Currency Exchange Rate: ವಿದೇಶೀ ಪ್ರವಾಸ ಹೊರಟರಾ? ಭಾರತದ ರೂಪಾಯಿ ಮೌಲ್ಯ ಯಾವ ದೇಶದ ವಿರುದ್ಧ ಎಷ್ಟಿದೆ ತಿಳಿಯಿರಿ

ನೀವೇನಾದರೂ ಪ್ರವಾಸ ಮಾಡುವುದಕ್ಕೆ ಆಲೋಚಿಸುತ್ತಿದ್ದೀರಾ? ಹಾಗಿದ್ದಲ್ಲಿ ವಿಶ್ವದ ಪ್ರಮುಖ ಕರೆನ್ಸಿಗಳ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ ಎಂದು ತಿಳಿಯಿರಿ.

Currency Exchange Rate: ವಿದೇಶೀ ಪ್ರವಾಸ ಹೊರಟರಾ? ಭಾರತದ ರೂಪಾಯಿ ಮೌಲ್ಯ ಯಾವ ದೇಶದ ವಿರುದ್ಧ ಎಷ್ಟಿದೆ ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
| Edited By: Srinivas Mata

Updated on: Apr 25, 2022 | 8:46 PM

ಭಾರತೀಯರು ಯಾವ ದೇಶಕ್ಕೆ ಪ್ರವಾಸಕ್ಕೆ ಅಂತ ಹೋದರೆ ನಮ್ಮ ದುಡ್ಡಲ್ಲಿ ಸಕತ್ ಆಗಿ ಖರ್ಚು ಮಾಡಿ, ಎಂಜಾಯ್ ಮಾಡಬಹುದು ಅನ್ನೋದು ಕೆಲವರ ಪ್ರಶ್ನೆ ಆಗಿರುತ್ತದೆ. ಇದೆಂಥ ಪ್ರಶ್ನೆ ಅನ್ನುತ್ತೀರಾ? ಭಾರತದ ರೂಪಾಯಿ ಮೌಲ್ಯ ಕೆಲವು ದೇಶಗಳಿಗಿಂತ ಕಡಿಮೆ ಇರಬಹುದು. ಆದರೆ ಕೆಲವು ದೇಶಗಳಲ್ಲಿ ಭಾರತದ ರೂಪಾಯಿ ಮೌಲ್ಯವೇ ಜಾಸ್ತಿ ಉದಾಹರಣೆಗೆ ಶ್ರೀಲಂಕಾ, ಬಾಂಗ್ಲಾದೇಶ್, ನೇಪಾಳ ಹೀಗೆ. ಇದರ ಜತೆಗೆ ಖರೀದಿ, ವ್ಯಾಸಂಗ, ಆಮದು- ರಫ್ತು ಏನೇ ಇರಲಿ ಕರೆನ್ಸಿ ಮೌಲ್ಯ ಮುಖ್ಯ ಪಾತ್ರ ವಹಿಸುತ್ತದೆ. ನಿಮಗೆ ಗೊತ್ತಾ, ಅಂತರರಾಷ್ಟ್ರೀಯ ಮಟ್ಟದಲ್ಲಿ ಯಾವ ದೇಶದ ಕರೆನ್ಸಿಗೆ (Currency) ಮಾನ್ಯತೆ ಹೆಚ್ಚು? ನಿಮಗೆ ಈ ಉತ್ತರ ಗೊತ್ತಿದ್ದಲ್ಲಿ, ಹೌದು, ಅದು ಅಮೆರಿಕದ ಡಾಲರ್. ಆದರೆ ಮೌಲ್ಯ ಅನ್ನೋ ವಿಚಾರಕ್ಕೆ ಬಂದಾಗ ಇತರ ದೇಶ, ವಲಯದ ಕರೆನ್ಸಿಗಳಿಗೆ ಬೆಲೆ ಜಾಸ್ತಿ. ಈಗ ಭಾರತದ ರೂಪಾಯಿಯಲ್ಲೇ ನೋಡುತ್ತಾ ಕೆಲವು ದೇಶಗಳ ಕರೆನ್ಸಿಗೆ ಎಷ್ಟು ನೀಡಬೇಕಾಗುತ್ತದೆ ಎಂಬುದನ್ನು ಗಮನಿಸೋಣ. ಏಪ್ರಿಲ್ 25ನೇ ತಾರೀಕಿನ ಸೋಮವಾರದ ವಿನಿಮಯ ದರ (Exchange Rate) ಇಲ್ಲಿ ತಿಳಿಸಲಾಗುತ್ತಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 76.71900 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 97.70100 ಭಾರತದ ರೂಪಾಯಿ

ಯುರೋಗೆ= 82.23400 ಭಾರತದ ರೂಪಾಯಿ

ಚೀನಾದ ಯುವಾನ್= 11.69290 ಭಾರತದ ರೂಪಾಯಿ

ಜಪಾನ್​ನ ಯೆನ್= 0.68406 (68 ಪೈಸೆ)

ಕುವೈತ್​ ದಿನಾರ್= 249.26800 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.00182 ಪೈಸೆ

ಬಾಂಗ್ಲಾದೇಶ್​ ಟಾಕಾ= 0.88934 (88 ಪೈಸೆ)

ಶ್ರೀಲಂಕಾ ರೂಪಾಯಿ= 0.22564 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.41004 (41 ಪೈಸೆ)

ನೇಪಾಳದ ರೂಪಾಯಿ= 0.62550 (62 ಪೈಸೆ)

ರಷ್ಯಾದ ರೂಬೆಲ್= 1.03625 (1.03 ಪೈಸೆ)

ಕಚ್ಚಾ ತೈಲ, ಅನಿಲ ಖರೀದಿಯೂ ಸೇರಿ ಅಂತರರಾಷ್ಟ್ರೀಯ ವಹಿವಾಟುಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

(ಮಾಹಿತಿ ಮೂಲ: goodreturns.in)

ಇದನ್ನೂ ಓದಿ: Japan Currency Yen: ಅಮೆರಿಕ ಡಾಲರ್ ವಿರುದ್ಧ ಜಪಾನ್ ಕರೆನ್ಸಿ ಇಪ್ಪತ್ತು ವರ್ಷಗಳ ಕನಿಷ್ಠ ಮಟ್ಟಕ್ಕೆ

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್