AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಮೇನಿಯಾಗೆ ಮೇಡ್ ಇನ್ ಇಂಡಿಯಾ ಗನ್​ಗಳ ರಫ್ತು; MRSAM ಕ್ಷಿಪಣಿಗಳಿಗೆ ಆರ್ಡರ್ ಕೊಟ್ಟ ಭಾರತೀಯ ನೌಕಾಪಡೆ

Indian defence industry: ಸದಾ ಯುದ್ಧದ ನೆರಳಿನಲ್ಲಿರುವ ಆರ್ಮೇನಿಯಾ ದೇಶ ತನ್ನ ರಕ್ಷಣಾ ವ್ಯವಸ್ಥೆ ಬಲಪಡಿಸಲು ಭಾರತೀಯ ಯುದ್ದಾಸ್ತ್ರಗಳನ್ನು ತರಿಸಿಕೊಳ್ಳುತ್ತದೆ. ಭಾರತದ ಎಲ್ ಅಂಡ್ ಟಿ ಸಂಸ್ಥೆ ತಯಾರಿಸಿರುವ ಆರ್ಟಿಲರಿ ಗನ್​ಗಳನ್ನು ಆರ್ಮೇನಿಯಾ ಆಮದು ಮಾಡಿಕೊಂಡಿದೆ. ಇದೇ ವೇಳೆ, ಭಾರತೀಯ ನೌಕಾಪಡೆಯು ಕ್ಷಿಪಣಿಗಳಿಗಾಗಿ ಭಾರತ್ ಡೈನಾಮಿಕ್ಸ್ ಸಂಸ್ಥೆಯೊಂದಿಗೆ 2,960 ಕೋಟಿ ರೂ ಮೊತ್ತದ ಒಪ್ಪಂದ ಮಾಡಿಕೊಂಡಿದೆ.

ಆರ್ಮೇನಿಯಾಗೆ ಮೇಡ್ ಇನ್ ಇಂಡಿಯಾ ಗನ್​ಗಳ ರಫ್ತು; MRSAM ಕ್ಷಿಪಣಿಗಳಿಗೆ ಆರ್ಡರ್ ಕೊಟ್ಟ ಭಾರತೀಯ ನೌಕಾಪಡೆ
ಆರ್ಟಿಲರಿ ಗನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 17, 2025 | 6:58 PM

Share

ನವದೆಹಲಿ, ಜನವರಿ 17: ಭಾರತದಲ್ಲಿ ತಯಾರಿಸಲಾಗುತ್ತಿರುವ ಆರ್ಟಿಲರಿ ಗನ್ ಸಿಸ್ಟಂ ಅನ್ನು ಆರ್ಮೇನಿಯಾ ದೇಶ ಆಮದು ಮಾಡಿಕೊಳ್ಳುತ್ತಿದೆ. ಭಾರತದ ಎಲ್ ಅಂಡ್ ಟಿ ಹಾಗೂ ಫ್ರಾನ್ಸ್​ನ ಕೆಎನ್​ಡಿಎಸ್ ಸಂಸ್ಥೆಗಳು ಜಂಟಿಯಾಗಿ ಭಾರತದಲ್ಲಿ ಈ ಗನ್​ಗಳನ್ನು ತಯಾರಿಸುತ್ತಿವೆ. 52-ಕ್ಯಾಬರ್​ನ ಈ ಗನ್ ಸಿಸ್ಟಂ ಕ್ಲಿಷ್ಟ ವಾತಾವರಣಗಳಲ್ಲಿ ಕಾರ್ಯನಿರ್ವಹಿಸಬಲ್ಲುದು. ಭಾರತೀಯ ಸೇನೆ ಖುದ್ದಾಗಿ ಈ ಗನ್​ಗಳನ್ನು ಪರೀಕ್ಷಿಸಿದೆ. ಎಲ್ಲಾ ರೀತಿಯ ಗುಣಮಟ್ಟ ಪರೀಕ್ಷೆಗಳಲ್ಲಿ ಈ ಗನ್ ತೇರ್ಗಡೆಯಾಗಿದೆ.

ಫ್ರೆಂಚ್ ಕಂಪನಿಯ ಸಹಯೋಗದೊಂದಿಗೆ ಎಲ್ ಅಂಡ್ ಟಿ ತಯಾರಿಸಿರುವ ಈ ಗನ್​ನ ಆಕ್ಸಿಲಿಯರಿ ಪವರ್ ಯುನಿಟ್, ಕಂಟ್ರೋಲ್ ಪೆನಲ್, ರೋಲಿಂಗ್ ಗೇರ್ ಅಸೆಂಬ್ಲಿ ಇತ್ಯಾದಿ ಸಬ್​ಸಿಸ್ಟಂಗಳೆಲ್ಲವನ್ನೂ ಭಾರತದಲ್ಲೇ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವುದು ವಿಶೇಷ.

ಇದನ್ನೂ ಓದಿ: H-1B Visa: ಅಮೆರಿಕದ ಎಚ್1ಬಿ ವೀಸಾ ಸ್ಕೀಮ್; ಇಂದಿನಿಂದ ಹೊಸ ನಿಯಮಗಳು ಜಾರಿ

ಪಕ್ಕದ ಅಜರ್​ಬೈಜಾನ್​ನೊಂದಿಗೆ ತಿಕ್ಕಾಟದಲ್ಲಿರುವ ಆರ್ಮೇನಿಯಾ ದೇಶ ಭಾರತದಿಂದ ಸಾಕಷ್ಟು ಮಿಲಿಟರಿ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಈಗಾಗಲೇ ಮಲ್ಟಿ ಬ್ಯಾರಲ್ ರಾಕೆಟ್ ಲಾಂಚರ್​ಗಳು, ಆರ್ಟಿಲರಿ ಗನ್​ಗಳು, ಸಾಕಷ್ಟು ಮದ್ದುಗುಂಡುಗಳು ಮೊದಲಾದವನ್ನು ಭಾರತದಿಂದ ಆರ್ಮೇನಿಯಾಗೆ ಸರಬರಾಜು ಮಾಡಲಾಗಿದೆ. ಪಿನಾಕಾ ರಾಕೆಟ್ ಲಾಂಚರ್ ಅನ್ನು ಈಗಾಗಲೇ ಆರ್ಮೇನಿಯಾ ಸೇನೆಯಲ್ಲಿ ನಿಯೋಜಿಸಲಾಗಿದೆ. ಆರ್ಟಿಲರಿ ಗನ್ ಸಿಸ್ಟಂಗಳೂ ಕೂಡ ಅಳವಡಿಕೆ ಆಗಿವೆ.

MRSAM ಕ್ಷಿಪಣಿಗಳಿಗೆ 2,960 ಕೋಟಿ ರೂ ಮೊತ್ತದ ಆರ್ಡರ್ ಕೊಟ್ಟ ಭಾರತೀಯ ನೌಕಾ ಪಡೆ

ಭಾರತದ ನೌಕಾ ಪಡೆ ತನ್ನ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮಧ್ಯಮ ಶ್ರೇಣಿ ಸರ್ಫೇಸ್ ಟು ಏರ್ ಮಿಸೈಲ್​ಗಳನ್ನು ಪಡೆಯಲು ನಿಶ್ಚಯಿಸಿದೆ. ಈ ಸಂಬಂಧ ಭಾರತ್ ಡೈನಾಮಿಕ್ಸ್ ಲಿ ಎಂಬ ಕಂಪನಿಯೊಂದಿಗೆ 2,960 ಕೋಟಿ ರೂ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದೆ.

ಇದನ್ನೂ ಓದಿ: ಹತ್ತಿ ಬೆಳೆಗಾರರಿಗೆ ಡ್ರಿಪ್ ಇರಿಗೇಶನ್ ಸಿಸ್ಟಂ; ಬಜೆಟ್​ನಲ್ಲಿ 500 ಕೋಟಿ ರೂ ನೀಡಲು ಒತ್ತಾಯ

MRSAM ಕ್ಷಿಪಣಿಗಳು ನೌಕಾಪಡೆಯ ಬತ್ತಳಿಕೆಯಲ್ಲಿ ಪ್ರಬಲ ಅಸ್ತ್ರಗಳೆನಿಸಲಿವೆ. ನೆಲದಿಂದ ಆಗಸಕ್ಕೆ ಚಿಮ್ಮಿ ಹೋಗುವ ಈ ಕ್ಷಿಪಣಿಗಳು (MRSAM) ಶತ್ರುಗಳ ಫೈಟರ್ ಜೆಟ್​ಗಳು, ಕ್ಷಿಪಣಿಗಳು ಮತ್ತು ಡ್ರೋನ್​ಗಳ ದಾಳಿಗಳನ್ನು ಎದುರಿಸಲು ಸಮರ್ಥವಾಗಿವೆ. ಮುಂಬರುವ ದಿನಗಳಲ್ಲಿ ಇಂಥ ಕ್ಷಿಪಣಿಗಳ ಬಳಕೆಯನ್ನು ಭಾರತೀಯ ನೌಕಾ ಪಡೆ ಹೆಚ್ಚಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!