AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ಅಂಬಾನಿಗೆ ಹಿನ್ನಡೆ; ಡೆಲ್ಲಿ ಮೆಟ್ರೋಗೆ 8,000 ಕೋಟಿ ರೂ ಮರಳಿಸುವಂತೆ ರಿಲಾಯನ್ಸ್ ಇನ್​ಫ್ರಾಗೆ ಸುಪ್ರೀಂಕೋರ್ಟ್ ನಿರ್ದೇಶನ

Anil ambani Owned Reliance Infra Shares Hit Lower Circuit: ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್​ನ ಅಂಗಸಂಸ್ಥೆಯಾದ ದೆಹಲಿ ಏರ್ಪೋರ್ಟ್ ಮೆಟ್ರೋ ಎಕ್ಸ್​ಪ್ರೆಸ್ ಪ್ರೈ ಲಿ ಸಂಸ್ಥೆಗೆ ಡಿಎಂಆರ್​ಸಿ ನೀಡಿದ್ದ 8,000 ಕೋಟಿ ರೂ ಹಣವನ್ನು ಮರಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಇದರೊಂದಿಗೆ ಅನಿಲ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್​ಗೆ ಹಿನ್ನಡೆಯಾಗಿದ್ದು ಷೇರು ಮಾರುಕಟ್ಟೆಯಲ್ಲಿ ಗರಿಷ್ಠ ಕುಸಿತಕ್ಕೆ ಒಳಗಾಗಿದೆ.

ಅನಿಲ್ ಅಂಬಾನಿಗೆ ಹಿನ್ನಡೆ; ಡೆಲ್ಲಿ ಮೆಟ್ರೋಗೆ 8,000 ಕೋಟಿ ರೂ ಮರಳಿಸುವಂತೆ ರಿಲಾಯನ್ಸ್ ಇನ್​ಫ್ರಾಗೆ ಸುಪ್ರೀಂಕೋರ್ಟ್ ನಿರ್ದೇಶನ
ಷೇರು ಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 10, 2024 | 12:46 PM

Share

ನವದೆಹಲಿ, ಏಪ್ರಿಲ್ 10: ಅನಿಲ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್ ಸಂಸ್ಥೆಗೆ (Reliance Infrastructure) ಇಂದು ಆಘಾತಕವಾಗಿ ಸುದ್ದಿ ಬಂದಿದೆ. ಇದರ ಉಪಸಂಸ್ಥೆಗೆ ದೆಹಲಿ ಮೆಟ್ರೋ ರೈಲ್ ಕಾರ್ಪೊರೇಶನ್ (DMRC) ನೀಡಿದ್ದ 8,000 ಕೋಟಿ ರೂ ಹಣವನ್ನು ಮರಳಿಸುವಂತೆ ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್​ಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಡಿಎಂಆರ್​ಸಿ ಸಲ್ಲಿಸಿದ್ದ ಕ್ಯುರೇಟಿವ್ ಪೆಟಿಶನ್ ಅಥವಾ ಮರುಪರಿಶೀಲನಾ ಮನವಿ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಪುರಸ್ಕರಿಸಿದೆ. ಈ ಮೂಲಕ ವಿಭಾಗೀಯ ಪೀಠ ನೀಡಿದ್ದ ಆದೇಶ ರದ್ದಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್ ಷೇರುಬೆಲೆ ತೀವ್ರ ಕುಸಿತ ಕಂಡಿದೆ. ಕೆಳಗಿನ ಇಳಿಕಾ ಮಿತಿಯಾದ ಶೇ. 20ರಷ್ಟು ಷೇರುಬೆಲೆ ಕುಸಿತವಾಗಿದೆ.

ಏನಿದು ಪ್ರಕರಣ?

2008ರಲ್ಲಿ ಡೆಲ್ಲಿ ಏರ್​ಪೋರ್ಟ್ ಎಕ್ಸ್​ಪ್ರೆಸ್ ಅನ್ನು ನಿರ್ಮಿಸುವ ಯೋಜನೆಗೆ ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್ ಮತ್ತು ಡಿಎಂಆರ್​ಸಿ ಮಧ್ಯೆ ಒಪ್ಪಂದವಾಗಿತ್ತು. ಆದರೆ, 2012ರಲ್ಲಿ ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್ ಈ ಒಪ್ಪಂದಿಂದ ಹೊರಬಂದಿತು. ಆಗ ಡೆಲ್ಲಿ ಮೆಟ್ರೋ ರೈಲ್ ಕಾರ್ಪೊರೇಶನ್ ಸಂಸ್ಥೆ ರಿಲಾಯನ್ಸ್ ಇನ್​ಫ್ರಾ ವಿರುದ್ಧ ಕಾನೂನು ಕ್ರಮಕ್ಕೆ ಮೊರೆ ಹೋಯಿತು. 2017ರಲ್ಲಿ ನ್ಯಾಯಮಂಡಳಿಯು ಡಿಎಂಆರ್​ಸಿ ವಿರುದ್ಧವೇ ತೀರ್ಪು ನೀಡಿತು. ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್​ನ ಅಂಗ ಸಂಸ್ಥೆಯಾದ ಡಿಎಎಂಇಪಿಎಲ್​ಗೆ 2,800 ಕೋಟಿ ರೂಗೆ ಬಡ್ಡಿ ಸೇರಿಸಿ ಕೊಡುವಂತೆ ಆದೇಶಿಸಿತು.

ಇದನ್ನೂ ಓದಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಎಂಡಿ, ಸಿಇಒ ಸುರೀಂದರ್ ಚಾವ್ಲಾ ರಾಜೀನಾಮೆ

2018ರಲ್ಲಿ ದೆಹಲಿ ಹೈಕೋರ್ಟ್​ನ ಒಂದು ನ್ಯಾಯಪೀಠ ಕೂಡ ಈ ತೀರ್ಪನ್ನು ಎತ್ತಿಹಿಡಿಯಿತು. ಆದರೆ ಹೈಕೋರ್ಟ್​ನ ವಿಭಾಗೀಯ ಪೀಠವೊಂದು ಈ ಆದೇಶವನ್ನು ರದ್ದು ಮಾಡಿತು. ಬಳಿಕ ಸುಪ್ರೀಂಕೋರ್ಟ್​ನ ದ್ವಿಸದಸ್ಯ ವಿಭಾಗೀಯ ನ್ಯಾಯಪೀಠ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ರದ್ದು ಮಾಡಿ ಡಿಎಂಆರ್​ಸಿ ವಿರುದ್ಧದ ತೀರ್ಪನ್ನೇ ಎತ್ತಿಹಿಡಿಯಿತು. ಆದರೆ, ಪಟ್ಟು ಬಿಡದ ಡೆಲ್ಲಿ ಮೆಟ್ರೋ ರೈಲು ನಿಗಮ ಅಂತಿಮ ಮಾರ್ಗವಾಗಿ ಕ್ಯುರೇಟಿವ್ ಪೆಟಿಶನ್ ಹಾಕಿತು. ಈಗ ಸುಪ್ರೀಂ ಕೋರ್ಟ್ ನ್ಯಾಯಪೀಠ ಡಿಎಂಆರ್​ಸಿ ಪರವಾಗಿ ತೀರ್ಪು ನೀಡಿದೆ.

ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್​ನ ಷೇರು ಬೆಲೆ 2008ರ ಜನವರಿ ತಿಂಗಳಲ್ಲಿ 2,514 ರೂಗಳ ಗರಿಷ್ಠ ಮಟ್ಟದಲ್ಲಿತ್ತು. ಈಗ ಅದು 227.60 ರೂಗೆ ಕುಸಿದಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಷೇರುಬೆಲೆ ಸ್ಥಿರವಾಗಿ ಏರತೊಡಗಿತ್ತು. ಈಗ ಸುಪ್ರೀಂಕೋರ್ಟ್ ತೀರ್ಪು ರಿಲಾಯನ್ಸ್ ಇನ್​ಫ್ರಾ ಷೇರಿಗೆ ಇನ್ನಷ್ಟು ಹಿನ್ನಡೆ ತರುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?