AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google: ಗೂಗಲ್​ನಿಂದ ಉದ್ಯೋಗಿಗಳಿಗೆ 1,21,000 ರೂಪಾಯಿ ಒಂದು ಸಲದ ನಗದು ಬೋನಸ್ ಘೋಷಣೆ

ಆಲ್ಫಾಬೆಟ್ ಇಂಕ್​ನ ಗೂಗಲ್​ ತನ್ನ ಉದ್ಯೋಗಿಗಳಿಗೆ ಒಂದು ಸಲದ ಬೋನಸ್ 1,21,000 ರೂಪಾಯಿ ಘೋಷಣೆ ಮಾಡಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

Google: ಗೂಗಲ್​ನಿಂದ ಉದ್ಯೋಗಿಗಳಿಗೆ 1,21,000 ರೂಪಾಯಿ ಒಂದು ಸಲದ ನಗದು ಬೋನಸ್ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 09, 2021 | 11:17 AM

Share

ಆಲ್ಫಾಬೆಟ್ ಇಂಕ್‌ಗೆ ಸೇರಿದ ಗೂಗಲ್ ಈ ವರ್ಷ ಜಾಗತಿಕವಾಗಿ ತನ್ನ ಉದ್ಯೋಗಿಗಳಿಗೆ ಹೆಚ್ಚುವರಿ ಬೋನಸ್ ನೀಡುವುದಾಗಿ ಬುಧವಾರ ಘೋಷಣೆ ಮಾಡಿದೆ. ಏಕೆಂದರೆ ಟೆಕ್ ದೈತ್ಯ ಕಂಪೆನಿ ಗೂಗಲ್ ತನ್ನ ರಿಟರ್ನ್-ಟು-ಆಫೀಸ್ ಯೋಜನೆಯನ್ನು ಹಿಂದಕ್ಕೆ ತಳ್ಳಿದೆ. ಕಂಪೆನಿಯ ದೊಡ್ಡ ಸಂಖ್ಯೆಯಲ್ಲಿನ ಸಿಬ್ಬಂದಿ ಮತ್ತು ಇಂಟರ್ನ್‌ಗಳು ಸೇರಿದಂತೆ ಎಲ್ಲ ಉದ್ಯೋಗಿಗಳಿಗೆ ಈ ತಿಂಗಳು ತಮ್ಮ ದೇಶದಲ್ಲಿ 1,600 ಅಮೆರಿಕನ್ ಡಾಲರ್ ಅಥವಾ ಸಮಾನ ಮೌಲ್ಯದ ಒಂದು-ಬಾರಿಯ ನಗದು ಬೋನಸ್ ಅನ್ನು ಗೂಗಲ್ ನೀಡುತ್ತದೆ ಎಂದು ಕಂಪೆನಿಯ ವಕ್ತಾರರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗಿಗಳನ್ನು ಬೆಂಬಲಿಸುವ ಸಲುವಾಗಿ ಗೂಗಲ್​ನಿಂದ ಮನೆಯಿಂದ ಕೆಲಸದ ಭತ್ಯೆ ಮತ್ತು ಯೋಗಕ್ಷೇಮದ ಬೋನಸ್ ನೀಡಲಾಗಿತ್ತು. ಇದೀಗ ಹೆಚ್ಚುವರಿಯಾಗಿ ಬೆನಿಫಿಟ್​ ಘೋಷಣೆ ಮಾಡಿದೆ. ಕಂಪೆನಿಯು ಈ ಉದ್ದೇಶಕ್ಕಾಗಿ ಒಟ್ಟು ಎಷ್ಟು ಮೊತ್ತ ಮೀಸಲಿಟ್ಟಿದೆ ಎಂಬುದರ ಕುರಿತು ವಿವರಗಳನ್ನು ನೀಡದೆ ವಕ್ತಾರರು ಮಾಹಿತಿ ತಿಳಿಸಿದ್ದಾರೆ. 2021ರ ಮಾರ್ಚ್‌ನಲ್ಲಿ ಗೂಗಲ್​ನ ಆಂತರಿಕ ಸಮೀಕ್ಷೆಯು ಕಳೆದ ವರ್ಷದಲ್ಲಿ ತನ್ನ ಉದ್ಯೋಗಿ ಯೋಗಕ್ಷೇಮದಲ್ಲಿ ಕುಸಿತವನ್ನು ತೋರಿಸಿದೆ. ಅದರ ನಂತರ ಕಂಪೆನಿಯು 500 ಯುಎಸ್​ಡಿ ಯೋಗಕ್ಷೇಮದ ನಗದು ಬೋನಸ್ ಸೇರಿ ಹಲವು ಬೆನಿಫಿಟ್​ಗಳನ್ನು ಘೋಷಿಸಿತು.

ಕಳೆದ ವಾರ ಒಮಿಕ್ರಾನ್ ವೇರಿಯಂಟ್ ಆತಂಕಗಳು ಮತ್ತು ಕಂಪೆನಿ-ಆದೇಶದ ಲಸಿಕೆಗಳಿಗೆ ತನ್ನ ಉದ್ಯೋಗಿಗಳಿಂದ ಪ್ರತಿರೋಧದ ಮಧ್ಯೆ ಗೂಗಲ್ ತನ್ನ ಕಚೇರಿಗೆ ಹಿಂತಿರುಗುವ ಯೋಜನೆಯನ್ನು ಅನಿರ್ದಿಷ್ಟವಾಗಿ ಮುಂದಕ್ಕೆ ಹಾಕಿತು. ಜನವರಿ 10ರಿಂದ ಸಿಬ್ಬಂದಿ ಕಚೇರಿಗೆ ಮರಳುವ ನಿರೀಕ್ಷೆಯಿದೆ.

ಇದನ್ನೂ ಓದಿ: Google Pay: ಧ್ವನಿ ಕಮಾಂಡ್​ನಿಂದ ಬ್ಯಾಂಕ್​ ಖಾತೆಗೆ ಹಣ ವರ್ಗಾಯಿಸುವ ಫೀಚರ್ ತರಲಿದೆ ಗೂಗಲ್ ಪೇ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ