AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಭಾರತದ ಅತಿದೊಡ್ಡ ಆನ್​ಲೈನ್ ಶಾಪಿಂಗ್ ತಾಣದಲ್ಲಿ 2,000 ರೂ ನೋಟುಗಳ ಬಳಕೆ ಬಂದ್

Amazon Stops Taking Rs. 2,000 Notes: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30ಕ್ಕೆ ಡೆಡ್​ಲೈನ್ ಎಂದು ಆರ್​ಬಿಐ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಅಮೇಜಾನ್ ಇಂಡಿಯಾ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಈ ನೋಟುಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ತನ್ನ ಕ್ಯಾಷ್ ಆನ್ ಡೆಲಿವರಿ ವ್ಯವಸ್ಥೆಯಲ್ಲಿ ಹಣ ಪಾವತಿಗೆ ಇಂದಿನಿಂದ 2,000 ರೂ ನೋಟುಗಳನ್ನು ಸ್ವೀಕರಿಸದೇ ಇರಲು ಅಮೇಜಾನ್ ನಿರ್ಧರಿಸಿದೆ.

ಇಂದಿನಿಂದ ಭಾರತದ ಅತಿದೊಡ್ಡ ಆನ್​ಲೈನ್ ಶಾಪಿಂಗ್ ತಾಣದಲ್ಲಿ 2,000 ರೂ ನೋಟುಗಳ ಬಳಕೆ ಬಂದ್
2,000 ರೂ ನೋಟು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 19, 2023 | 1:14 PM

ನವದೆಹಲಿ, ಸೆಪ್ಟೆಂಬರ್ 19: ಭಾರತದ ಅತಿದೊಡ್ಡ ಇಕಾಮರ್ಸ್ ಪ್ಲಾಟ್​ಫಾರ್ಮ್ ಆಗಿರುವ ಅಮೇಜಾನ್ ಇಂಡಿಯಾ (Amazon India) ಸಂಸ್ಥೆ 2,000 ರೂ ಸ್ವೀಕರಿಸುವುದನ್ನು ಇಂದಿನಿಂದ ನಿಲ್ಲಿಸಿದೆ. ಕ್ಯಾಷ್ ಆನ್ ಡೆಲಿವರಿಯಲ್ಲಿ (Cash on Delivery) ಅಮೇಜಾನ್ ತನ್ನ ಗ್ರಾಹಕರಿಂದ ಹಣಪಾವತಿಗೆ 2,000 ರೂ ನೋಟು ಪಡೆಯದಿರಲು ನಿರ್ಧರಿಸಿದೆ. ಇದು ಅಮೇಜಾನ್​ನಿಂದ ಅನುಮೋದಿಸಲ್ಪಟ್ಟ ಆರ್ಡರ್​ಗಳಿಗೆ ಮಾತ್ರ ಈ ನಿರ್ಬಂಧ ಇರುತ್ತದೆ. ಅಮೇಜಾನ್ ಪ್ಲಾಟ್​ಫಾರ್ಮ್​ನಲ್ಲಿರುವ ಥರ್ಡ್ ಪಾರ್ಟಿ ಕೊರಿಯರ್​ಗಳಿಗೆ ಈ ನಿರ್ಬಂಧ ಇರುವುದಿಲ್ಲ. ಅವುಗಳು 2,000 ರೂ ನೋಟುಗಳನ್ನು ಸ್ವೀಕರಿಸುವ ಅವಕಾಶಗಳಿರಬಹುದು. ಇದು ಆಯಾ ಕೊರಿಯರ್ ಕಂಪನಿಗಳ ನಿರ್ಧಾರಕ್ಕೆ ಬಿಟ್ಟಿದ್ದು.

ಆರ್​ಬಿಐ 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಂಡಿದೆ. ಈ ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30ರವರೆಗೆ ಮಾತ್ರವೇ ಕಾಲಾವಕಾಶ ಇದೆ. ಈಗಾಗಲೇ ಬಹುಪಾಲು 2,000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್​ಗಳಿಗೆ ಮರಳಿವೆ. ಇನ್ನು, ಕೆಲವೇ ಸಾವಿರ ರೂ ಮೊತ್ತದ ನೋಟುಗಳು ಮಾತ್ರವೇ ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗಿರುವ ಅಂದಾಜಿದೆ.

ಇದನ್ನೂ ಓದಿ: ಹಣಕಾಸು ಕಷ್ಟ ಬಂದಾಗ ಲವ್ವಿ ಡವ್ವಿ ಜಾಸ್ತಿಯಾಗುತ್ತಾ? ಅಚ್ಚರಿ ಮೂಡಿಸುತ್ತೆ ಡೇಟಿಂಗ್ ಕಂಪನಿಗಳ ವ್ಯವಹಾರ ಅಂಕಿ ಅಂಶ

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಮಾತ್ರವೇ ಹಿಂಪಡೆಯಲಾಗಿದೆಯೇ ಹೊರತು ಅದನ್ನು ನಿಷೇಧಿಸಿಲ್ಲ ಎಂದು ಆರ್​ಬಿಐ ಹೇಳಿದೆ. ಆದರೆ, ಸೆಪ್ಟೆಂಬರ್ 30ರ ಬಳಿಕ ಈ ನೋಟುಗಳನ್ನು ಏನು ಮಾಡಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ.

ಸದ್ಯ, 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಿಗೆ ಮರಳಿಸಬಹುದು. ಈ ನೋಟುಗಳನ್ನು ಮರಳಿಸಿ, ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿಸಿಕೊಳ್ಳಬಹುದು. ಅಥವಾ ಈ ನೋಟುಗಳ ಬದಲಿಗೆ ಬೇರೆ ನೋಟುಗಳನ್ನು ಪಡೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್