ಇಂದಿನಿಂದ ಭಾರತದ ಅತಿದೊಡ್ಡ ಆನ್​ಲೈನ್ ಶಾಪಿಂಗ್ ತಾಣದಲ್ಲಿ 2,000 ರೂ ನೋಟುಗಳ ಬಳಕೆ ಬಂದ್

Amazon Stops Taking Rs. 2,000 Notes: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30ಕ್ಕೆ ಡೆಡ್​ಲೈನ್ ಎಂದು ಆರ್​ಬಿಐ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಅಮೇಜಾನ್ ಇಂಡಿಯಾ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಈ ನೋಟುಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ತನ್ನ ಕ್ಯಾಷ್ ಆನ್ ಡೆಲಿವರಿ ವ್ಯವಸ್ಥೆಯಲ್ಲಿ ಹಣ ಪಾವತಿಗೆ ಇಂದಿನಿಂದ 2,000 ರೂ ನೋಟುಗಳನ್ನು ಸ್ವೀಕರಿಸದೇ ಇರಲು ಅಮೇಜಾನ್ ನಿರ್ಧರಿಸಿದೆ.

ಇಂದಿನಿಂದ ಭಾರತದ ಅತಿದೊಡ್ಡ ಆನ್​ಲೈನ್ ಶಾಪಿಂಗ್ ತಾಣದಲ್ಲಿ 2,000 ರೂ ನೋಟುಗಳ ಬಳಕೆ ಬಂದ್
2,000 ರೂ ನೋಟು
Follow us
|

Updated on: Sep 19, 2023 | 1:14 PM

ನವದೆಹಲಿ, ಸೆಪ್ಟೆಂಬರ್ 19: ಭಾರತದ ಅತಿದೊಡ್ಡ ಇಕಾಮರ್ಸ್ ಪ್ಲಾಟ್​ಫಾರ್ಮ್ ಆಗಿರುವ ಅಮೇಜಾನ್ ಇಂಡಿಯಾ (Amazon India) ಸಂಸ್ಥೆ 2,000 ರೂ ಸ್ವೀಕರಿಸುವುದನ್ನು ಇಂದಿನಿಂದ ನಿಲ್ಲಿಸಿದೆ. ಕ್ಯಾಷ್ ಆನ್ ಡೆಲಿವರಿಯಲ್ಲಿ (Cash on Delivery) ಅಮೇಜಾನ್ ತನ್ನ ಗ್ರಾಹಕರಿಂದ ಹಣಪಾವತಿಗೆ 2,000 ರೂ ನೋಟು ಪಡೆಯದಿರಲು ನಿರ್ಧರಿಸಿದೆ. ಇದು ಅಮೇಜಾನ್​ನಿಂದ ಅನುಮೋದಿಸಲ್ಪಟ್ಟ ಆರ್ಡರ್​ಗಳಿಗೆ ಮಾತ್ರ ಈ ನಿರ್ಬಂಧ ಇರುತ್ತದೆ. ಅಮೇಜಾನ್ ಪ್ಲಾಟ್​ಫಾರ್ಮ್​ನಲ್ಲಿರುವ ಥರ್ಡ್ ಪಾರ್ಟಿ ಕೊರಿಯರ್​ಗಳಿಗೆ ಈ ನಿರ್ಬಂಧ ಇರುವುದಿಲ್ಲ. ಅವುಗಳು 2,000 ರೂ ನೋಟುಗಳನ್ನು ಸ್ವೀಕರಿಸುವ ಅವಕಾಶಗಳಿರಬಹುದು. ಇದು ಆಯಾ ಕೊರಿಯರ್ ಕಂಪನಿಗಳ ನಿರ್ಧಾರಕ್ಕೆ ಬಿಟ್ಟಿದ್ದು.

ಆರ್​ಬಿಐ 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಂಡಿದೆ. ಈ ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30ರವರೆಗೆ ಮಾತ್ರವೇ ಕಾಲಾವಕಾಶ ಇದೆ. ಈಗಾಗಲೇ ಬಹುಪಾಲು 2,000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್​ಗಳಿಗೆ ಮರಳಿವೆ. ಇನ್ನು, ಕೆಲವೇ ಸಾವಿರ ರೂ ಮೊತ್ತದ ನೋಟುಗಳು ಮಾತ್ರವೇ ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗಿರುವ ಅಂದಾಜಿದೆ.

ಇದನ್ನೂ ಓದಿ: ಹಣಕಾಸು ಕಷ್ಟ ಬಂದಾಗ ಲವ್ವಿ ಡವ್ವಿ ಜಾಸ್ತಿಯಾಗುತ್ತಾ? ಅಚ್ಚರಿ ಮೂಡಿಸುತ್ತೆ ಡೇಟಿಂಗ್ ಕಂಪನಿಗಳ ವ್ಯವಹಾರ ಅಂಕಿ ಅಂಶ

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಮಾತ್ರವೇ ಹಿಂಪಡೆಯಲಾಗಿದೆಯೇ ಹೊರತು ಅದನ್ನು ನಿಷೇಧಿಸಿಲ್ಲ ಎಂದು ಆರ್​ಬಿಐ ಹೇಳಿದೆ. ಆದರೆ, ಸೆಪ್ಟೆಂಬರ್ 30ರ ಬಳಿಕ ಈ ನೋಟುಗಳನ್ನು ಏನು ಮಾಡಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ.

ಸದ್ಯ, 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಿಗೆ ಮರಳಿಸಬಹುದು. ಈ ನೋಟುಗಳನ್ನು ಮರಳಿಸಿ, ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿಸಿಕೊಳ್ಳಬಹುದು. ಅಥವಾ ಈ ನೋಟುಗಳ ಬದಲಿಗೆ ಬೇರೆ ನೋಟುಗಳನ್ನು ಪಡೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ