Sign In

By signing in or creating an account, you agree with Associated Broadcasting Company's Terms & Conditions and Privacy Policy.

McDonald’s: ಭಾರತದಲ್ಲಿ 5,000 ಸಿಬ್ಬಂದಿ ನೇಮಕಾತಿ ಮಾಡಲಿದೆ ಮೆಕ್​​ಡೊನಾಲ್ಡ್ಸ್

ಮೆಕ್​​ಡೊನಾಲ್ಡ್ಸ್ ಭಾರತದಲ್ಲಿ ಅತಿದೊಡ್ಡ ರೆಸ್ಟೋರೆಂಟ್ ಅನ್ನು ಗುವಾಹಟಿಯಲ್ಲಿ ಸೋಮವಾರ ಆರಂಭಿಸಿದೆ. ಇದು 6,700 ಚದರ ಅಡಿಯಲ್ಲಿ ವ್ಯಾಪಿಸಿದ್ದು, ಒಂದು ಬಾರಿಗೆ 220 ಜನ ಕುಳಿತುಕೊಳ್ಳಬಲ್ಲ ಸಾಮರ್ಥ್ಯ ಹೊಂದಿದೆ.

McDonald's: ಭಾರತದಲ್ಲಿ 5,000 ಸಿಬ್ಬಂದಿ ನೇಮಕಾತಿ ಮಾಡಲಿದೆ ಮೆಕ್​​ಡೊನಾಲ್ಡ್ಸ್
ಮೆಕ್​​ಡೊನಾಲ್ಡ್ಸ್
Follow us
TV9 Web
| Updated By: Ganapathi Sharma

Updated on: Dec 13, 2022 | 3:51 PM

ನವದೆಹಲಿ: ಉದ್ಯೋಗ ಕಡಿತ, ಉದ್ಯೋಗಿಗಳ ವಜಾಕ್ಕೆ (Layoffs) ಸಂಬಂಧಿಸಿದ ಸುದ್ದಿಯೇ ಎಲ್ಲೆಡೆ ಕೇಳಿಬರುತ್ತಿರುವ ಸಂದರ್ಭದಲ್ಲಿ ಭಾರತದಲ್ಲಿ ಸುಮಾರು 5,000 ಸಿಬ್ಬಂದಿ ನೇಮಕಾತಿಗೆ ಮೆಕ್​​ಡೊನಾಲ್ಡ್ಸ್ (McDonald’s) ಚಿಂತನೆ ನಡೆಸಿದೆ. ಉತ್ತರ ಮತ್ತು ಪೂರ್ವ ಭಾರತದಲ್ಲಿ (North and East India) ಮುಂದಿನ ಮೂರು ವರ್ಷಗಳಲ್ಲಿ ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು. ಇದರೊಂದಿಗೆ ಈ ವಲಯದಲ್ಲಿ ಸುಮಾರು 300 ಮಳಿಗೆಗಳು ಆರಂಭವಾಗಲಿವೆ. ಇವುಗಳಿಗೆ ಸುಮಾರು 5,000 ಮಂದಿಯ ನೇಮಕಾತಿಗೆ ಚಿಂತನೆ ನಡೆಸಲಾಗಿದೆ ಎಂದು ಉತ್ತರ ಮತ್ತು ಪೂರ್ವ ಭಾರತ ವಲಯದ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ರಂಜನ್ ತಿಳಿಸಿದ್ದಾರೆ.

ಮೆಕ್​​ಡೊನಾಲ್ಡ್ಸ್ ಭಾರತದಲ್ಲಿ ಅತಿದೊಡ್ಡ ರೆಸ್ಟೋರೆಂಟ್ ಅನ್ನು ಗುವಾಹಟಿಯಲ್ಲಿ ಸೋಮವಾರ ಆರಂಭಿಸಿದೆ. ಇದು 6,700 ಚದರ ಅಡಿಯಲ್ಲಿ ವ್ಯಾಪಿಸಿದ್ದು, ಒಂದು ಬಾರಿಗೆ 220 ಜನ ಕುಳಿತುಕೊಳ್ಳಬಲ್ಲ ಸಾಮರ್ಥ್ಯ ಹೊಂದಿದೆ. ದೇಶದಲ್ಲಿ ಕಂಪನಿಯ ಮಳಿಗೆಗಳ ವಿಸ್ತರಣೆ ಯೋಜನೆಯ ಭಾಗವಾಗಿ ಈ ರೆಸ್ಟೋರೆಂಟ್ ಅನ್ನು ಆರಂಭಿಸಲಾಗಿದೆ. ಕಂಪನಿಯು ಕ್ಷಿಪ್ರ ಬೆಳವಣಿಗೆಯ ಹಾದಿಯಲ್ಲಿದ್ದು, ರಾಜ್ಯಗಳಲ್ಲಿ ಕಾರ್ಯಾಚರಣೆ ವಿಸ್ತರಣೆ ಎದುರುನೋಡುತ್ತಿದೆ ಎಂದು ರಾಜೀವ್ ರಂಜನ್ ಹೇಳಿದ್ದಾರೆ.

‘ಎಲ್ಲ ಸಮಸ್ಯೆಗಳನ್ನು ಹಿಮ್ಮೆಟ್ಟಿಸಿ ಉದ್ಯಮವನ್ನು ಬೆಳೆಸುವತ್ತ ದೃಷ್ಟಿ ನೆಟ್ಟಿದ್ದೇವೆ’ ಎಂದು ಅವರು ಹೇಳಿದ್ದಾರೆ. ಮೆಕ್​​ಡೊನಾಲ್ಡ್ಸ್​​​ನ ಈ ಹಿಂದಿನ ಪಾಲುದಾರರ ಜತೆಗಿನ ಕಾನೂನು ಸಂಘರ್ಷಕ್ಕೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ಇದನ್ನೂ ಓದಿ: Layoffs: ನೂರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸುತ್ತಿರುವ ಸ್ವಿಗ್ಗಿ, ವೇದಾಂತು, ಅಡೋಬ್

ಕಂಪನಿಯು ಉತ್ತರ ಮತ್ತು ಪೂರ್ವ ಭಾರತದಲ್ಲಿ ಸದ್ಯ 156 ರೆಸ್ಟೋರೆಂಟ್​ಗಳನ್ನು ಹೊಂದಿದೆ. ಇದನ್ನು ಮುಂದಿನ ಮೂರು ವರ್ಷಗಳಲ್ಲಿ ದ್ವಿಗುಣಗೊಳಿಸುವುದು ನಮ್ಮ ಆದ್ಯತೆಯಾಗಿದೆ. ಉದ್ಯೋಗಿಗಳ ಸಂಖ್ಯೆಯೂ ದುಪ್ಪಟ್ಟಾಗಲಿದೆ ಎಂದು ರಂಜ್ ಹೇಳಿದ್ದಾರೆ.

ಗುವಾಹಟಿ ಈಶಾನ್ಯ ಭಾರತದ ಹೆಬ್ಬಾಗಿಲಾಗಿದೆ. ಹೀಗಾಗಿ ಇದು ಪ್ರಮುಖ ಪ್ರದೇಶವಾಗಿದ್ದು, ಇಲ್ಲಿ ರೆಸ್ಟೋರೆಂಟ್ ಆರಂಭಿಸಿರುವುದು ನಮ್ಮ ವಿಸ್ತರಣೆ ಯೋಜನೆಗೆ ಪೂರಕವಾಗಲಿದೆ. ಈಶಾನ್ಯ ರಾಜ್ಯಗಳಲ್ಲಿ ಹಲವು ಮಳಿಗೆಗಳನ್ನು ತೆರೆಯಲು ಉದ್ದೇಶಿಸಿದ್ದೇವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕವಾಗಿ 20,000 ಉದ್ಯೋಗಿಗಳನ್ನು ವಜಾಗೊಳಿಸಲು ಅಮೆಜಾನ್ ಮುಂದಾಗಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಅದರ ಬೆನ್ನಲ್ಲೇ, ವೇದಾಂತು ಹಾಗೂ ಅಡೋಬ್ ನೂರಾರು ಉದ್ಯೋಗಿಗಳನ್ನು ಕೆಲಸದಿಂದ ತೆಗದುಹಾಕಲು ಮುಂದಾಗಿರುವ ಬಗ್ಗೆ ವರದಿಯಾಗಿತ್ತು. ಪದೇಪದೇ ಉದ್ಯೋಗಿಗಳ ವಜಾ ಸುದ್ದಿ ಕೇಳಿಬರುತ್ತಿರುವ ಸಂದರ್ಭದಲ್ಲೇ ಮೆಕ್​​ಡೊನಾಲ್ಡ್ಸ್ ನೇಮಕಾತಿಗೆ ಮುಂದಾಗಿರುವುದು ಭರವಸೆ ಮೂಡಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ