AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಎಎಂಡಿಯಿಂದ 400 ಮಿಲಿಯನ್ ಡಾಲರ್ ಹೂಡಿಕೆ; ಬೆಂಗಳೂರಿನಲ್ಲಿ ಅತಿದೊಡ್ಡ ಚಿಪ್ ಡಿಸೈನ್ ಸೆಂಟರ್: ಸಚಿವ ಎ ವೈಷ್ಣವ್ ಘೋಷಣೆ

AMD Chip Design Center In Bengaluru: ಎಎಂಡಿಯ ಡಿಸೈನ್ ಸೆಂಟರ್ ಸ್ಥಾಪನೆ ಬಗ್ಗೆ ಕೇಂದ್ರ ಸಚಿವ ಎ ವೈಷ್ಣವ್ ಟ್ವೀಟ್ ಮಾಡಿದ್ದಾರೆ. ‘ಸೆಮಿಕಂಡಕ್ಟರ್ ಡಿಸೈನ್​ನಲ್ಲಿ 400 ಮಿಲಿಯನ್ ಡಾಲರ್ ಹೂಡಿಕೆಯನ್ನು ಎಎಂಡಿ ಪ್ರಕಟಿಸಿದೆ. ಎಎಂಡಿ ಟೆಕ್ನೋಸ್ಟಾರ್ ಸೆಂಟರ್ ಉತ್ತಮವಾಗಿ ರೂಪುಗೊಳ್ಳುತ್ತಿರುವುದು ತಿಳಿದು ಖುಷಿಯಾಯಿತು’ ಎಂದು ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ಎಎಂಡಿಯಿಂದ 400 ಮಿಲಿಯನ್ ಡಾಲರ್ ಹೂಡಿಕೆ; ಬೆಂಗಳೂರಿನಲ್ಲಿ ಅತಿದೊಡ್ಡ ಚಿಪ್ ಡಿಸೈನ್ ಸೆಂಟರ್: ಸಚಿವ ಎ ವೈಷ್ಣವ್ ಘೋಷಣೆ
ಎಎಂಡಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 27, 2023 | 12:15 PM

Share

ಬೆಂಗಳೂರು, ಅಕ್ಟೋಬರ್ 27: ಅಮೆರಿಕದ ಪ್ರಮುಖ ಚಿಪ್ ತಯಾರಕ ಕಂಪನಿ ಅಡ್ವಾನ್ಸ್ಡ್ ಮೈಕ್ರೋ ಡಿವೈಸಸ್ (AMD) ಸಂಸ್ಥೆ ಭಾರತದಲ್ಲಿ ಮುಂದಿನ 5 ವರ್ಷ ಅವಧಿಯಲ್ಲಿ 400 ಮಿಲಿಯನ್ ಡಾಲರ್ (ಸುಮಾರು 3,300 ಕೋಟಿ ರೂ) ಹೂಡಿಕೆ ಮಾಡಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ನಿನ್ನೆ ಗುರುವಾರ (ಅ. 26) ಎಎಂಡಿ ಇಂಡಿಯಾದ ಮುಖ್ಯಸ್ಥೆ ಜಯಾ ಜಗದೀಶ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೆದುರು ಸಚಿವ ವೈಷ್ಣವ್ ಈ ಘೋಷಣೆ ಮಾಡಿದ್ದಾರೆ.

ಎಎಂಡಿ ಸಂಸ್ಥೆ ಬೆಂಗಳೂರಿನಲ್ಲಿ ಅತಿದೊಡ್ಡ ಚಿಪ್ ಡಿಸೈನ್ ಸೆಂಟರ್ ತೆರೆಯಲಿದೆ. ಇದು ಈ ವರ್ಷದೊಳಗೆಯೇ ಆರಂಭವಾಗುವ ನಿರೀಕ್ಷೆ ಇದೆ. ಎಎಂಡಿಯ ಮೂರನೇ ಅತಿದೊಡ್ಡ ಸೆಮಿಕಂಡಕ್ಟರ್ ಡಿಸೈನ್ ಕೇಂದ್ರ ಇದಾಗಿದೆ. ಆದರೆ, ಭಾರತಕ್ಕೆ ಇದು ಅತಿದೊಡ್ಡದು. ಬೆಂಗಳೂರಿನಲ್ಲಿನ ಈ ಆರ್ ಅಂಡ್ ಡಿ ಡಿಸೈನ್ ಸೆಂಟರ್​ನಲ್ಲಿ 2028ರಷ್ಟರಲ್ಲಿ 3,000 ಹೊಸ ಎಂಜಿನಿಯರ್​ಗಳ ನೇಮಕಾತಿ ಆಗಲಿದೆ.

ಎಎಂಡಿಯ ಡಿಸೈನ್ ಸೆಂಟರ್ ಸ್ಥಾಪನೆ ಬಗ್ಗೆ ಕೇಂದ್ರ ಸಚಿವ ಎ ವೈಷ್ಣವ್ ಟ್ವೀಟ್ ಮಾಡಿದ್ದಾರೆ. ‘ಸೆಮಿಕಂಡಕ್ಟರ್ ಡಿಸೈನ್​ನಲ್ಲಿ 400 ಮಿಲಿಯನ್ ಡಾಲರ್ ಹೂಡಿಕೆಯನ್ನು ಎಎಂಡಿ ಪ್ರಕಟಿಸಿದೆ. ಎಎಂಡಿ ಟೆಕ್ನೋಸ್ಟಾರ್ ಸೆಂಟರ್ ಉತ್ತಮವಾಗಿ ರೂಪುಗೊಳ್ಳುತ್ತಿರುವುದು ತಿಳಿದು ಖುಷಿಯಾಯಿತು’ ಎಂದು ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದೇ ವಾರದಲ್ಲಿ 18 ಲಕ್ಷಕೋಟಿ ರೂ ಕಳೆದುಕೊಂಡ ಹೂಡಿಕೆದಾರರು; ಷೇರುಪೇಟೆ ಈ ಪರಿ ಅಲುಗಾಡುತ್ತಿರುವುದೇಕೆ?

ಜುಲೈ ಕೊನೆಯ ವಾರದಲ್ಲಿ ಗುಜರಾತ್​ನ ಗಾಂಧಿನಗರದಲ್ಲಿ ನಡೆದ ಸೆಮಿಕಾನ್ ಇಂಡಿಯಾ 2023 ಕಾರ್ಯಕ್ರಮದಲ್ಲಿ ಎಎಂಡಿ ಸಂಸ್ಥೆ ಭಾರತದಲ್ಲಿ 400 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಪ್ರಕಟಿಸಿತ್ತು. ಎಎಂಡಿ ಭಾರತದಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿ ಎರಡು ದಶಕಗಳೇ ಗತಿಸಿವೆ. ಬೆಂಗಳೂರು, ದೆಹಲಿ ಸೇರಿದಂತೆ 10 ಕಡೆ ಅದರ ಕಚೇರಿಗಳಿವೆ. 6,500ಕ್ಕೂ ಹೆಚ್ಚು ಉದ್ಯೋಗಿಗಳು ಭಾರತದಲ್ಲಿ ಎಎಂಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಈಗ ಬೆಂಗಳೂರಿನಲ್ಲಿ ಈಗಾಗಲೇ ಇರುವ ಕಚೇರಿ ಜೊತೆಗೆ ಸೆಮಿಕಂಡಕ್ಟರ್ ಆರ್ ಅಂಡ್ ಡಿ ಚಿಪ್ ಡಿಸೈನ್ ಸೆಂಟರ್ ಅನ್ನು 5,00,000 ಚದರಡಿ ಜಾಗದಲ್ಲಿ ಹೊಸದಾಗಿ ಸ್ಥಾಪಿಸಲಾಗುತ್ತಿದೆ. ಅದರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಇನ್ನೆರಡು ತಿಂಗಳೊಳಗೆ ಸಿದ್ಧವಾಗಬಹುದು. ಈ ಸೆಂಟರ್​ನಲ್ಲಿ ಬಹಳಷ್ಟು ಲ್ಯಾಬ್​ಗಳು, ಆಧುನಿಕ ಪೂರಕ ಉಪಕರಣ ಇತ್ಯಾದಿ ಇರಲಿವೆ.

ಇದನ್ನೂ ಓದಿ: Semiconductor Supply Chain: ಸೆಮಿಕಂಡಕ್ಟರ್ ಯೋಜನೆ: ಭಾರತ-ಜಪಾನ್ ಪಾಲುದಾರಿಕೆಗೆ ಕೇಂದ್ರ ಸಂಪುಟ ಅನುಮೋದನೆ

ಇದು ಭಾರತದ ಅತಿದೊಡ್ಡ ಆರ್ ಅಂಡ್ ಡಿ ಡಿಸೈನ್ ಸೆಂಟರ್ ಆಗಲಿದ್ದು, ಇದರಲ್ಲಿ ಅತ್ಯುತ್ತಮ ಸೆಮಿಕಂಡಕ್ಟರ್ ಎಂಜಿನಿಯರುಗಳು ಮತ್ತು ಸಂಶೋಧಕರಿಗೆ ಒಳ್ಳೆಯ ಉದ್ಯೋಗಾವಕಾಶ ಇರಲಿದೆ. ಸೆಮಿಕಂಡಕ್ಟರ್ ಚಿಪ್ ತಯಾರಿಸುವ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ಗುರಿ ಇಟ್ಟಿದ್ದು, ಅದಕ್ಕಾಗಿ ಪಿಎಲ್​ಐ ಸ್ಕೀಮ್ ಇತ್ಯಾದಿ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಎಎಂಡಿಯ ಸಂಶೋಧನಾ ಮತ್ತು ವಿನ್ಯಾಸ ಕೇಂದ್ರ ಸ್ಥಾಪನೆಯಾಗಲಿರುವುದು ದೊಡ್ಡ ಪುಷ್ಟಿ ಸಿಕ್ಕಂತಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Fri, 27 October 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ