AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google: ಗೂಗಲ್​ನಿಂದ ಉದ್ಯೋಗಿಗಳಿಗೆ 1,21,000 ರೂಪಾಯಿ ಒಂದು ಸಲದ ನಗದು ಬೋನಸ್ ಘೋಷಣೆ

ಆಲ್ಫಾಬೆಟ್ ಇಂಕ್​ನ ಗೂಗಲ್​ ತನ್ನ ಉದ್ಯೋಗಿಗಳಿಗೆ ಒಂದು ಸಲದ ಬೋನಸ್ 1,21,000 ರೂಪಾಯಿ ಘೋಷಣೆ ಮಾಡಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

Google: ಗೂಗಲ್​ನಿಂದ ಉದ್ಯೋಗಿಗಳಿಗೆ 1,21,000 ರೂಪಾಯಿ ಒಂದು ಸಲದ ನಗದು ಬೋನಸ್ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 09, 2021 | 11:17 AM

Share

ಆಲ್ಫಾಬೆಟ್ ಇಂಕ್‌ಗೆ ಸೇರಿದ ಗೂಗಲ್ ಈ ವರ್ಷ ಜಾಗತಿಕವಾಗಿ ತನ್ನ ಉದ್ಯೋಗಿಗಳಿಗೆ ಹೆಚ್ಚುವರಿ ಬೋನಸ್ ನೀಡುವುದಾಗಿ ಬುಧವಾರ ಘೋಷಣೆ ಮಾಡಿದೆ. ಏಕೆಂದರೆ ಟೆಕ್ ದೈತ್ಯ ಕಂಪೆನಿ ಗೂಗಲ್ ತನ್ನ ರಿಟರ್ನ್-ಟು-ಆಫೀಸ್ ಯೋಜನೆಯನ್ನು ಹಿಂದಕ್ಕೆ ತಳ್ಳಿದೆ. ಕಂಪೆನಿಯ ದೊಡ್ಡ ಸಂಖ್ಯೆಯಲ್ಲಿನ ಸಿಬ್ಬಂದಿ ಮತ್ತು ಇಂಟರ್ನ್‌ಗಳು ಸೇರಿದಂತೆ ಎಲ್ಲ ಉದ್ಯೋಗಿಗಳಿಗೆ ಈ ತಿಂಗಳು ತಮ್ಮ ದೇಶದಲ್ಲಿ 1,600 ಅಮೆರಿಕನ್ ಡಾಲರ್ ಅಥವಾ ಸಮಾನ ಮೌಲ್ಯದ ಒಂದು-ಬಾರಿಯ ನಗದು ಬೋನಸ್ ಅನ್ನು ಗೂಗಲ್ ನೀಡುತ್ತದೆ ಎಂದು ಕಂಪೆನಿಯ ವಕ್ತಾರರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗಿಗಳನ್ನು ಬೆಂಬಲಿಸುವ ಸಲುವಾಗಿ ಗೂಗಲ್​ನಿಂದ ಮನೆಯಿಂದ ಕೆಲಸದ ಭತ್ಯೆ ಮತ್ತು ಯೋಗಕ್ಷೇಮದ ಬೋನಸ್ ನೀಡಲಾಗಿತ್ತು. ಇದೀಗ ಹೆಚ್ಚುವರಿಯಾಗಿ ಬೆನಿಫಿಟ್​ ಘೋಷಣೆ ಮಾಡಿದೆ. ಕಂಪೆನಿಯು ಈ ಉದ್ದೇಶಕ್ಕಾಗಿ ಒಟ್ಟು ಎಷ್ಟು ಮೊತ್ತ ಮೀಸಲಿಟ್ಟಿದೆ ಎಂಬುದರ ಕುರಿತು ವಿವರಗಳನ್ನು ನೀಡದೆ ವಕ್ತಾರರು ಮಾಹಿತಿ ತಿಳಿಸಿದ್ದಾರೆ. 2021ರ ಮಾರ್ಚ್‌ನಲ್ಲಿ ಗೂಗಲ್​ನ ಆಂತರಿಕ ಸಮೀಕ್ಷೆಯು ಕಳೆದ ವರ್ಷದಲ್ಲಿ ತನ್ನ ಉದ್ಯೋಗಿ ಯೋಗಕ್ಷೇಮದಲ್ಲಿ ಕುಸಿತವನ್ನು ತೋರಿಸಿದೆ. ಅದರ ನಂತರ ಕಂಪೆನಿಯು 500 ಯುಎಸ್​ಡಿ ಯೋಗಕ್ಷೇಮದ ನಗದು ಬೋನಸ್ ಸೇರಿ ಹಲವು ಬೆನಿಫಿಟ್​ಗಳನ್ನು ಘೋಷಿಸಿತು.

ಕಳೆದ ವಾರ ಒಮಿಕ್ರಾನ್ ವೇರಿಯಂಟ್ ಆತಂಕಗಳು ಮತ್ತು ಕಂಪೆನಿ-ಆದೇಶದ ಲಸಿಕೆಗಳಿಗೆ ತನ್ನ ಉದ್ಯೋಗಿಗಳಿಂದ ಪ್ರತಿರೋಧದ ಮಧ್ಯೆ ಗೂಗಲ್ ತನ್ನ ಕಚೇರಿಗೆ ಹಿಂತಿರುಗುವ ಯೋಜನೆಯನ್ನು ಅನಿರ್ದಿಷ್ಟವಾಗಿ ಮುಂದಕ್ಕೆ ಹಾಕಿತು. ಜನವರಿ 10ರಿಂದ ಸಿಬ್ಬಂದಿ ಕಚೇರಿಗೆ ಮರಳುವ ನಿರೀಕ್ಷೆಯಿದೆ.

ಇದನ್ನೂ ಓದಿ: Google Pay: ಧ್ವನಿ ಕಮಾಂಡ್​ನಿಂದ ಬ್ಯಾಂಕ್​ ಖಾತೆಗೆ ಹಣ ವರ್ಗಾಯಿಸುವ ಫೀಚರ್ ತರಲಿದೆ ಗೂಗಲ್ ಪೇ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ