AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರಸ್ನೇಹಿ ಯೋಜನೆಗಳಿಗೆ ಆಪಲ್ ಭರ್ಜರಿ ಹೂಡಿಕೆ; ಸ್ವಚ್ಛ ಇಂಧನ, ಪ್ಲಾಸ್ಟಿಕ್ ನಿವಾರಣೆ, ತ್ಯಾಜ್ಯ ನಿರ್ವಹಣೆ ಇತ್ಯಾದಿ ಉಪಕ್ರಮಗಳ ಘೋಷಣೆ

Apple announces series of initiatives for 2030 carbon neutral goal: 2030ರೊಳಗೆ ತನ್ನ ಇಂಗಾಲ ಹೊರಸೂಸುವಿಕೆ ಶೂನ್ಯಗೊಳಿಸುವ ಗುರಿಯೊಂದಿಗೆ ಆಪಲ್ ಕಂಪನಿ ವಿವಿಧ ಉಪಕ್ರಮಗಳನ್ನು ಘೋಷಿಸಿದೆ. ಇದರಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆ ಯೋಜನೆಗೆ 100 ಕೋಟಿ ರೂ ಹೂಡಿಕೆಯೂ ಒಳಗೊಂಡಿದೆ. ಪ್ಲಾಸ್ಟಿಕ್ ತ್ಯಾಜ್ಯ ನಿವಾರಣೆ, ತ್ಯಾಜ್ಯ ನಿರ್ವಹಣೆ ಇತ್ಯಾದಿ ಉಪಕ್ರಮಗಳನ್ನೂ ಆಪಲ್ ಘೋಷಿಸಿದೆ.

ಪರಿಸರಸ್ನೇಹಿ ಯೋಜನೆಗಳಿಗೆ ಆಪಲ್ ಭರ್ಜರಿ ಹೂಡಿಕೆ; ಸ್ವಚ್ಛ ಇಂಧನ, ಪ್ಲಾಸ್ಟಿಕ್ ನಿವಾರಣೆ, ತ್ಯಾಜ್ಯ ನಿರ್ವಹಣೆ ಇತ್ಯಾದಿ ಉಪಕ್ರಮಗಳ ಘೋಷಣೆ
ಆ್ಯಪಲ್Image Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 07, 2026 | 6:15 PM

Share

ನವದೆಹಲಿ, ಮೇ 7: ವಿಶ್ವದ ದೈತ್ಯ ತಂತ್ರಜ್ಞಾನ ಸಂಸ್ಥೆಯಾದ ಆಪಲ್ (Apple Inc), ಭಾರತದಲ್ಲಿ ಪರಿಸರ ಸ್ನೇಹಿ ಇಂಧನಕ್ಕಾಗಿ ದೊಡ್ಡ ಹೆಜ್ಜೆಯನ್ನಿಟ್ಟಿದೆ. ತನ್ನ ‘2030 ಕಾರ್ಬನ್ ನ್ಯೂಟ್ರಲ್’ (2030 Carbon Neutral) ಗುರಿಯನ್ನು ತಲುಪುವ ನಿಟ್ಟಿನಲ್ಲಿ ಭಾರತದ ಕ್ಲೀನ್ ಎನರ್ಜಿ (Clean Energy) ವಲಯದಲ್ಲಿ 100 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಆಪಲ್ ಘೋಷಿಸಿದೆ. ಇದೂ ಒಳಗೊಂಡಂತೆ ವಿವಿಧ ಪರಿಸರ ಉಪಕ್ರಮಗಳನ್ನು ಆ್ಯಪಲ್ ಕಂಪನಿ ಕೈಗೊಳ್ಳುತ್ತಿದೆ.

2030ರ ವೇಳೆಗೆ ತನ್ನ ಸಂಪೂರ್ಣ ಪೂರೈಕೆ ಸರಪಳಿ (Supply Chain) ಮತ್ತು ಉತ್ಪನ್ನಗಳ ಬಳಕೆಯಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಕ್ಕಿಳಿಸುವ (Carbon Neutral) ಬೃಹತ್ ಗುರಿಯನ್ನು ಆಪಲ್ ಹೊಂದಿದೆ. ಇದಕ್ಕಾಗಿ ಭಾರತದಂತಹ ಬೆಳೆಯುತ್ತಿರುವ ಮಾರುಕಟ್ಟೆಯಲ್ಲಿ ಹಸಿರು ಇಂಧನಕ್ಕೆ ಒತ್ತು ನೀಡುತ್ತಿದೆ.

ಆಪಲ್ ಸಂಸ್ಥೆಯು ಭಾರತದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳನ್ನು, ವಿಶೇಷವಾಗಿ ಸೌರಶಕ್ತಿ (Solar Power) ಯೋಜನೆಗಳನ್ನು ವಿಸ್ತರಿಸಲು ಈ ಹಣವನ್ನು ಬಳಸಲಿದೆ. ನವೀಕರಣ ಇಂಧನ ಅಭಿವೃದ್ಧಿಪಡಿಸುವ ಕ್ಲೀನ್​ಮ್ಯಾಕ್ಸ್ (CleanMax) ಕಂಪನಿ ಜೊತೆಗೂಡಿ ಆ್ಯಪಲ್ ದೆಶಾದ್ಯಂತ 150 ಮೆಗಾವ್ಯಾಟ್​ಗಿಂತ ಹೆಚ್ಚು ಸ್ವಚ್ಛ ಇಂಧನ ತಯಾರಿಸುವ ಯೋಜನೆ ಹೊಂದಿದೆ. ವರ್ಷಕ್ಕೆ ಒಂದೂವರೆ ಲಕ್ಷ ಮನೆಗಳಿಗೆ ಈ ಪರಿಸರಪೂರಕ ಇಂಧನ ಲಭ್ಯವಾಗಿಸಬಲ್ಲುದು ಈ ಉಪಕ್ರಮ.

ಇದನ್ನೂ ಓದಿ: ಬ್ಯಾಂಕ್ ಸಾಲಗಾರರ ಗಮನಕ್ಕೆ; ಅಡಮಾನ ಆಸ್ತಿ ವಿಚಾರದಲ್ಲಿ ಆರ್​ಬಿಐ ಕರಡು ನಿಯಮಗಳಿವು…

ಇದೇ ಕ್ಲೀನ್ ಮ್ಯಾಕ್ಸ್ ಕಂಪನಿ ಜೊತೆ ಸೇರಿ ಈ ಹಿಂದೆ ಆ್ಯಪಲ್ ತನ್ನ ಕಚೇರಿಗಳಲ್ಲಿ ರೂಫ್​ಟಾಪ್ ಸೋಲಾರ್ ಅನ್ನು ಅಳವಡಿಕೆ ಮಾಡಿತ್ತು.

ಕೇವಲ ಇಂಧನ ಮಾತ್ರವಲ್ಲದೆ, ನೀರು ಮರುಪೂರಣ (Water Replenishment) ಯೋಜನೆಗಳಿಗೂ ಆಪಲ್ ಆದ್ಯತೆ ನೀಡುತ್ತಿದೆ. ಕೈಗಾರಿಕಾ ಪ್ರದೇಶಗಳಲ್ಲಿ ನೀರಿನ ಬಳಕೆಯನ್ನು ಕಡಿಮೆ ಮಾಡಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸ್ಥಳೀಯ ಸಂಸ್ಥೆಗಳೊಂದಿಗೆ ಕೈಜೋಡಿಸುತ್ತಿದೆ.

ಹಾಗೆಯೇ, ಡಬ್ಲ್ಯುಡಬ್ಲ್ಯುಎಫ್ ಜೊತೆ ಸೇರಿ ರೀಸೈಕ್ಲಿಂಗ್, ವೇಸ್ಟ್ ಮ್ಯಾನೇಜ್ಮೆಂಟ್ ಉಪಕ್ರಮಗಳ ಮೂಲಕ ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತಿದೆ. ಅಕುಮೆನ್ ಎನ್ನುವ ಕಂಪನಿ ಜೊತೆಗೂ ಆಪಲ್ ಕೈಜೋಡಿಸುತ್ತಿದೆ. ಇದೂ ಕೂಡ ರೀಜನರೇಟಿವ್ ಅಗ್ರಿಕಲ್ಚರ್, ವೇಸ್ಟ್ ಮ್ಯಾನೇಜ್ಮೆಂಟ್, ಸರ್ಕುಲಾರ್ ಎಕನಾಮಿಯಂತಹ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತದೆ.

ಆಪಲ್ ಪಾಲಿಗೆ ಭಾರತ ಈಗ ಕೇವಲ ದೊಡ್ಡ ಮಾರುಕಟ್ಟೆಯಲ್ಲ, ಬದಲಿಗೆ ಪ್ರಮುಖ ಉತ್ಪಾದನಾ ಕೇಂದ್ರವೂ ಆಗಿದೆ. ಐಫೋನ್ ತಯಾರಿಕೆಯಲ್ಲಿ ಭಾರತದ ಪಾಲು ಹೆಚ್ಚುತ್ತಿರುವುದರಿಂದ, ಇಲ್ಲಿನ ಪರಿಸರ ಸಮತೋಲನ ಕಾಯ್ದುಕೊಳ್ಳುವುದು ಸಂಸ್ಥೆಗೆ ಅನಿವಾರ್ಯ ಮತ್ತು ಜವಾಬ್ದಾರಿಯುತ ಕೆಲಸವಾಗಿದೆ.

ಇದನ್ನೂ ಓದಿ: ಲಾಭದ ಹಳಿಗೆ ಬಂದ ಪೇಟಿಎಂ; 663 ಕೋಟಿ ರೂ ನಷ್ಟದಿಂದ 552 ಕೋಟಿ ರೂ ಲಾಭ ಕಂಡ ಒನ್97 ಕಮ್ಯೂನಿಕೇಶನ್ಸ್

ಈ ಹೂಡಿಕೆಯಿಂದ ಭಾರತದ ಸ್ಥಳೀಯ ಸಮುದಾಯಗಳಿಗೆ ಉದ್ಯೋಗಾವಕಾಶ ಮತ್ತು ಸುಸ್ಥಿರ ಪರಿಸರದ ಲಾಭ ಸಿಗಲಿದೆ. ಆಪಲ್‌ನ ಈ ನಡೆಯು ಇತರ ದೊಡ್ಡ ಕಂಪನಿಗಳಿಗೂ ಪರಿಸರ ರಕ್ಷಣೆಯತ್ತ ಸಾಗಲು ಪ್ರೇರಣೆಯಾಗಲಿದೆ.

ಆಪಲ್ ಸಂಸ್ಥೆಯು ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಲು ಮತ್ತು ತನ್ನ ವ್ಯಾಪಾರವನ್ನು ಪರಿಸರ ಸ್ನೇಹಿಯಾಗಿಸಲು ಭಾರತದಲ್ಲಿ ಈ ಭಾರಿ ಹೂಡಿಕೆಯನ್ನು ಮಾಡುತ್ತಿದೆ. ತಂತ್ರಜ್ಞಾನ ಮತ್ತು ಪರಿಸರ ಎರಡೂ ಜೊತೆಜೊತೆಯಾಗಿ ಸಾಗಬೇಕು ಎಂಬುದು ಇದರ ಉದ್ದೇಶ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!