆರೋಪ ದೇಶದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್