AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Finance Commission: ನೀತಿ ಆಯೋಗ್ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ 16ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿ ನೇಮಕ

Arvind Panagariya Appointment: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾಗಳ ಮಧ್ಯೆ ತೆರಿಗೆ ಹಂಚಿಕೆ ಸೂತ್ರವನ್ನು ಹಣಕಾಸು ಆಯೋಗ ಶಿಫಾರಸು ಮಾಡುತ್ತದೆ. 16ನೇ ಹಣಕಾಸು ಆಯೋಗ ಮಾಡುವ ತೆರಿಗೆ ಹಂಚಿಕೆ ಶಿಫಾರಸುಗಳು 2026ರ ಏಪ್ರಿಲ್​ನಿಂದ 5 ವರ್ಷಗಳವರೆಗೆ ಜಾರಿಯಾಗುತ್ತವೆ.

Finance Commission: ನೀತಿ ಆಯೋಗ್ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ 16ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿ ನೇಮಕ
ಅರವಿಂದ್ ಪನಗರಿಯಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 31, 2023 | 4:53 PM

Share

ನವದೆಹಲಿ, ಡಿಸೆಂಬರ್ 31: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ (16th Finance commission chairman) ನೇಮಕ ಮಾಡಿದೆ. ಭಾರತೀಯ ಅಮೆರಿಕನ್ ಆರ್ಥಿಕ ತಜ್ಞರಾಗಿರುವ ಅರವಿಂದ್ ಪನಗರಿಯಾ 2015ರ ಜನವರಿಯಿಂದ 2017ರ ಆಗಸ್ಟ್ ತಿಂಗಳವರೆಗೆ ನೀತಿ ಆಯೋಗ್​ನಲ್ಲಿ ಸೇವೆ ಸಲ್ಲಿಸಿದ್ದರು. ಫೈನಾನ್ಸ್ ಕಮಿಷನ್ ಮುಖ್ಯಸ್ಥ ಸ್ಥಾನಕ್ಕೆ ಪನಗರಿಯಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೊರಡಿಸಿದ್ದ ಆದೇಶವನ್ನು ಹಣಕಾಸು ಇಲಾಖೆ ಇಂದು ಭಾನುವಾರ (ಡಿ. 31) ಅಧಿಸೂಚನೆ ಹೊರಡಿಸಿದೆ.

16ನೇ ಹಣಕಾಸು ಆಯೋಗದ ಕಾರ್ಯದರ್ಶಿ ಸ್ಥಾನಕ್ಕೆ ಋತ್ವಿಕ್ ರಂಜನಮ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಪಾಂಡೆ ಅವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಇನ್ನು, ಆಯೋಗದ ಇತರ ಸದಸ್ಯರ ಹೆಸರನ್ನು ಪ್ರತ್ಯೇಕವಾಗಿ ಘೋಷಿಸುವ ಸಾಧ್ಯತೆ ಇದೆ. ಆಯೋಗದ ಛೇರ್ಮನ್ ಅರವಿಂದ್ ಪನಗರಿಯಾ ರಾಜಸ್ಥಾನ ಮೂಲದವರಾಗಿದ್ದು, ಸದ್ಯ ಅಮೆರಿಕದ ವಿವಿಯೊಂದರಲ್ಲಿ ಇವರು ಪೊಲಿಟಿಕಲ್ ಎಕನಾಮಿಕ್ಸ್ ಬೋಧಿಸುತ್ತಿದ್ದಾರೆ.

ಇದನ್ನೂ ಓದಿ: Savings: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೆಚ್ಚು ಬಡ್ಡಿ, ಜೊತೆಗೆ ಅದರ ವಿವಿಧ ಪ್ರಯೋಜನಗಳೇನು ತಿಳಿಯಿರಿ…

ಹಣಕಾಸು ಆಯೋಗದ ಜವಾಬ್ದಾರಿ ಏನಿರಲಿದೆ?

ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತೆರಿಗೆ ಆದಾಯದ ಹಂಚಿಕೆಗೆ ಸೂತ್ರ ರೂಪಿಸುವುದು ಹಣಕಾಸು ಆಯೋಗದ ಜವಾಬ್ದಾರಿ. ಐದು ವರ್ಷಕ್ಕೆಂದು ಆಯೋಗ ತೆರಿಗೆ ಹಂಚಿಕೆ ಸೂತ್ರಗಳನ್ನು ಶಿಫಾರಸು ಮಾಡುತ್ತದೆ. ಸರ್ಕಾರ ಈ ಶಿಫಾರಸುಗಳ ಆಧಾರದ ಮೇಲೆ ತೆರಿಗೆ ಹಂಚಿಕೆ ಮಾಡುತ್ತದೆ.

16ನೇ ಹಣಕಾಸು ಆಯೋಗ ಮಾಡುವ ಶಿಫಾರಸುಗಳು 2026ರ ಏಪ್ರಿಲ್​ನಿಂದ ಜಾರಿ ಆಗುತ್ತವೆ. ಈಗ ನೇಮಕ ಮಾಡಲಾಗಿರುವ ಈ ಆಯೋಗವು 2025ರ ಅಕ್ಟೋಬರ್ 31ರವರೆಗೆ ಮಾತ್ರ ಅಸ್ತಿತ್ವದಲ್ಲಿರುತ್ತದೆ. ಅಷ್ಟರೊಳಗೆ ಸರ್ಕಾರಕ್ಕೆ ತೆರಿಗೆ ಹಂಚಿಕೆಯ ಸೂತ್ರಗಳನ್ನು ಶಿಫಾರಸು ಮಾಡಬೇಕಾಗುತ್ತದೆ.

ಇದನ್ನೂ ಓದಿ: Year Ender 2023: ಹಿಂಡನ್ಬರ್ಗ್ ರಿಪೋರ್ಟ್​ನಿಂದ ಇಂಡಿಗೋವರೆಗೆ; 2023ರಲ್ಲಿ ಭಾರತೀಯ ಕಾರ್ಪೊರೇಟ್ ಲೋಕದ ಪ್ರಮುಖ ವಿದ್ಯಮಾನಗಳು

ಈಗ ಆಗುತ್ತಿರುವ ತೆರಿಗೆ ಹಂಚಿಕೆ ಸೂತ್ರವನ್ನು 15ನೇ ಹಣಕಾಸು ಆಯೋಗ ರೂಪಿಸಿತ್ತು. 2017ರ ನವೆಂಬರ್​ನಲ್ಲಿ ಈ ಆಯೋಗದ ರಚನೆಯಾಗಿತ್ತು. ಎನ್ ಕೆ ಸಿಂಗ್ ಮುಖ್ಯಸ್ಥರಾಗಿದ್ದರು. ಇದರ ವ್ಯಾಪ್ತಿಯನ್ನು ಐದು ವರ್ಷದ ಬದಲು ಆರು ವರ್ಷಕ್ಕೆ ಹೆಚ್ಚಿಸಲಾಗಿತ್ತು. 2025-26ರವರೆಗೆ ಇದರ ಶಿಫಾರಸುಗಳು ಜಾರಿಯಲ್ಲಿರುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!