AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amul Price hike: ಅಮುಲ್ ದರ ಏರಿಕೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ಅಮುಲ್​ ಬ್ರ್ಯಾಂಡ್​ ಅಡಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್​​ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ಅಮುಲ್​ ಕಂಪನಿಯ ಎಲ್ಲ ರೀತಿಯ ಹಾಲಿನ ಬೆಲೆಯನ್ನು ಲೀಟರ್​ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಈ ಬೆಲೆ ಏರಿಕೆ ಇಂದಿನಿಂದಲೇ ಜಾರಿಯಾಗಲಿದೆ ಎಂದು ಜಿಸಿಎಂಎಂಎಫ್​ ತಿಳಿಸಿದೆ.

Amul Price hike: ಅಮುಲ್ ದರ ಏರಿಕೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ
ಅಮುಲ್​
ವಿವೇಕ ಬಿರಾದಾರ
|

Updated on:Jun 03, 2024 | 7:23 AM

Share

ನವದೆಹಲಿ, ಜೂನ್​. 03: ದೇಶದ ಗಮನ ಲೋಕಸಭೆ ಚುನಾವಣೆ (Lok Sabha Election) ಫಲಿತಾಂಶದತ್ತ ನೆಟ್ಟಿದೆ. ಈ ಮಧ್ಯೆ ಅಮುಲ್​ ಕಂಪನಿ (Amul Company) ಇಂದಿನಿಂದಲೇ (ಜೂ. 03 ಸೋಮವಾರ) ಜಾರಿಗೆ ಬರುವಂತೆ ಎಲ್ಲ ರೀತಿಯ ಹಾಲಿನ (Milk) ಬೆಲೆಯನ್ನು ಲೀಟರ್​ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಈ ಕುರಿತು ಗುಜರಾತ್​​ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (GCMMF) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಪಾದನೆಯ ಒಟ್ಟಾರೆ ವೆಚ್ಚದ ಹೆಚ್ಚಳದಿಂದಾಗಿ ಅಮುಲ್​ ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.

ಈ ಬೆಲೆ ಏರಿಕೆ ಅಮುಲ್​ ಗೋಲ್ಡ್​, ಅಮುಲ್​ ತಾಜಾ ಮತ್ತು ಅಮುಲ್​ ಶಕ್ತಿ ಅಂಗ ಉತ್ಪನ್ನಗಳಿಗೂ ಅನ್ವಯವಾಗಲಿದೆ. ಆದರೆ ಈ ಬೆಲೆ ಏರಿಕೆ ಅಮುಲ್​ ತಾಜಾದ ಸಣ್ಣ ಪಾಕೇಟ್​​ನ ಅನ್ವಯವಾಗುವುದಿಲ್ಲವೆಂದು ಜಿಸಿಎಂಎಂಎಫ್​​ ಹೇಳಿದೆ. ಪ್ರತಿ ಲೀಟರ್​ಗೆ 2 ರೂ. ಹೆಚ್ಚಳದೊಂದಿಗೆ ದರ ಶೇ 3-4ರಷ್ಟು ಅಧಿಕವಾಗಲಿದೆ.

ಈ ಬಗ್ಗೆ ಅಮುಲ್​ ಬ್ರ್ಯಾಂಡ್​ ಅಡಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಜಿಸಿಎಂಎಂಎಫ್​ನ ಎಂಡಿ ಜಯೇನ್​ ಮೆಹ್ತಾ ಮಾತನಾಡಿ, ಹೆಚ್ಚಿದ ಉತ್ಪಾದಾನಾ ವೆಚ್ಚವನ್ನು ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.

ಪರಿಷ್ಕೃತ ದರ ಹೀಗಿದೆ

500 ಎಂಎಲ್​ನ ಅಮುಲ್​ ಗೋಲ್ಡ್​ ಬೆಲೆ 33ರೂ.ಗೆ ಆಗಿದೆ. ಒಂದು ಲೀಟರ್​ಗೆ 64 ರೂ. ನಿಂದ 66 ರೂ.ಗೆ ಆಗಿದೆ.

500 ಎಂಎಲ್​ನ ಅಮುಲ್​ ಎಮ್ಮೆಯ ಹಾಲಿನ ದರ 36 ರೂ.ಗೆ ಆಗಿದೆ.

500 ಎಂಎಲ್​ನ ಅಮುಲ್​ ಶಕ್ತಿ ಹಾಲಿನ ಬೆಲೆ 30ರೂ. ಆಗಿದೆ.

ಜೆಸಿಎಂಎಂಎಫ್​ ಕೊನೆಯ ಬಾರಿಗೆ ಹಾಲಿನ ಬೆಲೆಯನ್ನು 2023ರ ಫೆಬ್ರವರಿಯಲ್ಲಿ ಹೆಚ್ಚಿಸಿತ್ತು.

ನಂದಿನಿ ಹಾಲಿನ ದರ

ನಂದಿನಿ ಹಾಲಿನ ದರವನ್ನು ಕೆಎಂಎಫ್​​​ ಕಳೆದ ವರ್ಷ ಆಗಸ್ಟ್​ನಲ್ಲಿ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಿತ್ತು. ಬೆಲೆ ಏರಿಕೆ ನಂತರ ಲೀಟರ್‌ ಟೋನ್ಡ್ ಹಾಲಿಗೆ 42 ರೂ., ಹೋಮೋಜೆನೈಸ್ಡ್ ಹಾಲಿಗೆ 43 ರೂ., ಪಾಶ್ಚರೀಕರಿಸಿದ ಹಾಲಿಗೆ 46 ರೂ. ಮತ್ತು ಶುಭಂ ವಿಶೇಷ ಹಾಲಿಗೆ 48 ರೂ. ಆಗಿದೆ. ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Mon, 3 June 24

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ