AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಐಫೋನ್ ರಫ್ತು ಗಣನೀಯ ಹೆಚ್ಚಳ; ಆದರೆ, ಚೀನಾದ ಆ್ಯಪಲ್ ಹಿಡಿತ ಈಗಲೂ ಬಲಿಷ್ಠ

Made-in-India iPhones exported to world: ಆ್ಯಪಲ್ ಸಂಸ್ಥೆ 2024ರ ಏಪ್ರಿಲ್​ನಿಂದ ಸೆಪ್ಟೆಂಬರ್​​ವರೆಗಿನ ಅವಧಿಯಲ್ಲಿ 6 ಬಿಲಿಯನ್ ಡಾಲರ್ ಮೌಲ್ಯದ ಮೇಡ್ ಇನ್ ಇಂಡಿಯಾ ಐಫೋನ್​ಗಳನ್ನು ರಫ್ತು ಮಾಡಿದೆ. ಈ ಹಣಕಾಸು ವರ್ಷದಲ್ಲಿ ಭಾರತದಿಂದ ರಫ್ತಾಗುವ ಐಫೋನ್​ಗಳ ಮೌಲ್ಯ 10 ಬಿಲಿಯನ್ ಡಾಲರ್ ಗಡಿದಾಟುವ ನಿರೀಕ್ಷೆ ಇದೆ. ಶೇ 90ಕ್ಕಿಂತಲೂ ಹೆಚ್ಚು ಐಫೋನ್​ಗಳು ಈಗಲೂ ಚೀನಾದಲ್ಲೇ ಉತ್ಪಾದನೆ ಆಗುತ್ತವೆ.

ಭಾರತದಿಂದ ಐಫೋನ್ ರಫ್ತು ಗಣನೀಯ ಹೆಚ್ಚಳ; ಆದರೆ, ಚೀನಾದ ಆ್ಯಪಲ್ ಹಿಡಿತ ಈಗಲೂ ಬಲಿಷ್ಠ
ಆ್ಯಪಲ್ ಐಫೋನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 29, 2024 | 11:52 AM

Share

ನವದೆಹಲಿ, ಅಕ್ಟೋಬರ್ 29: ಅಮೆರಿಕದ ಆ್ಯಪಲ್ ಸಂಸ್ಥೆ ಭಾರತದಲ್ಲಿ ತನ್ನ ಉತ್ಪನ್ನಗಳ ತಯಾರಿಕೆಯ ಕೆಲಸವನ್ನು ತೀವ್ರಗೊಳಿಸಿದೆ. ಪರಿಣಾಮವಾಗಿ ಚೀನಾದ ಮೇಲಿನ ಅವಲಂಬನೆಯನ್ನು ಆ್ಯಪಲ್ ನಿಧಾನವಾಗಿ ಕಡಿಮೆ ಮಾಡಿಕೊಳ್ಳುತ್ತಿದೆ. ವರದಿ ಪ್ರಕಾರ, ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗಿನ ಅರ್ಧ ವರ್ಷದಲ್ಲಿ 6 ಬಿಲಿಯನ್ ಡಾಲರ್ ಮೌಲ್ಯದ ಮೇಡ್ ಇನ್ ಇಂಡಿಯಾ ಐಫೋನ್​ಗಳನ್ನು ಆ್ಯಪಲ್ ಸಂಸ್ಥೆ ರಫ್ತು ಮಾಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಮೂರು ಪಟ್ಟು ಹೆಚ್ಚಾಗಿದೆ. ಅಂದರೆ, ಭಾರತದಲ್ಲಿ ಐಫೋನ್ ತಯಾರಿಕೆ ಹೆಚ್ಚುತ್ತಿರುವ ವೇಗ ಬಹಳ ಹೆಚ್ಚಿದೆ. ಅಂದಾಜು ಪ್ರಕಾರ ಈ ಹಣಕಾಸು ವರ್ಷದಲ್ಲಿ ಮೇಡ್ ಇನ್ ಇಂಡಿಯಾ ಐಫೋನ್​ ಗಳ ರಫ್ತು 10 ಬಿಲಿಯನ್ ಡಾಲರ್ ದಾಟಬಹುದು ಎನ್ನಲಾಗಿದೆ.

ಆ್ಯಪಲ್ ಸಂಸ್ಥೆಯ ಉತ್ಪನ್ನಗಳನ್ನು ಭಾರತದಲ್ಲಿ ಮೂರು ಕಂಪನಿಗಳು ತಯಾರಿಸಿಕೊಡುತ್ತವೆ. ಫಾಕ್ಸ್​ಕಾನ್, ಪೆಗಾಟ್ರಾನ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಗಳಿಂದ ಐಫೋನ್​ಗಳ ಅಂತಿಮ ಅಸೆಂಬ್ಲಿಂಗ್ ನಡೆಯುತ್ತದೆ. ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗಿನ ಅವಧಿಯಲ್ಲಿ 6 ಬಿಲಿಯನ್ ಡಾಲರ್ ಮೊತ್ತದ ಐಫೋನ್​ಗಳನ್ನು ರಫ್ತು ಮಾಡಲಾಗಿದೆ. ಇದರಲ್ಲಿ ಅರ್ಧದಷ್ಟು ಉತ್ಪಾದನೆಯನ್ನು ಫಾಕ್ಸ್​ಕಾನ್ ಸಂಸ್ಥೆ ಮಾಡುತ್ತದೆ.

ಇದನ್ನೂ ಓದಿ: ಈ ಹಣಕಾಸು ವರ್ಷದ ಮೊದಲ ಆರು ತಿಂಗಳ ಆರ್ಥಿಕ ಬೆಳವಣಿಗೆ ಬಗ್ಗೆ ಹಣಕಾಸು ಸಚಿವಾಲಯ ತೃಪ್ತಿ

ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಿಂದ 1.7 ಬಿಲಿಯನ್ ಡಾಲರ್ ಮೌಲ್ಯದ ಐಫೋನ್​ಗಳ ರಫ್ತಾಗಿದೆ. ಟಾಟಾ ವೈಶಿಷ್ಟ್ಯತೆ ಎಂದರೆ, ಐಫೋನ್ ಅನ್ನು ತಯಾರಿಸುತ್ತಿರುವ ಮೊದಲ ಹಾಗೂ ಏಕೈಕ ಭಾರತೀಯ ಕಂಪನಿ ಎನಿಸಿದೆ. ಫಾಕ್ಸ್​ಕಾನ್, ಪೆಗಾಟ್ರಾನ್ ಕಂಪನಿಗಳು ತೈವಾನ್ ದೇಶದ ಮೂಲದವಾಗಿವೆ.

ಚೀನಾದಲ್ಲಿ ಈಗಲೂ ಅತಿಹೆಚ್ಚು ಐಫೋನ್ ತಯಾರಿಕೆ

ಚೀನಾ ದೇಶ ಕಳೆದ ನಾಲ್ಕೈದು ದಶಕಗಳಿಂದ ಅಭಿವೃದ್ಧಿಪಡಿಸಿದ ಮ್ಯಾನುಫ್ಯಾಕ್ಚರಿಂಗ್ ಮೂಲಸೌಕರ್ಯ ಕಾರಣದಿಂದ ಅಲ್ಲಿ ಬಹಳಷ್ಟು ಅಮೆರಿಕನ್ ಕಂಪನಿಗಳು ತಮ್ಮ ಉತ್ಪನ್ನಗಳನ್ನು ತಯಾರಿಸುತ್ತವೆ. ಕೋವಿಡ್ ಬಂದ ಬಳಿಕ ಚೀನಾದಲ್ಲಿ ವಿಪರೀತ ಲಾಕ್​ಡೌನ್ ಇತ್ಯಾದಿ ಪ್ರತಿಬಂಧಗಳಿಂದಾಗಿ ಹಲವು ಕಂಪನಿಗಳ ಬಿಸಿನೆಸ್ ನಿಂತು ಹೋಗಿತ್ತು. ಸರಬರಾಜು ಸರಪಳಿ ದುರ್ಬಲಗೊಂಡಿತ್ತು. ಈ ಕಾರಣಕ್ಕೆ ಬಹಳಷ್ಟು ವಿದೇಶೀ ಕಂಪನಿಗಳು ಚೀನಾ ಮೇಲೆ ಪೂರ್ಣ ಅವಲಂಬನೆಯಾಗುವುದನ್ನು ತಪ್ಪಿಸಿ ಪರ್ಯಾಯ ಮಾರುಕಟ್ಟೆಗಳತ್ತ ಹೋಗುತ್ತಿವೆ. ಭಾರತ, ವಿಯೆಟ್ನಾಂ, ಫಿಲಿಪ್ಪೈನ್ಸ್, ಇಂಡೋನೇಷ್ಯಾ, ಮಲೇಷ್ಯಾ, ಕಾಂಬೋಡಿಯಾ ಮೊದಲಾದ ದೇಶಗಳಲ್ಲಿ ಉತ್ಪಾದನೆ ಹೆಚ್ಚುತ್ತಿದೆ.

ಇದನ್ನೂ ಓದಿ: ವಯಸ್ಸಾದವರಿಗೆ 5 ಲಕ್ಷ ಕವರೇಜ್ ಇರುವ ಪಿಎಂ ಆಯುಷ್ಮಾನ್ ಕಾರ್ಡ್ ಮಾಡಿಸುವುದು ಹೇಗೆ? ಇಲ್ಲಿದೆ ಡೀಟೇಲ್ಸ್

ಆದರೆ, ಚೀನಾದಲ್ಲಿ ಐಫೋನ್ ತಯಾರಿಕೆ ಈಗಲೂ ಅತಿಹೆಚ್ಚು ಇದೆ. ಶೇ. 90ಕ್ಕಿಂತಲೂ ಹೆಚ್ಚು ಆ್ಯಪಲ್ ಉತ್ಪನ್ನಗಳು ಚೀನಾದಲ್ಲಿ ತಯಾರಾಗುತ್ತವೆ. ಆ್ಯಪಲ್ ಕಂಪನಿಯ ಒಟ್ಟಾರೆ ಆದಾಯದಲ್ಲಿ ಚೀನಾದಿಂದ ಬರುವ ಆದಾಯದ ಪಾಲು ಶೇ. 19ರಷ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!