Amazon Academy: ಬೈಜೂಸ್ ಬೆನ್ನಲ್ಲೇ ಅಮೆಜಾನ್ ಅಕಾಡೆಮಿಗೂ ಸಂಕಷ್ಟ; ಆನ್​ಲೈನ್ ಕಲಿಕಾ ತಾಣ ಮುಚ್ಚುವುದಾಗಿ ಘೋಷಣೆ

ಅಮೆಜಾನ್​ ಅಕಾಡೆಮಿಯನ್ನು ಹಂತಹಂತವಾಗಿ ಮುಚ್ಚಲಾಗುವುದು. ಈಗಿರುವ ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡಿದ್ದೇವೆ ಎಂದು ಅಮೆಜಾನ್ ಹೇಳಿದೆ.

Amazon Academy: ಬೈಜೂಸ್ ಬೆನ್ನಲ್ಲೇ ಅಮೆಜಾನ್ ಅಕಾಡೆಮಿಗೂ ಸಂಕಷ್ಟ; ಆನ್​ಲೈನ್ ಕಲಿಕಾ ತಾಣ ಮುಚ್ಚುವುದಾಗಿ ಘೋಷಣೆ
ಅಮೆಜಾನ್Image Credit source: PTI
Follow us
| Updated By: ಗಣಪತಿ ಶರ್ಮ

Updated on: Nov 25, 2022 | 10:23 AM

ಬೆಂಗಳೂರು: ದೇಶದ ಪ್ರಮುಖ ಎಜುಟೆಕ್ ಕಂಪನಿ ಬೈಜೂಸ್ (BYJU’S) ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಉದ್ಯೋಗ ಕಡಿತ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದ ಚರ್ಚೆಯ ಕಾವು ಆರುವ ಮುನ್ನವೇ ಅಮೆಜಾನ್​ ಅಕಾಡೆಮಿಯೂ (Amazon Academy) ಮುಚ್ಚುವ ಹಂತಕ್ಕೆ ಬಂದಿದೆ. ಆನ್​ಲೈನ್ ಕಲಿಕಾ ತಾಣ ಅಮೆಜಾನ್ ಅಕಾಡೆಮಿಯನ್ನು ಮುಚ್ಚುವುದಾಗಿ ಅಮೆಜಾನ್ ಡಾಟ್​ಕಾಂ (Amazon.com) ತಿಳಿಸಿದೆ. ಇದರೊಂದಿಗೆ ಭಾರತದಲ್ಲಿ ಕಾರ್ಯಾರಂಭ ಮಾಡಿದ ಎರಡು ವರ್ಷಗಳ ಒಳಗಾಗಿ ತಾಣ ಸ್ಥಗಿತಗೊಂಡಂತಾಗಲಿದೆ. ​ಅಮೆಜಾನ್ ಅಕಾಡೆಮಿನ್ನು ಮುಚ್ಚಲು ಕಾರಣ ಏನು ಎಂಬುದನ್ನು ಅಮೆಜಾನ್ ಬಹಿರಂಗಪಡಿಸಿಲ್ಲ.

ಕಳೆದ ವರ್ಷ ಆರಂಭದಲ್ಲಿ ಅಮೆಜಾನ್ ಅಕಾಡೆಮಿಯನ್ನು ಆರಂಭಿಸಲಾಗಿತ್ತು. ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವರ್ಚುವಲ್ ಕಲಿಕೆಗಾಗಿ ಅಕಾಡೆಮಿಯನ್ನು ಶುರುಮಾಡಲಾಗಿತ್ತು. ಜೆಇಇ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ನೀಡಲಾಗುತ್ತಿತ್ತು. ದೇಶದ ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡಲಾಗಿತ್ತು.

ಇದನ್ನೂ ಓದಿ: Amazon Layoffs: ಭಾರತದಲ್ಲಿ ಕೆಲವರ ರಾಜೀನಾಮೆಗೆ ಸೂಚಿಸಿದ ಅಮೆಜಾನ್; ಕೇಂದ್ರ ಕಾರ್ಮಿಕ ಸಚಿವಾಲಯ ಸಮನ್ಸ್

ಅಮೆಜಾನ್​ ಅಕಾಡೆಮಿಯನ್ನು ಹಂತಹಂತವಾಗಿ ಮುಚ್ಚಲಾಗುವುದು. ಈಗಿರುವ ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡಿದ್ದೇವೆ ಎಂದು ಅಮೆಜಾನ್ ಹೇಳಿದೆ. ಕೋವಿಡ್ ಲಾಕ್​ಡೌನ್ ಸಂದರ್ಭದಲ್ಲಿ ಮುಚ್ಚಿದ್ದ ಮತ್ತು ವರ್ಚುವಲ್ ಕಲಿಕೆಗೆ ಅವಕಾಶ ನೀಡುತ್ತಿದ್ದ ಸಂಸ್ಥೆಗಳೆಲ್ಲ ಈಗ ಪುನರಾರಂಭಗೊಂಡಿರುವುದು ಸಂಸ್ಥೆಯ ಹಿನ್ನಡೆಗೆ ಕಾರಣವಾಗಿರಬಹುದು ಎನ್ನಲಾಗಿದೆ.

ಕಳೆದ ತಿಂಗಳು ಬೈಜೂಸ್ ಸುಮಾರು 2,500 ಮಂದಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿತ್ತು. ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬೈಜೂಸ್ ಉದ್ಯೋಗಿಗಳಿಂದ ಬಲವಂತದ ರಾಜೀನಾಮೆ ಪಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಅಮೆಜಾನ್​ಗೆ ಜಾಗತಿಕ ಮಟ್ಟದಲ್ಲಿ ಸಂಕಷ್ಟ

ಜಾಗತಿಕ ಮಟ್ಟದಲ್ಲಿ ಸುಮಾರು 10 ಸಾವಿರ ನೌಕರರನ್ನು ಕೆಲಸದಿಂದ ವಜಾಗೊಳಿಸಲು ಚಿಂತನೆ ನಡೆಸಿರುವುದಾಗಿ ಅಮೆಜಾನ್ ಕಂಪನಿ ಇತ್ತೀಚೆಗೆ ಹೇಳಿತ್ತು. ಇದರ ಬೆನ್ನಲ್ಲೇ, ಸ್ವಯಂಪ್ರೇರಿತರಾಗಿ ಕೆಲಸಕ್ಕೆ ರಾಜೀನಾಮೆ ನೀಡುವಂತೆ ಭಾರತದಲ್ಲಿ ಹಲವು ಮಂದಿ ಉದ್ಯೋಗಿಗಳಿಗೆ ಅಮೆಜಾನ್ ಸೂಚಿಸಿದೆ ಎಂದು ವರದಿಯಾಗಿತ್ತು. ಇದಕ್ಕಾಗಿ ಕಂಪನಿಯು ಸ್ವಯಂಪ್ರೇರಿತ ಪ್ರತ್ಯೇಕತೆಯ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜೀನಾಮೆ ನೀಡುವ ಉದ್ಯೋಗಿಗಳಿಗೆ ಕೆಲವು ಪರಿಹಾರಗಳನ್ನು ನೀಡುವ ಭರವಸೆ ನೀಡಿದೆ ಎನ್ನಲಾಗಿತ್ತು.

ಈ ಮಧ್ಯೆ, ಕಾರ್ಮಿಕ ನಿಯಮ ಉಲ್ಲಂಘನೆ ಬಗ್ಗೆ ದೂರಗಳು ದಾಖಲಾದ ಕಾರಣ ಅಮೆಜಾನ್​ಗೆ ಕೇಂದ್ರ ಕಾರ್ಮಿಕ ಸಚಿವಾಲಯ ಸಮನ್ಸ್ ನೀಡಿತ್ತು. ಬೆಂಗಳೂರಿನಲ್ಲಿರುವ ಕಾರ್ಮಿಕ ಉಪ ಆಯುಕ್ತರ ಬಳಿ ವಿಚಾರಣೆಗೆ ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ