AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1300 ಕೋಟಿ ಡಾಲರ್​ನ ಉಕ್ಕಿನ ಸ್ಥಾವರ ಸ್ಥಾಪಿಸಲು ಅರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್​ಗೆ ಒಡಿಶಾ ಸರ್ಕಾರದ ಅನುಮತಿ

1300 ಕೋಟಿ ಡಾಲರ್​ ಮೌಲ್ಯದ ಉಕ್ಕಿನ ಸ್ಥಾವರ ಸ್ಥಾಪನೆಗೆ ಅರಸೆಲರ್ ಮಿತ್ತಲ್ ನಿಪ್ಪನ್​ಗೆ ಒಡಿಶಾ ಸರ್ಕಾರವು ಅನುಮತಿ ನೀಡಿದೆ. ಆ ಬಗ್ಗೆ ವಿವರಗಳು ಇಲ್ಲಿವೆ.

1300 ಕೋಟಿ ಡಾಲರ್​ನ ಉಕ್ಕಿನ ಸ್ಥಾವರ ಸ್ಥಾಪಿಸಲು ಅರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್​ಗೆ ಒಡಿಶಾ ಸರ್ಕಾರದ ಅನುಮತಿ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Dec 18, 2021 | 11:41 PM

Share

1300 ಕೋಟಿ ಅಮೆರಿಕನ್​ ಡಾಲರ್​ನ- ವರ್ಷಕ್ಕೆ 24 ಮಿಲಿಯನ್ ಟನ್ ಉತ್ಪಾದಿಸುವ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಒಡಿಶಾ ರಾಜ್ಯ ಸರ್ಕಾರದಿಂದ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಲಿಮಿಟೆಡ್ ಅನುಮೋದನೆಯನ್ನು ಪಡೆದಿದೆ. ಇದು ಮಾರ್ಚ್‌ನಲ್ಲಿ ಆರಂಭಿಕ ಪ್ರಸ್ತಾವನೆಯಿಂದ ಹೂಡಿಕೆ ಮತ್ತು ಸಾಮರ್ಥ್ಯವನ್ನು ದ್ವಿಗುಣಗೊಳಿಸಿದೆ. ಕೇಂದ್ರಪಾರಾ ಸಮುಚ್ಚಯವು ಇತ್ತೀಚಿನ ಹಸಿರು ಉಕ್ಕಿನ ತಯಾರಿಕೆ ತಂತ್ರಜ್ಞಾನವನ್ನು ಬಳಸಿಕೊಂಡು, ಉಕ್ಕನ್ನು ಉತ್ಪಾದಿಸುತ್ತದೆ ಮತ್ತು ಹೆಚ್ಚಿನ ಮೌಲ್ಯವರ್ಧಿತ ಡೌನ್‌ಸ್ಟ್ರೀಮ್ ಉತ್ಪನ್ನಗಳನ್ನು ಸಹ ಉತ್ಪಾದಿಸುತ್ತದೆ ಎಂದು ಒಡಿಶಾ ಸರ್ಕಾರದ ಹೂಡಿಕೆ ಉತ್ತೇಜನಾ ಸಂಸ್ಥೆಯು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ. ಯೋಜನೆಯು ಏಳು ವರ್ಷಗಳಲ್ಲಿ ಹಂತಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಅದು ತಿಳಿಸಿದೆ.

ಪಟ್ನಾಯಕ್ ಮಾರ್ಚ್‌ನಲ್ಲಿ ಟ್ವೀಟ್ ಮಾಡಿ, ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ 500 ಶತಕೋಟಿ ರೂಪಾಯಿಗಳ (6.6 ಶತಕೋಟಿ ಅಮೆರಿಕನ್ ಡಾಲರ್) ಹೂಡಿಕೆಯಲ್ಲಿ ರಾಜ್ಯದಲ್ಲಿ ವರ್ಷಕ್ಕೆ 12 ಮಿಲಿಯನ್ ಟನ್ ಉಕ್ಕಿನ ಸ್ಥಾವರವನ್ನು ನಿರ್ಮಿಸಲು ಒಪ್ಪಂದಕ್ಕೆ ಸಹಿ ಹಾಕಿದೆ ಎಂದಿದ್ದರು. ಈ ಕೇಂದ್ರದಲ್ಲಿ ವಾರ್ಷಿಕವಾಗಿ 18.75 ಮಿಲಿಯನ್ ಟನ್ ಸಿಮೆಂಟ್ ಅನ್ನು ಉತ್ಪಾದಿಸುತ್ತದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಆರ್ಸೆಲರ್ ಮಿತ್ತಲ್ ಒಂದು ದಶಕದ ಹಿಂದೆ ರಾಜ್ಯದಲ್ಲಿ ಉಕ್ಕಿನ ಸ್ಥಾವರವನ್ನು ನಿರ್ಮಿಸಲು ಪ್ರಯತ್ನಿಸಿತ್ತು. ಆದರೆ ಸೂಕ್ತವಾದ ಭೂಮಿ ಮತ್ತು ಪ್ರಮುಖ ಕಚ್ಚಾ ವಸ್ತುವಾದ ಕಬ್ಬಿಣದ ಅದಿರನ್ನು ಗಣಿಗಾರಿಕೆ ಮಾಡಲು ಅಗತ್ಯವಾದ ಪರವಾನಗಿಗಳನ್ನು ಪಡೆಯುವಲ್ಲಿ ವಿಫಲವಾದ ಕಾರಣ 2013ರಲ್ಲಿ ಯೋಜನೆಯನ್ನು ಕೈಬಿಟ್ಟಿತು.

ಇದನ್ನೂ ಓದಿ: PLI Scheme: ಪಿಎಲ್​ಐ ಯೋಜನೆ ಅಡಿ ಸೆಮಿಕಂಡಕ್ಟರ್​ಗೆ 76 ಸಾವಿರ ಕೋಟಿ ರೂ. ಕೇಂದ್ರ ಸಂಪುಟ ಅನುಮೋದನೆ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?