AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷೇರುಪೇಟೆ ಕುಸಿಯುತ್ತಿದೆಯಾ? ಜೂನ್ 4ರೊಳಗೆ ಖರೀದಿಸಿಬಿಡಿ: ಅಮಿತ್ ಶಾ ಸಲಹೆ ಕೇಳಿ

Amit Shah share market tips: ಷೇರು ಮಾರುಕಟ್ಟೆ ಇಳಿಕೆ ಆಗುತ್ತಿದೆ ಎಂದು ಚಿಂತೆ ಪಡಬೇಕಿಲ್ಲ. ಬೆಲೆ ಕುಸಿತವಾದರೆ ಷೇರುಗಳನ್ನು ಖರೀದಿಸಿ. ಜೂನ್ 4ರ ಬಳಿಕ ಷೇರು ಮಾರುಕಟ್ಟೆ ಹೊಸ ದಾಖಲೆ ಬರೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ. ಅವರ ಪ್ರಕಾರ ಈ ಬಾರಿ ಎನ್​ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಸ್ಥಿರ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಷೇರು ಮಾರುಕಟ್ಟೆ ಉತ್ತಮವಾಗಿ ಸ್ಪಂದಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಷೇರುಪೇಟೆ ಕುಸಿಯುತ್ತಿದೆಯಾ? ಜೂನ್ 4ರೊಳಗೆ ಖರೀದಿಸಿಬಿಡಿ: ಅಮಿತ್ ಶಾ ಸಲಹೆ ಕೇಳಿ
ಅಮಿತ್ ಶಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2024 | 3:12 PM

Share

ನವದೆಹಲಿ, ಮೇ 13: ಷೇರು ಮಾರುಕಟ್ಟೆ (stock market) ಇತ್ತೀಚೆಗೆ ಸತತವಾಗಿ ಕುಸಿಯುತ್ತಿದೆ. ಬಹಳಷ್ಟು ಜನರು ಈ ಇಳಿಕೆಯ ಟ್ರೆಂಡ್ ಅನ್ನು ಲೋಕಸಭಾ ಚುನಾವಣೆಗೆ ಲಿಂಕ್ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿರುವುದು ಇದಕ್ಕೆ ಕಾರಣ ಇರಬಹುದು ಎಂಬುದು ಕೆಲವರ ಭಾವನೆ. ಎನ್​ಡಿಎ ಮೈತ್ರಿಕೂಟ 300ಕ್ಕಿಂತ ಕಡಿಮೆ ಸ್ಥಾನ ಪಡೆಯುವ ಸಾಧ್ಯತೆ ಎನ್ನುವ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಕುಸಿತವಾಗುತ್ತಿರಬಹುದು ಎನ್ನಲಾಗುತ್ತಿದೆ. ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಈ ಷೇರು ಕುಸಿತಕ್ಕೂ ಲೋಕಸಭಾ ಚುನಾವಣೆಗೂ ಲಿಂಕ್ ಮಾಡಲು ನಿರಾಕರಿಸಿದ್ದಾರೆ. ಈ ಹಿಂದೆ ಷೇರು ಮಾರುಕಟ್ಟೆ ಇದಕ್ಕಿಂತ ಹೆಚ್ಚು ಕುಸಿತ ಕಂಡಿದ್ದಿದೆ. ಈಗ ಕುಸಿಯುತ್ತಿರುವುದು ಚುನಾವಣೆಗೆ ಸಂಬಂಧಿಸಿದ್ದಲ್ಲ ಎಂದು ಹೇಳಿರುವ ಅಮಿತ್ ಶಾ, ಹೂಡಿಕೆದಾರರಿಗೆ ಟಿಪ್ಸ್ ಕೊಡಲು ಮರೆಯಲಿಲ್ಲ.

ವದಂತಿಗಳು ಏನೇ ಇರಲಿ. ಷೇರುಬೆಲೆ ಕುಸಿಯುತ್ತಿರುವ ಹೊತ್ತಿನಲ್ಲಿ ಖರೀದಿಸಿರಿ. ಜೂನ್ 4ರ ಬಳಿಕ ಷೇರುಬೆಲೆ ಭರ್ಜರಿಯಾಗಿ ಏರಲಿದೆ ಎಂದು ಅಮಿತ್ ಶಾ ಹೇಳಿದರೆಂದು ಎನ್​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಕೀಯ ಚಾಣಕ್ಯ ಅಮಿತ್ ಶಾ ಹೂಡಿಕೆಯಲ್ಲೂ ಚಾಣಕ್ಯನೇ; 250ಕ್ಕೂ ಹೆಚ್ಚು ಷೇರುಗಳ ಆಯ್ಕೆಗಳಲ್ಲಿ ಬುದ್ಧಿವಂತಿಕೆ ನೋಡಿ

ಈ ಮೇ ತಿಂಗಳಲ್ಲಿ ನಿನ್ನೆಯವರೆಗೂ ಸೆನ್ಸೆಕ್ಸ್ ಶೇ. 4ರಷ್ಟು ಕುಸಿತ ಕಂಡಿತ್ತು. ನಿಫ್ಟಿ ಕೂಡ ಗಣನೀಯವಾಗಿ ಇಳಿದಿತ್ತು. ಇವತ್ತು ಬೆಳಗ್ಗೆಯೂ ವಿವಿಧ ಸೂಚ್ಯಂಕಗಳು ಪ್ರಪಾತಕ್ಕೆ ಹೋಗುವ ಕುರುಹು ತೋರಿದ್ದವರಾದರೂ ದಿನಾಂತ್ಯದ ವೇಳೆಗೆ ಬಹಳಷ್ಟು ಚೇತರಿಸಿಕೊಂಡಿವೆ.

‘ಬೇರೆ ಬೇರೆ ಕಾರಣಗಳಿಗೆ ಷೇರು ಮಾರುಕಟ್ಟೆಯಲ್ಲಿ ಏರಿಳಿತಗಳಾಗುತ್ತಿರುತ್ತವೆ. ಆದರೆ, ನನ್ನ ಈ ಮಾತನ್ನು ಗಮನಿಸಿ. ಜೂನ್ 4ರಂದು ಷೇರು ಮಾರುಕಟ್ಟೆ ಮತ್ತೊಮ್ಮೆ ಹೊಸ ದಾಖಲೆ ಬರೆಯಲಿದೆ,’ ಎಂದು ಕೇಂದ್ರ ಗೃಹ ಸಚಿವರು ಅಭಿಪ್ರಾಯಪಟ್ಟಿದ್ದಾರೆ.

‘ಕೇಂದ್ರದಲ್ಲಿ ಸ್ಥಿರ ಸರ್ಕಾರ ಬಂದಾಗೆಲ್ಲಾ ಮಾರುಕಟ್ಟೆ ಉತ್ತಮವಾಗಿರುತ್ತದೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಮರಳುತ್ತಿದ್ದಾರೆ. ಇದು ನಾನು ನುಡಿಯುತ್ತಿರುವ ಭವಿಷ್ಯ.

ಇದನ್ನೂ ಓದಿ: ಷೇರುಪೇಟೆ ರಕ್ತದೋಕುಳಿ ಮಧ್ಯೆ ಶೇ. 45ರಷ್ಟು ಹೆಚ್ಚಿನ ಬೆಲೆಗೆ ಲಿಸ್ಟ್ ಆದ ಬೆಂಗಳೂರಿನ ಇಂಡಿಜೀನ್ ಷೇರು

‘ಇವತ್ತು ನಾಲ್ಕನೇ ಹಂತದ ಚುನಾವಣೆ ಇದೆ. ಮೂರು ಹಂತದ ಚುನಾವಣೆಗಳಲ್ಲಿ ಬಿಜೆಪಿ 190ಕ್ಕೂ ಹೆಚ್ಚು ಸ್ಥಾನ ಗಳಿಸಬಹುದು ಎಂದು ಭಾವಿಸಿದ್ದೇನೆ. ಇವತ್ತಿನ ನಾಲ್ಕನೇ ಹಂತದ ಚುನಾವಣೆಯಲ್ಲೂ ಬಿಜೆಪಿಗೆ ಉತ್ತಮ ಬೆಂಬಲ ಸಿಗಬಹುದು. ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯಬಹುದು ಎಂದು ಎಣಿಸಿದ್ದೇನೆ. ಈಶಾನ್ಯದಲ್ಲೂ ಉತ್ತಮ ಫಲಿತಾಂಶ ಸಿಗಬಹುದು,’ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ