ಬೆಂಗಳೂರು ಬಿಟ್ಟು ಆಂಧ್ರಕ್ಕೆ ಬನ್ನಿ ಎಂದ ಸಚಿವರ ಕರೆಗೆ ಸಿಲಿಕಾನ್ ಸಿಟಿ ಉದ್ಯಮಿಗಳ ರಿಯಾಕ್ಷನ್ ಹೀಗಿತ್ತು..!

Bengaluru businessmen vs Andhra: ಬೆಂಗಳೂರಿನ ಮೂಲಸೌಕರ್ಯ ವ್ಯವಸ್ಥೆ ಬಗ್ಗೆ ಉದ್ಯಮ ವಲಯದಲ್ಲಿ ಆಶ್ರೋಶ ಮಡುಗಟ್ಟಿದೆ ಎಂದು ಉದ್ಯಮಿ ಮೋಹನದಾಸ್ ಪೈ ಹೇಳಿದ್ದಾರೆ. ಅತ್ತ, ಆಂಧ್ರದ ಸಚಿವ ನಾರ ಲೋಕೇಶ್ ಅವರು ಬೆಂಗಳೂರಿನಿಂದ ತಮ್ಮ ರಾಜ್ಯಕ್ಕೆ ಬರುವಂತೆ ಬಹುರಾಷ್ಟ್ರೀಯ ಕಂಪನಿಗಳನ್ನು ಆಹ್ವಾನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪೈ, ಮೊದಲು ತಳಮಟ್ಟದಲ್ಲಿ ಇನ್ನಷ್ಟು ಕೆಲಸ ಮಾಡಿ, ವಿಶ್ವಾಸ ಮೂಡಿಸಿ ಎಂದಿದ್ದಾರೆ.

ಬೆಂಗಳೂರು ಬಿಟ್ಟು ಆಂಧ್ರಕ್ಕೆ ಬನ್ನಿ ಎಂದ ಸಚಿವರ ಕರೆಗೆ ಸಿಲಿಕಾನ್ ಸಿಟಿ ಉದ್ಯಮಿಗಳ ರಿಯಾಕ್ಷನ್ ಹೀಗಿತ್ತು..!
ಮೋಹನದಾಸ್ ಪೈ
Follow us
|

Updated on: Oct 24, 2024 | 1:58 PM

ಬೆಂಗಳೂರು, ಅಕ್ಟೋಬರ್ 24: ಕರ್ನಾಟಕದ ರಾಜಧಾನಿ ನಗರದಲ್ಲಿ ಭಾರೀ ಮಳೆಯಾಗಿದೆ. ಆದರೆ, ಕಳಪೆ ಸೌಕರ್ಯವ್ಯವಸ್ಥೆ ಕಾರಣಕ್ಕೆ, ಮಳೆ ಬಂದಾಗ ಇಡೀ ಉದ್ಯಾನನಗರಿಯೇ ದೊಡ್ಡ ಸರೋವರದಂತಾಗುತ್ತದೆ. ಸಿಮೆಂಟ್ ಅಥವಾ ಡಾಂಬರು ಕಿತ್ತು ಹೋದ ರಸ್ತೆಗಳು, ವಿಪರೀತ ವಾಹನ ದಟ್ಟನೆ ಇವೆಲ್ಲವೂ ಹೆಚ್ಚಿನ ಬೆಂಗಳೂರಿಗರನ್ನು ಹೈರಾಣಗೊಳಿಸಿದೆ. ಇದರಿಂದ ಬೇಸತ್ತಿರುವ ಬೆಂಗಳೂರಿನ ಉದ್ಯಮಿಗಳಿಗೆ ಆಂಧ್ರಪ್ರದೇಶ ಕೈಬೀಸಿ ಆಹ್ವಾನಿಸುತ್ತಿದೆ. ಟಿಡಿಪಿ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ್ರ ಸಚಿವ ನಾರ ಲೋಕೇಶ್ ಅವರು ಬೆಂಗಳೂರಿನ ಎಂಎನ್​ಸಿಗಳನ್ನು ಆಂಧ್ರಕ್ಕೆ ಶಿಫ್ಟ್ ಆಗಬೇಕೆಂದು ಕರೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕದ ಉದ್ಯಮಿ ಮೋಹನದಾಸ್ ಪೈ, ಈ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಆಂದ್ರದ ಹಿಂದಿನ ಸರ್ಕಾರ (ಜಗನ್ಮೋಹನ್ ರೆಡ್ಡಿ) ಎಲ್ಲಾ ಹಾಳು ಮಾಡಿತು. ಮತ್ತೆ ವಿಶ್ವಾಸ ಮೂಡಬೇಕಾದರೆ ಬಾಬುಗಾರು (ಚಂದ್ರಬಾಬು ನಾಯ್ಡು) ಸಾಕಷ್ಟು ಪ್ರಯತ್ನ ಮಾಡಬೇಕು. ಹೆಚ್ಚು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದಿದ್ದಾರೆ.

ಇದನ್ನೂ ಓದಿ: ದೇಶದ ಹಿತಾಸಕ್ತಿಗೆ ಮೊದಲ ಆದ್ಯತೆ; ಕಣ್ಮುಚ್ಚಿ ಎಫ್​ಡಿಐ ಸ್ವೀಕರಿಸಲು ಆಗಲ್ಲ: ನಿರ್ಮಲಾ ಸೀತಾರಾಮನ್

ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಪೈ ಬೇಸರ

ಬೆಂಗಳೂರಿನ ರಸ್ತೆ, ಚರಂಡಿ, ಹೊರವರ್ತು ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದಿಂದ ಸರಿಯಾದ ಕ್ರಮ ಆಗುತ್ತಿಲ್ಲ. ಇದರಿಂದ ಎಂಎನ್​ಸಿಗಳಿಗೆ ನಿರಾಸೆಯಾಗಿದ್ದು, ನಗರದ ಹೊರಗೆ ವಿಸ್ತರಿಸಲು ಗಂಭೀರವಾಗಿ ಯೋಜಿಸುತ್ತಿವೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ತಾವು ಕೊಟ್ಟ ಮಾತನ್ನು ಪಾಲಿಸುತ್ತಿಲ್ಲ. ವಿಶ್ವಾಸ ಕಡಿಮೆ ಆಗಿದೆ. ಇದು ನಿಜಕ್ಕೂ ಬಹಳ ಗಂಭೀರ ವಿಚಾರ ಎಂದು ಮೋಹನ್ ದಾಸ್ ಪೈ ಅ. 21ರಂದು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಅಸಮಾಧಾನ ತೋಡಿಕೊಂಡಿದ್ದರು.

‘ನಗರವನ್ನು ಉಳಿಸಲು ಸಿಎಂ ಮತ್ತು ಡಿಸಿಎಂ ತುರ್ತು ಕ್ರಮ ತೆಗೆದುಕೊಳ್ಳಲೇಬೇಕು. ಕಳೆದ 20 ವರ್ಷದಲ್ಲಿ ಇಷ್ಟು ಆಕ್ರೋಶ ಮತ್ತು ನೋವನ್ನು ನೋಡಿಯೇ ಇರಲಿಲ್ಲ. ನಗರದ ಆಡಳಿತ ನಿರ್ವಹಣೆ ಅಸಮರ್ಪಕವಾಗಿದೆ. ಸುಳ್ಳು ಭರವಸೆಗಳಿಂದ ಬೆಸರವಾಗಿದೆ. ತನ್ನ ನಾಗರಿಕರನ್ನು ಕೆಟ್ಟದಾಗಿ ನಡೆಸಿಕೊಳ್ಳುವ ಈ ರೀತಿಯ ಬೇಜವಾಬ್ದಾರಿಯುತ ಸರ್ಕಾರ ಇರುವುದು ದುರದೃಷ್ಟಕರ ಸಂಗತಿ,’ ಎಂದು ಇನ್ಫೋಸಿಸ್​ನ ಮಾಜಿ ಸಿಎಫ್​ಒ ಮೋಹನ್​ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮೋದಿಯ ಆ ಮಾತು ಸರಿ ಅನಿಸಿತು… ಭಾರತದೊಂದಿಗೆ ಸೇರಿ ಚಿಪ್ ತಯಾರಿಸಲು ಸಜ್ಜಾದ ವಿಶ್ವ ದೈತ್ಯ ನಿವಿಡಿಯಾ

ಆಂಧ್ರಕ್ಕೆ ಬನ್ನಿ ಎಂದ ನಾರ ಲೋಕೇಶ್

ಮೋಹನ್​ದಾಸ್ ಪೈ ಅವರ ಪೋಸ್ಟ್​ಗೆ ಆಂಧ್ರ ಸಚಿವ ನಾರ ಲೋಕೇಶ್ ಇಂದು ಪ್ರತಿಕ್ರಿಯಿಸಿ, ಬೆಂಗಳೂರಿನ ಉದ್ಯಮಿಗಳನ್ನು ಆಂಧ್ರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.

‘ಎಲ್ಲಾ ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಆಂಧ್ರಕ್ಕೆ ಬರಬೇಕೆಂದು ಆಹ್ವಾನಿಸುತ್ತೇನೆ. ಆಂಧ್ರದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಉದ್ಯಮ ಸ್ನೇಹಿ ನೀತಿಗಳನ್ನು ಜಾರಿಗೆ ತಂದಿದ್ದಾರೆ. ಉದ್ಯಮಗಳನ್ನು ನಮ್ಮ ರಾಜ್ಯದ ಕಲ್ಯಾಣ ಮತ್ತು ಪ್ರಗತಿಗೆ ಪ್ರಮುಖ ಭಾಗಿದಾರರಾಗಿ ಪರಿಗಣಿಸುತ್ತೇವೆ. ವಿಶ್ವದರ್ಜೆ ಮೂಲಸೌಕರ್ಯ ಹಾಗೂ ಅಸಾಧಾರಣ ಬಿಸಿನೆಸ್ ಇಕೋಸ್ಟಂ ಅನ್ನು ನಾವು ಒದಗಿಸಲು ಸಿದ್ಧರಿದ್ದೇವೆ,’ ಎಂದು ನಾರ ಲೋಕೇಶ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ