AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ನೋಡಿ ಕೆಲವರಿಗೆ ಉರಿ..! ನಗುತ್ತಲೇ ಕರ್ನಾಟಕವನ್ನು ತಿವಿದ ಆಂಧ್ರ ಸಚಿವ ನರ ಲೋಕೇಶ್

Andhra minister Nara Lokesh trolls Karnataka indirectly: ಗೂಗಲ್​ನಿಂದ ಆಂಧ್ರದಲ್ಲಿ 15 ಬಿಲಿಯನ್ ಡಾಲರ್ ಹೂಡಿಕೆಯಲ್ಲಿ ಎಐ ಹಬ್ ಯೋಜನೆ ಪ್ರಕಟವಾಗಿದೆ. ಇದರ ಬೆನ್ನಲ್ಲೇ ಆಂಧ್ರ ಸಚಿವ ನರ ಲೋಕೇಶ್ ಎಕ್ಸ್ ಪೋಸ್ಟ್​ನಲ್ಲಿ ಪಕ್ಕದ ರಾಜ್ಯಗಳನ್ನು ಕಿಚಾಯಿಸಿದ್ದಾರೆ. ಆಂಧ್ರದ ಊಟದಂತೆ ಹೂಡಿಕೆಯೂ ಸ್ಪೈಸಿ. ನೆರೆ ರಾಜ್ಯದವರಿಗೆ ಉರಿ ಶುರುವಾಗಿದೆ ಎಂದಿದ್ದಾರೆ.

ಆಂಧ್ರ ನೋಡಿ ಕೆಲವರಿಗೆ ಉರಿ..! ನಗುತ್ತಲೇ ಕರ್ನಾಟಕವನ್ನು ತಿವಿದ ಆಂಧ್ರ ಸಚಿವ ನರ ಲೋಕೇಶ್
ನರ ಲೋಕೇಶ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 16, 2025 | 12:32 PM

Share

ವೈಜಾಗ್, ಅಕ್ಟೋಬರ್ 16: ಹೂಡಿಕೆದಾರರನ್ನು ಸೆಳೆಯುವ ವಿಚಾರದಲ್ಲಿ ರಾಜ್ಯ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗುತ್ತಿದೆ. ಆಂಧ್ರಪ್ರದೇಶ ಬಹಳ ಉತ್ಸಾಹ ತೋರುತ್ತಿದೆ. ಗೂಗಲ್​ನಿಂದ 15 ಬಿಲಿಯನ್ ಡಾಲರ್ ಹೂಡಿಕೆ ಹರಿದುಬರಲಿರುವುದು (Google investments) ಆಂಧ್ರಕ್ಕೆ ಹೊಸ ಉತ್ಸಾಹದ ಅಲೆಯನ್ನೇ ಎಬ್ಬಿಸಿದೆ. ಇದೇ ಉತ್ಸಾಹದ ಭರದಲ್ಲಿ ಆಂಧ್ರ ಐಟಿ ಸಚಿವ ನರ ಲೋಕೇಶ್, ಕರ್ನಾಟಕ ವಿರುದ್ಧ ಪರೋಕ್ಷವಾಗಿ ವ್ಯಂಗ್ಯಾಸ್ತ್ರ ಪ್ರಯೋಗಿಸಿದ್ದಾರೆ. ಎಕ್ಸ್ ಪೋಸ್ಟ್​ನಲ್ಲಿ ಅವರು ಆಂಧ್ರಕ್ಕೆ ಹೂಡಿಕೆ ಹರಿದುಬರುತ್ತಿರುವುದು ಕೆಲ ನೆರೆಯ ರಾಜ್ಯಗಳಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

‘ಆಂಧ್ರದ ಊಟ ಸ್ಪೈಸಿ ಎಂದು ಹೇಳುತ್ತಾರೆ. ನಮ್ಮ ಕೆಲ ಹೂಡಿಕೆಗಳೂ ಕೂಡ ಸ್ಪೈಸಿಯೇ ಎನಿಸಬಹುದು. ಕೆಲ ನೆರೆಹೊರೆಯವರಿಗೆ ಉರಿ ಹತ್ತಿಕೊಳ್ಳುತ್ತಿದೆ’ ಎಂದು ನರ ಲೋಕೇಶ್ ಹೇಳಿದ್ದಾರೆ. ಇಲ್ಲಿ ಕರ್ನಾಟಕ ಮತ್ತು ತೆಲಂಗಾಣದ ಹೆಸರೆತ್ತದೆಯೇ ಈ ಎರಡು ರಾಜ್ಯಗಳನ್ನು ನರ ಲೋಕೇಶ್ ಮೂದಲಿಸಿದ್ದಾರೆ.

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಐಎಂಎಫ್​ನಿಂದಲೂ ನಿರೀಕ್ಷೆ ಹೆಚ್ಚಳ; ಶೇ. 6.4ರಿಂದ ಶೇ. 6.6ಕ್ಕೆ ಅಂದಾಜು ಪರಿಷ್ಕರಣೆ

ಕರ್ನಾಟಕ ಮತ್ತು ಆಂಧ್ರ ನಡುವೆ ಪೈಪೋಟಿ…

ಆಂಧ್ರದ ವೈಜಾಗ್​ನಲ್ಲಿ ಗೂಗಲ್ ಸಂಸ್ಥೆ 15 ಬಿಲಿಯನ್ ಡಾಲರ್ ಹೂಡಿಕೆಯಲ್ಲಿ ಡಾಟಾ ಸೆಂಟರ್ ಸೇರಿದಂತೆ ಎಐ ಹಬ್ ನಿರ್ಮಿಸಲು ಹೊರಟಿದೆ. ಇದಕ್ಕೆ ಆಂಧ್ರ ಸರ್ಕಾರ ಸಬ್ಸಿಡಿ ದರದಲ್ಲಿ ನೆಲ, ವಿದ್ಯುತ್, ನೀರು ಇತ್ಯಾದಿ ಸೌಕರ್ಯ ಒದಗಿಸುವ ಭರವಸೆ ನೀಡಿದೆ. ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಂಧ್ರದ ಈ ನಡೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ನರ ಲೋಕೇಶ್ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಕೆಲ ನೆರೆಹೊರೆಯವರಿಗೆ ಉರಿ ಶುರುವಾಗಿದೆ ಎಂದು ಹೇಳಿದ್ದಿರಬಹುದು.

ನರ ಲೋಕೇಶ್ ಅವರ ಎಕ್ಸ್ ಪೋಸ್ಟ್

ಸಚಿವರಾಗಿ ನರ ಲೋಕೇಶ್ ಅವರು, ಆಂಧ್ರದಲ್ಲಿ ಹೂಡಿಕೆ ಮಾಡುವಂತೆ ವಿವಿಧ ಉದ್ದಿಮೆಗಳಿಗೆ ಆಹ್ವಾನ ಕೊಡುತ್ತಲೇ ಇರುತ್ತಾರೆ. ಯಾವುದೇ ಹೊಸ ಹೂಡಿಕೆಗಳ ಪ್ರಸ್ತಾಪವಾದರೂ ಆಂಧ್ರಕ್ಕೆ ಗಿಟ್ಟಿಸಲು ಪ್ರಯತ್ನಿಸುತ್ತಿರುತ್ತಾರೆ.

ಇದನ್ನೂ ಓದಿ: ಭಾರತದಲ್ಲಿ ಗೂಗಲ್​ನಿಂದ ಬೃಹತ್ ಎಐ ಹಬ್; 15 ಬಿಲಿಯನ್ ಡಾಲರ್ ಹೂಡಿಕೆ; ಪ್ರಧಾನಿ ಮೋದಿ ಸ್ವಾಗತ

ಬೆಂಗಳೂರಿನ ಕಂಪನಿಯೊಂದರ ಸಿಇಒ ತಾನು ಸಿಲಿಕಾನ್ ಸಿಟಿಯ ಟ್ರಾಫಿಕ್​ನ ಬಗ್ಗೆ ಬೇಸರ ವ್ಯಕ್ತಪಡಿಸಿ, ತಮ್ಮ ಕಂಪನಿಯನ್ನು ಬೇರೆಡೆ ಸ್ಥಳಾಂತರ ಮಾಡಲಿರುವುದಾಗಿ ಹೇಳಿದ್ದರು. ಆಗಲೂ ಕೂಡ ಆಂಧ್ರವು ತಮ್ಮಲ್ಲಿಗೆ ಬರಬೇಕೆಂದು ಆ ಕಂಪನಿಗೆ ಆಹ್ವಾನ ಕೊಟ್ಟಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Thu, 16 October 25

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?