AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೂ ಬಂದ ಆಂಥ್ರೋಪಿಕ್; ಬೆಂಗಳೂರಿನಲ್ಲಿ ಅಂಗಡಿ ತೆರೆದ ಎಐ ಕಂಪನಿ

Anthropic starts its office in Bengaluru: ಕೋಡಿಂಗ್ ಇತ್ಯಾದಿ ಕೆಲಸಗಳನ್ನು ಸಲೀಸಾಗಿ ಮಾಡುವ ಎಐ ಮಾಡಲ್​ಗಳನ್ನು ಹೊಂದಿರುವ ಆಂಥ್ರೋಪಿಕ್ ಎನ್ನುವ 2021ರ ಸಂಜಾತ ಕಂಪನಿ ಭಾರತದಲ್ಲಿ ಮೊದಲ ಕಚೇರಿ ಆರಂಭಿಸಿದೆ. ಬೆಂಗಳೂರಿನಲ್ಲಿ ಇವತ್ತು (ಫೆ. 16) ಆಂಥ್ರೋಪಿಕ್ ಕಚೇರಿ ಆರಂಭವಾಗಿದೆ. ಅಮೆರಿಕ, ಯೂರೋಪ್​ಗಳಲ್ಲಿ ಹಲವು ಕಚೇರಿಗಳನ್ನು ಅದು ಹೊಂದಿದೆ. ಜಪಾನ್​ನ ಟೋಕಿಯೋ ಬಿಟ್ಟರೆ ಏಷ್ಯಾದಲ್ಲಿ ಅದರ ಕಚೇರಿ ಇರುವುದು ಈಗ ಬೆಂಗಳೂರಿನಲ್ಲಿ ಮಾತ್ರ.

ಭಾರತಕ್ಕೂ ಬಂದ ಆಂಥ್ರೋಪಿಕ್; ಬೆಂಗಳೂರಿನಲ್ಲಿ ಅಂಗಡಿ ತೆರೆದ ಎಐ ಕಂಪನಿ
ಆಂಥ್ರೋಪಿಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 16, 2026 | 5:17 PM

Share

ಬೆಂಗಳೂರು, ಫೆಬ್ರುವರಿ 16: ಎಐ ಸೇವೆಗಳನ್ನು ನೀಡುವ ಆಂಥ್ರೋಪಿಕ್ (Anthropic) ಸಂಸ್ಥೆ ಬೆಂಗಳೂರಿನಲ್ಲಿ ಹೊಸ ಕಚೇರಿ ತೆರೆದಿದೆ. ಇದು ಭಾರತದಲ್ಲಿ ಆಂಥ್ರೋಪಿಕ್​ನ ಮೊದಲ ಕಚೇರಿಯಾಗಿದೆ. ಏಷ್ಯಾದಲ್ಲಿ ಅದರ ಎರಡನೇ ಕಚೇರಿಯಾಗಿದೆ. ಭಾರತದ ಅಗಾಧ ಮಾರುಕಟ್ಟೆ, ವಿಫುಲ ಅವಕಾಶಗಳಿರುವ ಹಿನ್ನೆಲೆಯಲ್ಲಿ ಈ ಅಮೆರಿಕನ್ ಎಐ ಕಂಪನಿ ಬೆಂಗಳೂರಿನಲ್ಲಿ ಕಚೇರಿ ತೆರೆದಿದೆ.

ಆಂಥ್ರೋಪಿಕ್​ನ ಸೂಪರ್ ಹಿಟ್ ಎಐ ಉತ್ಪನ್ನಗಳಲ್ಲಿ ಕ್ಲಾಡ್ ಎಐ ಒಂದು. ಇದು ಜನರೇಟಿವ್ ಎಐ ಮಾಡಲ್ ಆದರೂ ಕೋಡಿಂಗ್ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವುದಕ್ಕೆ ಖ್ಯಾತಿ ಪಡೆದಿದೆ. ಅದರ ಕ್ಲಾಡ್ ಎಐ ಸರ್ವಿಸ್​ಗೆ ಭಾರತವೇ ಎರಡನೇ ಅತಿದೊಡ್ಡ ಮಾರುಕಟ್ಟೆ ಎನಿಸಿದೆ. ಆ್ಯಪ್​ಗಳನ್ನು ತಯಾರಿಸುವುದು, ಸಿಸ್ಟಂಗಳ ಆಧುನೀಕರಣ, ಪ್ರೊಡಕ್ಷನ್ ಸಾಫ್ಟ್​ವೇರ್ ಸಾಗಣೆ ಇತ್ಯಾದಿಗೆ ಕ್ಲಾಡ್ ಎಐ ಬಳಕೆ ಭಾರತದಲ್ಲಿ ಹೆಚ್ಚಿದೆ. ಹೀಗಾಗಿ, ಭಾರತದ ಮಾರುಕಟ್ಟೆಯ ಮೇಲೆ ಆಂಥ್ರೋಪಿಕ್ ಹೆಚ್ಚಿನ ಕಣ್ಣು ನೆಡಲು ನಿರ್ಧರಿಸಿದೆ.

ಇದನ್ನೂ ಓದಿ: ಐದು ವರ್ಷದಲ್ಲಿ ಐಟಿ ಉದ್ಯೋಗಗಳೇ ಇರೋದಿಲ್ಲ ಎಂದಿದ್ದಾರೆ ವಿನೋದ್ ಖೋಸ್ಲಾ; ಎಐನಿಂದ ಭಾರತವೇನು ಮಾಡಬೇಕು?

‘ಬೆಂಗಳೂರು ಕಚೇರಿಯನ್ನು ಇವತ್ತು ಅಧಿಕೃತವಾಗಿ ತೆರೆದಿದ್ದೇವೆ. ಉದ್ದಿಮೆ, ಶಿಕ್ಷಣ ಮತ್ತು ಕೃಷಿ ಸೆಕ್ಟರ್​ಗಳಲ್ಲಿ ಜೊತೆಗಾರಿಕೆಗಳನ್ನು ಹೊಂದಿದ್ದೇವೆ. ಭಾರತದ ಎಲ್ಲಾ ಸೆಕ್ಟರ್​ಗಳಲ್ಲೂ ಎಐ ಸೇವೆ ಮಾಡಲು ಬದ್ಧರಾಗಿದ್ದೇವೆ. ಹೆಚ್ಚು ಜನರು ಮತ್ತು ಉದ್ದಿಮೆಗಳಿಗೆ ಎಐ ಲಾಭಗಳನ್ನು ಕೊಡಲು ಭಾರತ ಒಳ್ಳೆಯ ಅವಕಾಶ ಕೊಡುತ್ತದೆ. ಭಾರತದಲ್ಲಿ ಅಸಾಧಾರಣ ತಾಂತ್ರಿಕ ಪ್ರತಿಭೆ, ಅಗಾಧ ಡಿಜಿಟಲ್ ಇನ್​ಫ್ರಾಸ್ಟ್ರಕ್ಚರ್ ಇದೆ. ತಂತ್ರಜ್ಞಾನ ಮೂಲಕ ಜನರ ಜೀವನ ಸುಧಾರಿಸುವ ಕಾರ್ಯದಲ್ಲಿ ಯಶಸ್ಸು ಹೊಂದಿದೆ. ಈ ಎಐ ತಂತ್ರಜ್ಞಾನವು ಜನರಿಗೆ ಅನುಕೂಲವಾಗುವಂತಾಗಲು ಇಂತಹ ವಾತಾವರಣವೇ ಬೇಕಿರುವುದು’ ಎಂದು ಆಂಥ್ರೋಪಿಕ್​ನ ಭಾರತ ವಿಭಾಗದ ಎಂಡಿ ಇರಿನಾ ಘೋಸ್ ಹೇಳುತ್ತಾರೆ.

ಭಾರತದಲ್ಲಿ ಕನ್ನಡ, ಹಿಂದಿ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಎಐ ಮಾಡಲ್ ಅಭಿವೃದ್ಧಿಪಡಿಸುವ ಕಡೆಗೂ ಆಂಥ್ರೋಪಿಕ್ ಗಮನ ಹರಿಸುತ್ತಿದ್ದು, ಈ ನಿಟ್ಟಿನಲ್ಲಿ ವಿವಿಧ ಕಂಪನಿಗಳೊಂದಿಗೆ ಸಹಭಾಗಿತ್ವ ಸಾಧಿಸಿದೆ. ಈಗಿರುವ ಎಐ ಮಾಡಲ್​ಗಳು ಇಂಗ್ಲೀಷ್​ನಲ್ಲಿ ಉತ್ತಮ ಸೇವೆ ಒದಗಿಸುತ್ತವೆ. ಆದರೆ, ಹಿಂದಿ, ಬಂಗಾಳ, ಮರಾಠಿ, ಕನ್ನಡ, ತೆಲುಗು, ತಮಿಳುನ, ಪಂಜಾಬಿ, ಗುಜರಾತಿ, ಮಲಯಾಳಂ, ಉರ್ದು ಭಾಷೆಗಳಲ್ಲಿ ಸಾಕಷ್ಟು ಟ್ರೈನಿಂಗ್ ಮಾಡಿ, ಈ ಅಂತರವನ್ನು ಕಡಿಮೆ ಮಾಡಲು ಆರು ತಿಂಗಳ ಹಿಂದೆಯೇ ಆಂಥ್ರೋಪಿಕ್ ಪ್ರಯತ್ನ ಆರಂಭಿಸಿತ್ತು. ಇದು ತಕ್ಕಮಟ್ಟಿಗೆ ಯಶಸ್ವಿಯಾಗಿದೆ ಎಂದು ಈ ಸಂಸ್ಥೆ ಹೇಳಿಕೊಂಡಿದೆ.

ಇದನ್ನೂ ಓದಿ: AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್

ಆಂಥ್ರೋಪಿಕ್ ಕಂಪನಿ ಇತ್ತೀಚೆಗಷ್ಟೇ 30 ಬಿಲಿಯನ್ ಡಾಲರ್​ನಷ್ಟು ಫಂಡಿಂಗ್ ಪಡೆದಿದೆ. ಇದರ ಮೌಲ್ಯ ಇದೀಗ 380 ಬಿಲಿಯನ್ ಡಾಲರ್ ಎಂದು ಮೌಲ್ಯೀಕರಿಸಲಾಗಿದೆ. ಬಹಳಷ್ಟು ಐಟಿ ಸರ್ವಿಸ್ ಕೆಲಸಗಳನ್ನು ಇದರ ಎಐ ಏಜೆಂಟ್​ಗಳು ತ್ವರಿತವಾಗಿ ಮಾಡಬಲ್ಲುವುದು. ಹೀಗಾಗಿ, ಐಟಿ ಸರ್ವಿಸ್ ಕ್ಷೇತ್ರದಲ್ಲಿ ಆಂಥ್ರೋಪಿಕ್ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!