AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಭಾರತದ ಅತಿದೊಡ್ಡ ಆನ್​ಲೈನ್ ಶಾಪಿಂಗ್ ತಾಣದಲ್ಲಿ 2,000 ರೂ ನೋಟುಗಳ ಬಳಕೆ ಬಂದ್

Amazon Stops Taking Rs. 2,000 Notes: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30ಕ್ಕೆ ಡೆಡ್​ಲೈನ್ ಎಂದು ಆರ್​ಬಿಐ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಅಮೇಜಾನ್ ಇಂಡಿಯಾ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಈ ನೋಟುಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ತನ್ನ ಕ್ಯಾಷ್ ಆನ್ ಡೆಲಿವರಿ ವ್ಯವಸ್ಥೆಯಲ್ಲಿ ಹಣ ಪಾವತಿಗೆ ಇಂದಿನಿಂದ 2,000 ರೂ ನೋಟುಗಳನ್ನು ಸ್ವೀಕರಿಸದೇ ಇರಲು ಅಮೇಜಾನ್ ನಿರ್ಧರಿಸಿದೆ.

ಇಂದಿನಿಂದ ಭಾರತದ ಅತಿದೊಡ್ಡ ಆನ್​ಲೈನ್ ಶಾಪಿಂಗ್ ತಾಣದಲ್ಲಿ 2,000 ರೂ ನೋಟುಗಳ ಬಳಕೆ ಬಂದ್
2,000 ರೂ ನೋಟು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 19, 2023 | 1:14 PM

Share

ನವದೆಹಲಿ, ಸೆಪ್ಟೆಂಬರ್ 19: ಭಾರತದ ಅತಿದೊಡ್ಡ ಇಕಾಮರ್ಸ್ ಪ್ಲಾಟ್​ಫಾರ್ಮ್ ಆಗಿರುವ ಅಮೇಜಾನ್ ಇಂಡಿಯಾ (Amazon India) ಸಂಸ್ಥೆ 2,000 ರೂ ಸ್ವೀಕರಿಸುವುದನ್ನು ಇಂದಿನಿಂದ ನಿಲ್ಲಿಸಿದೆ. ಕ್ಯಾಷ್ ಆನ್ ಡೆಲಿವರಿಯಲ್ಲಿ (Cash on Delivery) ಅಮೇಜಾನ್ ತನ್ನ ಗ್ರಾಹಕರಿಂದ ಹಣಪಾವತಿಗೆ 2,000 ರೂ ನೋಟು ಪಡೆಯದಿರಲು ನಿರ್ಧರಿಸಿದೆ. ಇದು ಅಮೇಜಾನ್​ನಿಂದ ಅನುಮೋದಿಸಲ್ಪಟ್ಟ ಆರ್ಡರ್​ಗಳಿಗೆ ಮಾತ್ರ ಈ ನಿರ್ಬಂಧ ಇರುತ್ತದೆ. ಅಮೇಜಾನ್ ಪ್ಲಾಟ್​ಫಾರ್ಮ್​ನಲ್ಲಿರುವ ಥರ್ಡ್ ಪಾರ್ಟಿ ಕೊರಿಯರ್​ಗಳಿಗೆ ಈ ನಿರ್ಬಂಧ ಇರುವುದಿಲ್ಲ. ಅವುಗಳು 2,000 ರೂ ನೋಟುಗಳನ್ನು ಸ್ವೀಕರಿಸುವ ಅವಕಾಶಗಳಿರಬಹುದು. ಇದು ಆಯಾ ಕೊರಿಯರ್ ಕಂಪನಿಗಳ ನಿರ್ಧಾರಕ್ಕೆ ಬಿಟ್ಟಿದ್ದು.

ಆರ್​ಬಿಐ 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಂಡಿದೆ. ಈ ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30ರವರೆಗೆ ಮಾತ್ರವೇ ಕಾಲಾವಕಾಶ ಇದೆ. ಈಗಾಗಲೇ ಬಹುಪಾಲು 2,000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್​ಗಳಿಗೆ ಮರಳಿವೆ. ಇನ್ನು, ಕೆಲವೇ ಸಾವಿರ ರೂ ಮೊತ್ತದ ನೋಟುಗಳು ಮಾತ್ರವೇ ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗಿರುವ ಅಂದಾಜಿದೆ.

ಇದನ್ನೂ ಓದಿ: ಹಣಕಾಸು ಕಷ್ಟ ಬಂದಾಗ ಲವ್ವಿ ಡವ್ವಿ ಜಾಸ್ತಿಯಾಗುತ್ತಾ? ಅಚ್ಚರಿ ಮೂಡಿಸುತ್ತೆ ಡೇಟಿಂಗ್ ಕಂಪನಿಗಳ ವ್ಯವಹಾರ ಅಂಕಿ ಅಂಶ

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಮಾತ್ರವೇ ಹಿಂಪಡೆಯಲಾಗಿದೆಯೇ ಹೊರತು ಅದನ್ನು ನಿಷೇಧಿಸಿಲ್ಲ ಎಂದು ಆರ್​ಬಿಐ ಹೇಳಿದೆ. ಆದರೆ, ಸೆಪ್ಟೆಂಬರ್ 30ರ ಬಳಿಕ ಈ ನೋಟುಗಳನ್ನು ಏನು ಮಾಡಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ.

ಸದ್ಯ, 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಿಗೆ ಮರಳಿಸಬಹುದು. ಈ ನೋಟುಗಳನ್ನು ಮರಳಿಸಿ, ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿಸಿಕೊಳ್ಳಬಹುದು. ಅಥವಾ ಈ ನೋಟುಗಳ ಬದಲಿಗೆ ಬೇರೆ ನೋಟುಗಳನ್ನು ಪಡೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್