AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon Layoffs: ಅಮೇಜಾನ್​ನಿಂದ ಇನ್ನಷ್ಟು 9,000 ಮಂದಿ ಮನೆಗೆ; ಈ ವರ್ಷ ಕೆಲಸ ಕಳೆದುಕೊಳ್ಳುವವರ ಸಂಖ್ಯೆ 27 ಸಾವಿರ

Amazon Latest Job Cuts: ವಿಶ್ವದ ನಂಬರ್ ಒನ್ ಇ-ಕಾಮರ್ಸ್ ಕಂಪನಿ ಅಮೇಜಾನ್ ಇದೀಗ ಇನ್ನಷ್ಟು 9 ಸಾವಿರ ಮಂದಿಯನ್ನು ಕೆಲಸದಿಂದ ತೆಗೆಯಲು ಯೋಜಿಸುತ್ತಿದೆ. ಕೆಲ ತಿಂಗಳ ಹಿಂದೆ ಒಟ್ಟು 18 ಸಾವಿರ ಮಂದಿಯನ್ನು ಲೇ ಆಫ್ ಮಾಡಲಾಗಿತ್ತು.

Amazon Layoffs: ಅಮೇಜಾನ್​ನಿಂದ ಇನ್ನಷ್ಟು 9,000 ಮಂದಿ ಮನೆಗೆ; ಈ ವರ್ಷ ಕೆಲಸ ಕಳೆದುಕೊಳ್ಳುವವರ ಸಂಖ್ಯೆ 27 ಸಾವಿರ
ಅಮೇಜಾನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: Digi Tech Desk

Updated on:Mar 21, 2023 | 11:21 AM

ನವದೆಹಲಿ: ಅಮೇಜಾನ್​ನಿಂದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ (Amazon Job Cuts) ಭರಾಟೆ ಮುಂದುವರಿಯುತ್ತಿದೆ. ಈಗಾಗಲೇ 18 ಸಾವಿರ ಉದ್ಯೋಗಿಗಳನ್ನು ಲೇ ಆಫ್ ಮಾಡುವುದಾಗಿ ಜನವರಿ ತಿಂಗಳಲ್ಲಿ ಅಮೇಜಾನ್ ಹೇಳಿತ್ತು. ಅದರಂತೆ ಈಗಾಗಲೇ ಬಹಳಷ್ಟು ಮಂದಿ ಪಿಂಕ್ ಸ್ಲಿಪ್ ಪಡೆದು ಮನೆಗೆ ಹೋಗಿದ್ದಾರೆ. ಈಗ ಇದು ಸಾಕಾಗದು ಎಂದು ಇನ್ನೂ 9,000 ಮಂದಿಯನ್ನು ಕೆಲಸದಿಂದ ತೆಗೆಯಲು ಅಮೇಜಾನ್ ಯೋಜಿಸಿದೆ. ಇದರೊಂದಿಗೆ 2023, ಈ ವರ್ಷ ಅಮೇಜಾನ್ ಒಟ್ಟು 27,000 ಮಂದಿಯನ್ನು ಕೆಲಸದಿಂದ ತೆಗೆದುಹಾಕಿದಂತಾಗುತ್ತದೆ. ಮುಂದಿನ ಕೆಲ ವಾರಗಳಲ್ಲಿ ಈ 9 ಸಾವಿರ ಮಂದಿಗೆ ನೋಟೀಸ್ ಜಾರಿ ಮಾಡುವ ಸಾಧ್ಯತೆ ಇದೆ.

ಅಮೇಜಾನ್​ನಲ್ಲಿ ಸದ್ಯ ವಾರ್ಷಿಕ ಪ್ಲಾನಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಎರಡನೇ ಹಂತದ ಈ ಪ್ರಕ್ರಿಯೆಯಲ್ಲಿ ಅಮೇಜಾನ್​ನ ವ್ಯವಹಾರ ಇರುವ ಯಾವ ಕ್ಷೇತ್ರದಲ್ಲಿ ಉದ್ಯೋಗಕಡಿತ ಮಾಡಬಹುದು ಎಂದು ನಿರ್ಧರಿಸಲಾಗಿದೆ. ಈ ಆಯ್ದ ಕ್ಷೇತ್ರಗಳಲ್ಲಿ ಹೆಚ್ಚುವರಿ ಉದ್ಯೋಕಡಿತ ಮಾಡಲಾಗಿದೆ.

ಉದ್ಯೋಗ ಕಡಿತದ ಜೊತೆಗೆ ಅಮೇಜಾನ್ ಸಂಸ್ಥೆ ತನ್ನ ಇತರ ಕೆಲ ಖರ್ಚು ವೆಚ್ಚಗಳನ್ನು ತಗ್ಗಿಸಲು ಆಲೋಚಿಸಿದೆ. ಅಮೆರಿಕದ ನಾರ್ಥ್ ವರ್ಜೀನಿಯಾದಲ್ಲಿ ಅದರ ಮುಖ್ಯಕಚೇರಿ ನಿರ್ಮಾಣದ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

ಇದನ್ನೂ ಓದಿಫಾಕ್ಸ್‌ಕಾನ್ ಸೇರಿ 18 ಹೂಡಿಕೆ ಪ್ರಸ್ತಾವನೆಗಳಿಗೆ ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಅನುಮೋದನೆ

ಅದರ ಗೇಮಿಂಗ್ ಪ್ಲಾಟ್​ಫಾರ್ಮ್ ಟ್ವಿಚ್ ವಿಭಾಗದಲ್ಲೂ ಲೇ ಆಫ್ ಆಗುತ್ತಿದೆ. ಕಂಪನಿಯ ಸ್ಟೋರ್ ವಿಭಾಗವಾದ ಪಿಎಕ್ಸ್​ಟಿಯಲ್ಲೂ ಉದ್ಯೋಗನಷ್ಟ ಆಗಿದೆ.

ಅಮೇಜಾನ್ ದೊಡ್ಡ ಮಟ್ಟದಲ್ಲಿ ಲೇ ಆಫ್ ಮಾಡುತ್ತಿದೆಯಾದರೂ ಹೊಸ ನೇಮಕಾತಿಗಳನ್ನೂ ಜೊತೆಜೊತೆಗೇ ನಡೆಸುತ್ತಿದೆ. ಹೀಗಾಗಿ, ಸದ್ಯ ಅಮೇಜಾನ್​ನಲ್ಲಿ ನಡೆಯುತ್ತಿರುವುದು ಕಂಪನಿಯ ಖರ್ಚುವೆಚ್ಚ ತಗ್ಗಿಸುವುದರ ಜೊತೆಗೆ ವ್ಯವಹಾರ ಬಲಪಡಿಸುವ ಕಾರ್ಯವಾಗಿದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:23 am, Tue, 21 March 23

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ