AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ನೀತಿ ಆಯೋಗ್ ಸಿಇಒ ಅಮಿತಾಭ್ ಕಾಂತ್ ಇಂಡಿಗೋ ನಿರ್ದೇಶಕರಾಗಿ ನೇಮಕ

Amitabh Kant appointed as director of Indigo: ಭಾರತದ ಜಿ20 ಶೆರ್ಪಾ ಹಾಗೂ ಮಾಜಿ ನೀತಿ ಆಯೋಗ್ ಸಿಇಒ ಅಮಿತಾಭ್ ಕಾಂತ್ ಅವರನ್ನು ಇಂಡಿಗೋ ಸಂಸ್ಥೆ ತನ್ನ ನಿರ್ದೇಶಕರ ಮಂಡಳಿಗೆ ನೇಮಕ ಮಾಡಿಕೊಂಡಿದೆ. ಇಂಟರ್​​ಗ್ಲೋಬ್ ಏವಿಯೇಶನ್ ಸಂಸ್ಥೆಯ ನಿರ್ದೇಶಕರ ಮಂಡಳಿ ಸಭೆಯಲ್ಲಿ ಈ ನೇಮಕಾತಿಗೆ ಅನುಮೋದನೆ ಸಿಕ್ಕಿದೆ. ಕೇಂದ್ರ ವಿಮಾನಯಾನ ಸಚಿವಾಲಯದಿಂದ ಒಪ್ಪಿಗೆ ಸಿಕ್ಕ ಬಳಿಕ ಕಾಂತ್ ಅವರು ನಿರ್ದೇಶಕ ಸ್ಥಾನದ ಅಧಿಕಾರ ಪಡೆಯುತ್ತಾರೆ.

ಮಾಜಿ ನೀತಿ ಆಯೋಗ್ ಸಿಇಒ ಅಮಿತಾಭ್ ಕಾಂತ್ ಇಂಡಿಗೋ ನಿರ್ದೇಶಕರಾಗಿ ನೇಮಕ
ಅಮಿತಾಭ್ ಕಾಂತ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 04, 2025 | 12:33 PM

Share

ನವದೆಹಲಿ, ಜುಲೈ 4: ಭಾರತದ ಅತಿದೊಡ್ಡ ಏರ್​ಲೈನ್ಸ್ ಸಂಸ್ಥೆಯಾದ ಇಂಡಿಗೋದ ನಿರ್ದೇಶಕರಾಗಿ ಮಾಜಿ ನೀತಿ ಆಯೋಗ್ ಸಿಇಒ ಅಮಿತಾಭ್ ಕಾಂತ್ (Amitabh Kant) ಅವರನ್ನು ನೇಮಕ ಮಾಡಲಾಗಿದೆ. ಭಾರತದ ಜಿ20 ಶೆರ್ಪಾ ಆಗಿಯೂ ಕಾರ್ಯನಿರ್ವಹಿಸಿದ್ದ ಅಮಿತಾಭ್ ಕಾಂತ್ ಅವರನ್ನು ತನ್ನ ಮಂಡಳಿಯ ನಿರ್ದೇಶಕರಾಗಿ ನೇಮಿಸಿರುವ ಸಂಗತಿಯನ್ನು ಇಂಡಿಗೋ ಸಂಸ್ಥೆ ಪ್ರಕಟಿಸಿದೆ. ಆದರೆ, ಷೇರುದಾರರ ಅನುಮೋದನೆ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ (Ministry of Civil Aviation) ಅನುಮೋದನೆ ಸಿಕ್ಕ ಬಳಿಕ ಅಮಿತಾಭ್ ಕಾಂತ್ ಅವರ ನಿರ್ದೇಶಕ ಸ್ಥಾನ ಊರ್ಜಿತವಾಗುತ್ತದೆ.

‘2025ರ ಜುಲೈ 3ರಂದು ನಡೆದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಅಮಿತಾಭ್ ಕಾಂತ್ ಅವರನ್ನು ನಿರ್ದೇಶಕರಾಗಿ ನೇಮಕ ಮಾಡಲು ಅನುಮೋದನೆ ಮಾಡಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನದಿಂದ ಸೆಕ್ಯೂರಿಟಿ ಕ್ಲಿಯರೆನ್ಸ್ ದೊರೆತ ಬಳಿಕ ಅವರ ನಿರ್ದೇಶಕ ಸ್ಥಾನದ ಅಧಿಕಾರ ಚಾಲನೆಗೆ ಬರುತ್ತದೆ. ಕಂಪನಿಯ ಷೇರುದಾರರ ಅನುಮೋದನೆಯೂ ಅಗತ್ಯ ಇದೆ’ ಎಂದು ಇಂಟರ್ ಗ್ಲೋಬ್ ಏವಿಯೇಶನ್ ಸಂಸ್ಥೆ ಎನ್ನ ಎಕ್ಸ್​​ಚೇಂಜ್ ಫೈಲಿಂಗ್​​ನಲ್ಲಿ ತಿಳಿಸಿದೆ.

ಇದನ್ನೂ ಓದಿ: ಫಾಕ್ಸ್​ಕಾನ್ ಘಟಕದಿಂದ 300ಕ್ಕೂ ಹೆಚ್ಚು ಚೀನೀ ಉದ್ಯೋಗಿಗಳು ವಾಪಸ್; ಭಾರತಕ್ಕೆ ಹಿನ್ನಡೆ ತರಲು ಚೀನಾದ ಸಂಚು?

ಪ್ರಸಕ್ತ ಇಂಡಿಗೋ ನಿರ್ದೇಶಕರ ಮಂಡಳಿಯಲ್ಲಿ ಇರುವ ಸದಸ್ಯರಿವರು

  • ವಿಕ್ರಮ್ ಸಿಂಗ್ ಮೆಹ್ತಾ: ಇಂಡಿಗೋ ಛೇರ್ಮನ್
  • ರಾಕೇಶ್ ಗಂಗವಾಲ್: ಇಂಡಿಗೋ ಸಂಸ್ಥಾಪಕರು
  • ರಾಹುಲ್ ಭಾಟಿಯಾ: ಇಂಡಿಗೋ ಸಹ-ಸಂಸ್ಥಾಪಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್
  • ಪೀಟರ್ ಎಲ್ಬರ್ಸ್: ಇಂಡಿಗೋ ಸಿಇಒ

ಈಗ ಅಮಿತಾಭ್ ಕಾಂತ್ ಅವರು ನಾನ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ನೇಮಕವಾಗಿದ್ದಾರೆ. ನೀತಿ ರೂಪಿಸುವ ಕಾರ್ಯಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಅಮಿತಾಭ್ ಅವರು ಇಂಡಿಗೋ ಮೂಲಕ ವಿಮಾನಯಾನ ಕ್ಷೇತ್ರಕ್ಕೆ ಜೋಡಿತಗೊಂಡಿರುವುದು ಗಮನಾರ್ಹ ಸಂಗತಿ. ಭಾರತದಲ್ಲಿ ಈ ಕ್ಷೇತ್ರ ಗಣನೀಯವಾಗಿ ಬೆಳೆಯುತ್ತಿದೆಯಾದರೂ ನಿಶ್ಚಿತವಾಗಿ ಲಾಭದಾಯಕ ಎಂಬಂತೆ ಇಲ್ಲ. ಅಮಿತಾಭ್ ಕಾಂತ್ ಅವರಿಂದ ಒಂದಷ್ಟು ಬದಲಾವಣೆಯ ನಿರೀಕ್ಷೆ ಇದೆ.

ಇದನ್ನೂ ಓದಿ: ಹೊಸ ದ್ವೀಪ ಖರೀದಿಸಿ ಟೆಕ್ಕಿಗಳಿಗೆಂದೇ ಹೊಸ ದೇಶ ಕಟ್ಟಲು ಹೊರಟ ಭಾರತೀಯ ಅಮೆರಿಕನ್ ಉದ್ಯಮಿ ಬಾಲಾಜಿ ಶ್ರೀನಿವಾಸನ್

1956ರಲ್ಲಿ ವಾರಾಣಸಿಯಲ್ಲಿ ಜನಿಸಿದ ಅಮಿತಾಭ್ ಕಾಂತ್ 1980ರಲ್ಲಿ ಐಎಎಸ್ ಅಧಿಕಾರಿಯಾಗಿ ಸಾರ್ವಜನಿಕ ಸೇವೆ ಆರಂಭಿಸಿದರು. 2016ರಿಂದ 2022ರವರೆಗೆ ಅವರು ನೀತಿ ಆಯೋಗ್​​ನ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ನೀತಿ ಆಯೋಗ್​​ನ ಎರಡನೇ ಸಿಇಒ ಅವರು. ಈ ಜವಾಬ್ದಾರಿ ಬಳಿಕ ಅವರು 2022ರಿಂದ ಭಾರತದ ಜಿ20 ಶೆರ್ಪಾ ಆಗಿ ಕೆಲಸ ಮಾಡಿದ್ದರು. 2025ರ ಜೂನ್ 16ರವರೆಗೂ ಅವರು ಶೆರ್ಪಾ ಆಗಿದ್ದರು.

ನಾಲ್ಕು ದಶಕಗಳ ಸಾರ್ವಜನಿಕ ಸೇವೆಗೆ ಅವರು ಜೂನ್​​ನಲ್ಲಿ ವಿದಾಯ ಹೇಳಿದ್ದರು. ನಿವೃತ್ತಿ ನಂತರ ಅವರು ಭಾರತದ ಪ್ರಗತಿಗೆ ತಮ್ಮ ಕೊಡುಗೆ ನೀಡುವ ಇರಾದೆ ವ್ಯಕ್ತಪಡಿಸಿದ್ದರು. ಹೊಸ ಅವಕಾಶಗಳನ್ನು ಪಡೆದು ಹೊಸ ಅಧ್ಯಾಯ ಆರಂಭಿಸಲು ಬಯಸುವುದಾಗಿ ಇತ್ತೀಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು