AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಭಾರತದ ಅತಿದೊಡ್ಡ ಆನ್​ಲೈನ್ ಶಾಪಿಂಗ್ ತಾಣದಲ್ಲಿ 2,000 ರೂ ನೋಟುಗಳ ಬಳಕೆ ಬಂದ್

Amazon Stops Taking Rs. 2,000 Notes: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30ಕ್ಕೆ ಡೆಡ್​ಲೈನ್ ಎಂದು ಆರ್​ಬಿಐ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಅಮೇಜಾನ್ ಇಂಡಿಯಾ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಈ ನೋಟುಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ತನ್ನ ಕ್ಯಾಷ್ ಆನ್ ಡೆಲಿವರಿ ವ್ಯವಸ್ಥೆಯಲ್ಲಿ ಹಣ ಪಾವತಿಗೆ ಇಂದಿನಿಂದ 2,000 ರೂ ನೋಟುಗಳನ್ನು ಸ್ವೀಕರಿಸದೇ ಇರಲು ಅಮೇಜಾನ್ ನಿರ್ಧರಿಸಿದೆ.

ಇಂದಿನಿಂದ ಭಾರತದ ಅತಿದೊಡ್ಡ ಆನ್​ಲೈನ್ ಶಾಪಿಂಗ್ ತಾಣದಲ್ಲಿ 2,000 ರೂ ನೋಟುಗಳ ಬಳಕೆ ಬಂದ್
2,000 ರೂ ನೋಟು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 19, 2023 | 1:14 PM

Share

ನವದೆಹಲಿ, ಸೆಪ್ಟೆಂಬರ್ 19: ಭಾರತದ ಅತಿದೊಡ್ಡ ಇಕಾಮರ್ಸ್ ಪ್ಲಾಟ್​ಫಾರ್ಮ್ ಆಗಿರುವ ಅಮೇಜಾನ್ ಇಂಡಿಯಾ (Amazon India) ಸಂಸ್ಥೆ 2,000 ರೂ ಸ್ವೀಕರಿಸುವುದನ್ನು ಇಂದಿನಿಂದ ನಿಲ್ಲಿಸಿದೆ. ಕ್ಯಾಷ್ ಆನ್ ಡೆಲಿವರಿಯಲ್ಲಿ (Cash on Delivery) ಅಮೇಜಾನ್ ತನ್ನ ಗ್ರಾಹಕರಿಂದ ಹಣಪಾವತಿಗೆ 2,000 ರೂ ನೋಟು ಪಡೆಯದಿರಲು ನಿರ್ಧರಿಸಿದೆ. ಇದು ಅಮೇಜಾನ್​ನಿಂದ ಅನುಮೋದಿಸಲ್ಪಟ್ಟ ಆರ್ಡರ್​ಗಳಿಗೆ ಮಾತ್ರ ಈ ನಿರ್ಬಂಧ ಇರುತ್ತದೆ. ಅಮೇಜಾನ್ ಪ್ಲಾಟ್​ಫಾರ್ಮ್​ನಲ್ಲಿರುವ ಥರ್ಡ್ ಪಾರ್ಟಿ ಕೊರಿಯರ್​ಗಳಿಗೆ ಈ ನಿರ್ಬಂಧ ಇರುವುದಿಲ್ಲ. ಅವುಗಳು 2,000 ರೂ ನೋಟುಗಳನ್ನು ಸ್ವೀಕರಿಸುವ ಅವಕಾಶಗಳಿರಬಹುದು. ಇದು ಆಯಾ ಕೊರಿಯರ್ ಕಂಪನಿಗಳ ನಿರ್ಧಾರಕ್ಕೆ ಬಿಟ್ಟಿದ್ದು.

ಆರ್​ಬಿಐ 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಂಡಿದೆ. ಈ ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30ರವರೆಗೆ ಮಾತ್ರವೇ ಕಾಲಾವಕಾಶ ಇದೆ. ಈಗಾಗಲೇ ಬಹುಪಾಲು 2,000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್​ಗಳಿಗೆ ಮರಳಿವೆ. ಇನ್ನು, ಕೆಲವೇ ಸಾವಿರ ರೂ ಮೊತ್ತದ ನೋಟುಗಳು ಮಾತ್ರವೇ ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗಿರುವ ಅಂದಾಜಿದೆ.

ಇದನ್ನೂ ಓದಿ: ಹಣಕಾಸು ಕಷ್ಟ ಬಂದಾಗ ಲವ್ವಿ ಡವ್ವಿ ಜಾಸ್ತಿಯಾಗುತ್ತಾ? ಅಚ್ಚರಿ ಮೂಡಿಸುತ್ತೆ ಡೇಟಿಂಗ್ ಕಂಪನಿಗಳ ವ್ಯವಹಾರ ಅಂಕಿ ಅಂಶ

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಮಾತ್ರವೇ ಹಿಂಪಡೆಯಲಾಗಿದೆಯೇ ಹೊರತು ಅದನ್ನು ನಿಷೇಧಿಸಿಲ್ಲ ಎಂದು ಆರ್​ಬಿಐ ಹೇಳಿದೆ. ಆದರೆ, ಸೆಪ್ಟೆಂಬರ್ 30ರ ಬಳಿಕ ಈ ನೋಟುಗಳನ್ನು ಏನು ಮಾಡಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ.

ಸದ್ಯ, 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಿಗೆ ಮರಳಿಸಬಹುದು. ಈ ನೋಟುಗಳನ್ನು ಮರಳಿಸಿ, ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿಸಿಕೊಳ್ಳಬಹುದು. ಅಥವಾ ಈ ನೋಟುಗಳ ಬದಲಿಗೆ ಬೇರೆ ನೋಟುಗಳನ್ನು ಪಡೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ