AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG Gifts: ನಿರುದ್ಯೋಗಿಗಳಿಗೆ ಭತ್ಯೆ; ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಏರಿಕೆ; ಈ ರಾಜ್ಯದವರಿಗೆ ಹೋಳಿ ಗಿಫ್ಟ್

Big Boost For Unemployed and Anganwadi Workers: ನಿನ್ನೆಯ ಬಜೆಟ್​ನಲ್ಲಿ ನಿರುದ್ಯೋಗಿಗಳಿಗೆ ಮಾಸಿಕ 2,500 ರೂ ಭತ್ಯೆ ಕೊಡುವುದಾಗಿ ಘೋಷಿಸಿದ್ದ ಛತ್ತೀಸ್​ಗಡ ಸರ್ಕಾರ ಇದೀಗ ಅಂಗನವಾಡಿ ಸಿಬ್ಬಂದಿಯ ವೇತನ ಹೆಚ್ಚಳ ಮಾಡಿದೆ.

BIG Gifts: ನಿರುದ್ಯೋಗಿಗಳಿಗೆ ಭತ್ಯೆ; ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಏರಿಕೆ; ಈ ರಾಜ್ಯದವರಿಗೆ ಹೋಳಿ ಗಿಫ್ಟ್
ಅಂಗನವಾಡಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 07, 2023 | 3:48 PM

ರಾಯಪುರ್: ಛತ್ತೀಸ್​ಗಡ ಸರ್ಕಾರ ತನ್ನ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು (Anganwadi Workers), ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಸಂಬಳಗಳನ್ನು ಏರಿಕೆ ಮಾಡಿದೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಭೂಪೇಶ್ ಬಾಘೆಲ್ (Chhattisgarh CM Bhupesh Baghel) ಮಾರ್ಚ್ 7, ಮಂಗಳವಾರದಂದು ಅಂಗನವಾಡಿ ಕಾರ್ಯಕರ್ತಯರಿಗೆ ಹೋಳಿ ಹಬ್ಬದ ಉಡುಗೊರೆಯಂತೆ ಈ ಸಂಬಳ ಹೆಚ್ಚಳದ ಘೋಷಣೆ ಮಾಡಿದ್ದಾರೆ. ಇವರ ಸಂಬಳಗಳು 3,500 ರೂವರೆಗೂ ಹೆಚ್ಚಳವಾಗಲಿವೆ.

ಛತ್ತೀಸ್​ಗಡ ಸರ್ಕಾರ ಪ್ರಕಟಿಸಿರುವ ಮಾಹಿತಿ ಪ್ರಕಾರ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ 3,500 ರೂ ಹೆಚ್ಚಾಗಲಿದೆ. 6,500 ರೂ ಇರುವ ಇವರ ಸಂಬಳ 10,000 ರುಪಾಯಿಗೆ ಏರಿಕೆ ಆಗಲಿದೆ. ಅಂಗನವಾಡಿ ಸಹಾಯಕಿಯರ ಸಂಬಳ 3,250 ರೂನಿಂದ 5,000 ರುಪಾಯಿಗೆ ಏರಿಕೆ ಆಗಲಿದೆ. ಇನ್ನು, ಮಿನಿ ಅಂಗನವಾಡಿ ಕಾರ್ಯಕರ್ತೆಯರ ಸಂಬಳ 4,500 ರೂನಿಂದ 7,500 ರುಪಾಯಿಗೆ ಹೆಚ್ಚಾಗಲಿದೆ.

ಛತ್ತೀಸ್​ಗಡ ಸರ್ಕಾರ ಅಂಗನವಾಡಿ ಉದ್ಯೋಗಿಗಳಿಗೆ ಮಾತ್ರವಲ್ಲ ಹೋಮ್ ಗಾರ್ಡ್, ಗ್ರಾಮ ಕೊತ್ವಾರ ಮತ್ತಿತರ ಹುದ್ದೆಗಳಿಗೂ ಸಂಬಳ ಹೆಚ್ಚಳ ಮಾಡಿದ್ದಾರೆ.

ಇದನ್ನೂ ಓದಿMotor Insurance: ಪ್ರತೀ ವಾಹನದ ಮಾಹಿತಿಯೂ ಸರ್ಕಾರಕ್ಕಿದೆ; ಇನ್ಷೂರೆನ್ಸ್ ಮಾಡಿಸಿಲ್ಲದವರಿಗೆ ಕಾದಿದೆ ಬಿಗಿಕ್ರಮ; ಡೀಟೇಲ್ಸ್ ಓದಿ

ನಿರುದ್ಯೋಗಿ ಯುವಕರಿಗೂ ಭತ್ಯೆ

ಕಾಂಗ್ರೆಸ್ ನೇತೃತ್ವದ ಛತ್ತೀಸ್​ಗಡ ಸರ್ಕಾರ ನಿನ್ನೆ ಸೋಮವಾರ 1.21 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿತ್ತು. ಅದರಲ್ಲಿ ಪ್ರಮುಖವಾಗಿ ಗಮನ ಸೆಳೆದದ್ದು ರಾಜ್ಯದ ನಿರುದ್ಯೋಗಿ ಯುವಸಮುದಾಯದವರಿಗೆ 2,500 ರೂ ಮಾಸಿಕ ಭತ್ಯೆಯನ್ನು ಘೋಷಿಸಿದ್ದಾರೆ. ಪಿಯುಸಿ ಪಾಸ್ ಆಗಿರುವ ಮತ್ತು 18ರಿಂದ 35 ವರ್ಷ ವಯೋಮಾನದಲ್ಲಿರುವ ಯುವಕ ಮತ್ತು ಯುವತಿಯರಿಗೆ ತಿಂಗಳಿಗೆ 2,500 ರೂ ಸಹಾಯಧನವನ್ನು ಸರ್ಕಾರ ಒದಗಿಸಲು ಉದ್ದೇಶಿಸಿದೆ. ಆದರೆ, ಈ ನಿರುದ್ಯೋಗಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮೀರಿರಬಾರದು ಎಂಬ ಷರತ್ತು ಇದೆ. ಸರ್ಕಾರ ಈ ಯೋಜನೆಗಾಗಿ ಮುಂದಿನ ಹಣಕಾಸು ವರ್ಷದಲ್ಲಿ 250 ಕೋಟಿ ರೂ ಮೀಸಲಿರಿಸಿದೆ.

ಕರ್ನಾಟಕದಲ್ಲಿ ಅಂಗನವಾಡಿ ಕಾರ್ಮಿಕರ ಸಂಬಳ ಎಷ್ಟು?

ಕರ್ನಾಟಕದಲ್ಲಿ 2019ರಲ್ಲೇ ಅಂಗನವಾಡಿ ಸಿಬ್ಬಂದಿಯ ವೇತನ ಪರಿಷ್ಕರಣೆ ಮಾಡಲಾಗಿತ್ತು. ಅಂಗನವಾಡಿ ಕಾರ್ಯಕರ್ತೆಯರ ಸಂಬಳವನ್ನು 8 ಸಾವಿರ ರೂನಿಂದ 10,000 ರುಪಾಯಿಗೆ ಹೆಚ್ಚಿಸಲಾಗಿತ್ತು, ಮಿನಿ ಅಂಗನವಾಡಿ ಕಾರ್ಯಕರ್ತೆಯರ ಸಂಬಳ 4,750 ರೂನಿಂದ 6,000 ರೂಗೆ, ಅಂಗನವಾಡಿ ಸಹಾಯಕಿಯರ ವೇತನ 4,000 ರೂನಿಂದ 5,000 ರೂಗೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿCIBIL Tips: ಅತಿಯಾಗಿ ಕ್ರೆಡಿಟ್ ಕಾರ್ಡ್ ಉಪಯೋಗಿಸದಿರಿ: ಸಿಬಿಲ್ ಸ್ಕೋರ್ ಹೆಚ್ಚಿಸುವ 3 ಐಡಿಯಾಗಳು

ಇದೀಗ ಅಂಗವನಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಗ್ರಾಚುವಿಟಿ ನೀಡಲೂ ಸರ್ಕಾರ ಸಮ್ಮತಿಸಿದೆ. ಇವರಿಗೆ 7ನೇ ವೇತನ ಆಯೋಗ ಜಾರಿಯಾದರೆ ಸಂಬಳ ಇನ್ನೂ ಬಹಳಷ್ಟು ಹೆಚ್ಚಾಗಲಿದೆ. ಅಂತೆಯೇ 7ನೇ ವೇತನ ಆಯೋಗ ಜಾರಿಗೂ ಒತ್ತಾಯ ಕೇಳಿಬರುತ್ತಿದೆ.

ಇನ್ನಷ್ಟು ವ್ಯವಹಾರಗಳ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್