Anant Ambani Birthday: ಅಂಬಾನಿ ಕುಟುಂಬದ ಕಿರಿಯ ಕುಡಿ ಅನಂತ್ ಜನ್ಮದಿನ

30th Birthday of Anant Ambani: ಮುಕೇಶ್ ಅಂಬಾನಿ ಅವರ ಮೂರನೇ ಹಾಗೂ ಕೊನೆಯ ಮಗ ಅನಂತ್ ಅಂಬಾನಿ ಅವರ ಜನ್ಮದಿನ ಇಂದು ಏಪ್ರಿಲ್ 10ರಂದು ಇದೆ. 1995ರಲ್ಲಿ ಹುಟ್ಟಿದ ಅನಂತ್ ಇಂದು 30ನೇ ವಯಸ್ಸಿಗೆ ಅಡಿ ಇಟ್ಟಿದ್ದಾರೆ. ಗುಜರಾತ್​ನ ಜಾಮ್​ನಗರದಲ್ಲಿ ಅವರ ಜನ್ಮದಿನ ಕಾರ್ಯಕ್ರಮ ನಡೆಯಲಿದೆ. ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಿರುವ ಅನಂತ್, ರಿಲಾಯನ್ಸ್ ನ್ಯೂ ಎನರ್ಜಿ ಬಿಸಿನೆಸ್ ಅನ್ನು ನೋಡಿಕೊಳ್ಳುತ್ತಾರೆ. ವನತಾರ ಯೋಜನೆ ಅವರ ಮನಸಿಗೆ ಪ್ರಿಯವಾದುದು. ರಾಧಿಕಾ ಮರ್ಚಂಟ್ ಜೊತೆ ನಿಶ್ಚಿತಾರ್ಥ ಆಗಿದ್ದು, ಜುಲೈನಲ್ಲಿ ಮದುವೆ ಮಹೋತ್ಸವ ನಡೆಯಲಿದೆ.

Anant Ambani Birthday: ಅಂಬಾನಿ ಕುಟುಂಬದ ಕಿರಿಯ ಕುಡಿ ಅನಂತ್ ಜನ್ಮದಿನ
ಅನಂತ್ ಅಂಬಾನಿ
Follow us
|

Updated on: Apr 10, 2024 | 11:02 AM

ಏಪ್ರಿಲ್ 10: ವಿವಾಹ ಪೂರ್ವ ಕಾರ್ಯಕ್ರಮಕ್ಕೆ ವಿವಿಧ ದೇಶಗಳ ಪ್ರಧಾನಿಗಳು, ಜಾಗತಿಕ ಉದ್ಯಮಪತಿಗಳು ಸೇರಿದಂತೆ ಘಟಾನುಘಟಿಗಳೇ ಬಂದಿದ್ದ ಅನಂತ್ ಅಂಬಾನಿ ಅವರ ಜನ್ಮದಿನ (Anant Ambani birthday) ಇಂದು. ಹೆಸರಾಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಅವರಿಗೆ ಈಗ ವಯಸ್ಸು 29 ವರ್ಷ ಪೂರ್ಣಗೊಂಡು 30ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಗುಜರಾತ್​ನ ಜಾಮ್​ನಗರ್​ನಲ್ಲಿ ಜನ್ಮದಿನದ ಕಾರ್ಯಕ್ರಮ ನಡೆಯಲಿದ್ದು ಸಾಕಷ್ಟು ಸೆಲಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ದಢೂತಿ ದೇಹ ಹೊಂದಿದ್ದ ಅವರು ಅಚ್ಚರಿ ರೀತಿಯಲ್ಲಿ ಮೈ ಕರಗಿಸಿ ಈಗ ಹ್ಯಾಂಡ್ಸಮ್ ಆಗಿದ್ದಾರೆ. ಪ್ರಾಣಿಪ್ರಿಯರಾಗಿ ಹೆಸರುವಾಸಿಯಾಗಿರುವ ಅವರು ರಿಲಾಯನ್ಸ್​ನ ನ್ಯೂ ಎನರ್ಜಿ ವ್ಯವಹಾರಗಳನ್ನು ನೋಡಿಕೊಳ್ಳುತ್ತಾರೆ.

ಅನಂತ್ ಅಂಬಾನಿ ರಿಲಾಯನ್ಸ್ ಗ್ರೂಪ್​ನ ವಿವಿಧ ಸಂಸ್ಥೆಗಳ ಆಡಳಿತ ಮಂಡಳಿಯಲ್ಲಿದ್ದಾರೆ. ಜಿಯೋ ಪ್ಲಾಟ್​ಫಾರ್ಮ್ಸ್ ಮತ್ತು ರಿಲಾಯನ್ಸ್ ರೀಟೇಲ್ ವೆಂಚರ್ಸ್ ಸಂಸ್ಥೆಗಳ ಮಂಡಳಿ ಸದಸ್ಯರಾಗಿದ್ದಾರೆ. ಆರ್​ಐಎಲ್ ಮತ್ತು ರಿಲಾಯನ್ಸ್ ಫೌಂಡೇಶನ್​ನ ಮಂಡಳಿ ನಿರ್ದೇಶಕರಾಗಿದ್ದಾರೆ. ರಿಲಾಯನ್ಸ್ ಇಂಡಸ್ಟ್ರೀಸ್​ನ ನಿರ್ದೇಶಕರ ಮಂಡಳಿಗೆ ಅನಂತ್ ಮಾತ್ರವಲ್ಲದೇ ಅವರ ಅಣ್ಣ ಮತ್ತು ಅಕ್ಕರಾದ ಆಕಾಶ್ ಮತ್ತು ಇಶಾ ಅಂಬಾನಿಯೂ 2023ರ ಆಗಸ್ಟ್​​ನಲ್ಲಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: ಮಾನವ ವರ್ಸಸ್ ಯಂತ್ರ: ಇನ್ನೊಂದೇ ವರ್ಷದಲ್ಲಿ ಬುದ್ಧಿವಂತಿಕೆಯಲ್ಲಿ ಮನುಷ್ಯನನ್ನು ಮೀರಿಸುತ್ತೆ ಎಐ: ಇದು ಇಲಾನ್ ಮಸ್ಕ್ ಭವಿಷ್ಯ

ಅಂಬಾನಿ ಕುಟುಂಬದ ಮೂಲ ಗುಜರಾತ್ ಆದರೂ ನೆಲಸಿರುವುದು ಮುಂಬೈನಲ್ಲಿ. ಇಲ್ಲಿಯೇ ಹುಟ್ಟಿದ ಅನಂತ್ ಅಂಬಾನಿ ಅಮೆರಿಕದ ಖ್ಯಾತ ಬ್ರೌನ್ ಯೂನಿವರ್ಸಿಟಿಯ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ಮಾಡಿದ್ದಾರೆ. ಗುಜರಾತ್​ನ ಜಾಮ್​ನಗರದಲ್ಲಿ ರಿಲಾಯನ್ಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ನವೀಕರಣ ಇಂಧನದ ವ್ಯವಹಾರದ ಚುಕ್ಕಾಣಿ ಹಿಡಿದಿದ್ದಾರೆ.

ಪ್ರಾಣಿಪ್ರಿಯರಾಗಿರುವ ಅವರು ಗುಜರಾತ್​ನ ಜಾಮ್​ನಗರದಲ್ಲಿ 3,000 ಎಕರೆ ಪ್ರದೇಶದಲ್ಲಿ ವನತಾರ ಎಂಬ ತಾಣ ನಿರ್ಮಿಸುತ್ತಿದ್ದಾರೆ. ಇದರಲ್ಲಿ ಗಾಯಗೊಂಡ ಮತ್ತು ಅಸಹಾಯಕಗೊಂಡ ಪ್ರಾಣಿಗಳ ರಕ್ಷಣೆ, ಚಿಕಿತ್ಸೆ, ಪಾಲನೆ ಇತ್ಯಾದಿ ವ್ಯವಸ್ಥೆ ಇರುತ್ತದೆ.

ಇದನ್ನೂ ಓದಿ: ಕೋಲಾರದಲ್ಲಿ ಟಾಟಾ ನಿರ್ಮಿತ ಮಿಲಿಟರಿ ಸೆಟಿಲೈಟ್ ಅಮೆರಿಕದ ಸ್ಪೇಸ್​ಎಕ್ಸ್ ರಾಕೆಟ್ ಮುಖಾಂತರ ಭೂಕಕ್ಷೆಗೆ

ತಮ್ಮ ಕುಟುಂಬದ ಜೊತೆ ಬಹಳ ಎಮೋಶನಲ್ ಆಗಿ ಗುರುತಿಸಿಕೊಂಡಿರುವ ಅನಂತ್ ಅಂಬಾನಿ ಅವರ ವಿವಾಹ ನಿಶ್ಚಯ ರಾಧಿಕಾ ಮರ್ಚಂಟ್ ಜೊತೆಗೆ ಆಗಿದೆ. ಖ್ಯಾತ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್ ಅವರ ಪುತ್ರಿಯನ್ನು ವರಿಸಲಿದ್ದಾರೆ. ರಾಜಸ್ಥಾನದ ನಾಥದ್ವಾರ ಎಂಬಲ್ಲಿರುವ ಶ್ರೀನಾಥ್​ಜಿ ಮಂದಿರದಲ್ಲಿ 2022ರ ಡಿಸೆಂಬರ್​ನಲ್ಲಿ ಇಬ್ಬರ ನಿಶ್ಚಿತಾರ್ಥ ನಡೆದಿತ್ತು. ಈ ವರ್ಷ ಜುಲೈ ತಿಂಗಳಲ್ಲಿ ವಿವಾಹ ಮಹೋತ್ಸವ ಜರುಗಲಿದೆ. ಈ ವಿವಾಹಕ್ಕೆ ಮುನ್ನ ಮೂರು ದಿನಗಳ ಕಾಲ ಪ್ರೀವೆಡ್ಡಿಂಗ್ ಕಾರ್ಯಕ್ರಮ ನಡೆದಿತ್ತು. ಮಾರ್ಕ್ ಜುಕರ್ಬರ್ಗ್, ಬಿಲ್ ಗೇಟ್ಸ್, ಇವಾಂಕಾ ಟ್ರಂಪ್ ಇತ್ಯಾದಿ ಸೆಲಬ್ರಿಟಿಗಳು, ಉದ್ಯಮಿಗಳು ಪಾಲ್ಗೊಂಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ