AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಸ್ ದಾಳಿ; ಎಸ್​​ಬಿಐ ಸೇರಿ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶ ಅಪಾಯದಲ್ಲಿ

ವೈರಸ್ ದಾಳಿಯಿಂದ ಬ್ಯಾಂಕ್​ ಖಾತೆಗೆ ಸಂಬಂಧಿಸಿದ ದತ್ತಾಂಶಗಳನ್ನು ಸಂರಕ್ಷಿಸಿಕೊಳ್ಳಲು ನಿಮಗೆ ಈ ಮಾಹಿತಿ ತಿಳಿದಿರಲಿ...

ವೈರಸ್ ದಾಳಿ; ಎಸ್​​ಬಿಐ ಸೇರಿ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶ ಅಪಾಯದಲ್ಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 29, 2022 | 5:52 PM

Share

ನವದೆಹಲಿ: ಡ್ರಿಲಿಂಕ್ ಕುತಂತ್ರಾಂಶದ (Drinik malware) ಸುಧಾರಿತ ಅಥವಾ ಅಪ್​ಗ್ರೇಡೆಡ್ ವರ್ಷನ್ ದಾಳಿಯಿಂದಾಗಿ ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ (SBI) ಸೇರಿದಂತೆ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶಗಳು ಅಪಾಯದಲ್ಲಿವೆ ಎಂದು ವರದಿಯಾಗಿದೆ. ವಿಶ್ಲೇಷಕರ ಪ್ರಕಾರ, ಮಾಲ್​ವೇರ್ ಸದ್ಯ ಆ್ಯಂಡ್ರಾಯ್ಡ್ ಟ್ರೋಜನ್ ಆಗಿ ಪರಿವರ್ತನೆಗೊಂಡಿದ್ದು, ಮಹತ್ವದ ವೈಯಕ್ತಿ ವಿಚಾರಗಳು ಹಾಗೂ ಬ್ಯಾಂಕಿಂಗ್ ದತ್ತಾಂಶಕ್ಕೆ ಕನ್ನ ಹಾಕುವ ಸಾಧ್ಯತೆ ಇದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.

2016ರಲ್ಲೇ ಕನ್ನ ಹಾಕಿದ್ದ ಮಾಲ್​ವೇರ್

ಡ್ರಿಲಿಂಕ್ ಕುತಂತ್ರಾಂಶ ಅಥವಾ ಮಾಲ್​ವೇರ್ 2016ರಲ್ಲೇ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಟಕೊಟ್ಟಿತ್ತು. ಆಗ ಎಸ್​ಎಂಎಸ್​ಗಳ ಮೂಲಕ ಗ್ರಾಹಕರ ದತ್ತಾಂಶ ಕದಿಯುತ್ತಿದ್ದ ಮಾಲ್​ವೇರ್ ಈಗ ಇನ್ನಷ್ಟು ಸುಧಾರಿತಗೊಂಡು ಮರಳಿದೆ. ಪ್ರಸ್ತುತ ಸ್ಕ್ರೀನ್​ ರೆಕಾರ್ಡಿಂಗ್, ಕೀಲಾಗಿಂಗ್, ಆಕ್ಸೆಸಿಬಿಲಿಟಿ ಸೇವೆಗಳ ದುರಪಯೋಗ, ಓವರ್​ಲೇ ದಾಳಿಗಳನ್ನು ನಡೆಸುವ ಸಾಮರ್ಥ್ಯ ಒಳಗೊಂಡಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ
Image
ಪರಾಗ್ ಅಗರ್​ವಾಲ್​ಗೆ ಸಿಗಲಿದೆ 346 ಕೋಟಿ ರೂ. ಪರಿಹಾರ
Image
Maruti Suzuki: ಮಾರುತಿ ಸುಜುಕಿ ನಿವ್ವಳ ಲಾಭ ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚಳ
Image
ಟಿಡಿಎಸ್​ ಸಲ್ಲಿಕೆ ಗಡುವು ನವೆಂಬರ್ 30ಕ್ಕೆ ವಿಸ್ತರಿಸಿದ ಸಿಬಿಡಿಟಿ

ಮಾಲ್​ವೇರ್ ಗ್ರಾಹಕರನ್ನು ಗುರಿಯಾಗಿಸುವುದು ಹೀಗೆ…

ಮಾಧ್ಯಮ ವರದಿಗಳ ಪ್ರಕಾರ, ಡ್ರಿಲಿಂಕ್ ಮಾಲ್​ವೇರ್​ನ ಇತ್ತೀಚಿನ ಸುಧಾರಿತ ವರ್ಷನ್ ಎಪಿಕೆ ಹೆಸರಿನ (APK) ಐಅಸಿಸ್ಟ್ (iAssist) ಮೂಲಕ ಗ್ರಾಹಕರನ್ನು ಗುರಿಯಾಗಿಸುತ್ತದೆ. ಐಅಸಿಸ್ಟ್ ಎಂಬುದು ಭಾರತೀಯ ತೆರಿಗೆ ಇಲಾಖೆಯ ಅಧಿಕೃತ ತೆರಿಗೆ ನಿರ್ವಹಣಾ ಟೂಲ್ ಆಗಿದೆ. ಒಮ್ಮೆ ಮಾಲ್​ವೇರ್ ಬಾಧಿತ ಐಅಸಿಸ್ಟ್ ಇನ್​ಸ್ಟಾಲ್ ಮಾಡಿದರೆ, ಅದು ಎಸ್​ಎಂಎಸ್​ಗಳನ್ನು ಕಳುಹಿಸುವ, ಓದುವ ಅನುಮತಿ ಕೇಳುತ್ತದೆ. ಎಕ್ಸ್​​ಟರ್ನಲ್ ಸ್ಟೋರೇಜ್ ಅನ್ನು ಓದುವ ಅನುಮತಿಯನ್ನೂ ಕೇಳುತ್ತದೆ. ಇತರ ಬ್ಯಾಂಕಿಂಗ್ ಟ್ರೋಜನ್​ಗಳಂತೆ ಡ್ರಿಲಿಂಕ್ ಕೂಡ ಸರ್ವೀಸ್ ಆಕ್ಸೆಸಿಬಿಲಿಟಿ ಆಧಾರದಲ್ಲೇ ದಾಳಿ ನಡೆಸುತ್ತದೆ. ಒಮ್ಮೆ ಸಂತ್ರಸ್ತರು ಎಲ್ಲದಕ್ಕೂ ಅನುಮತಿಸಿದ ಬಳಿಕ ಗೂಗಲ್ ಪ್ಲೇ ಪ್ರೊಟೆಕ್ಟ್ ಅನ್ನು ಡಿಸೇಬಲ್ ಮಾಡುತ್ತದೆ. ನಂತರ ತನ್ನ ಕಾರ್ಯಾಚರಣೆ ಶುರುಮಾಡುತ್ತದೆ.

ನಂತರ ನಕಲಿ ಪೇಜ್​ಗಳನ್ನು ತೆರೆಯುವ ಬದಲು ಭಾರತೀಯ ಆದಾಯ ತೆರಿಗೆ ಇಲಾಖೆಯ ನೈಜ ಸೈಟ್​ ಅನ್ನು ಲೋಡ್ ಆಗುವಂತೆ ಮಾಡುತ್ತದೆ. ಲಾಗಿನ್ ಪೇಜ್​ ಅನ್ನು ತೋರಿಸುವ ಮೊದಲು ಮಾಲ್​ವೇರ್, ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಅಥೆಂಟಿಕೇಷನ್ ಸ್ಕ್ರೀನ್​ ಅನ್ನು ಡಿಸ್​ಪ್ಲೇ ಮಾಡುತ್ತದೆ. ಸಂತ್ರಸ್ತರು ಪಿನ್ ಎಂಟರ್ ಮಾಡಿದ ಕೂಡಲೇ ಮಾಲ್​ವೇರ್, ಮೀಡಿಯಾ ಪ್ರೊಜೆಕ್ಷನ್ ಬಳಸಿಕೊಂಡು ಸ್ಕ್ರೀನ್​ರೆಕಾರ್ಡಿಂಗ್ ಮೂಲಕ ಬಯೋಮೆಟ್ರಿಕ್ ಪಿನ್ ಅನ್ನು ರೆಕಾರ್ಡ್ ಮಾಡಿಕೊಳ್ಳುತ್ತದೆ. ಜತೆಗೆ ಕೀಸ್ಟ್ರೋಕ್​ಗಳನ್ನೂ ಸಂಗ್ರಹಿಸುತ್ತದೆ. ನಂಗತರ ಕದ್ದ ಮಾಹಿತಿಯನ್ನು C&C ಸರ್ವರ್​ಗೆ ಕಳುಹಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು