AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIM Cards: ಒಬ್ಬರಿಗೆ ಹೆಚ್ಚು ಸಿಮ್ ಕಾರ್ಡ್​ಗಳು ಸಿಗದು; ಈ ವರ್ಷ ಜಾರಿಗೆ ಬರುವ ಟೆಲಿಕಾಂ ಸುಧಾರಣೆಗಳ ಮುಖ್ಯಾಂಶಗಳನ್ನು ತಿಳಿದಿರಿ

Telecom Reforms in India: ಇನ್ನೆರಡು ತಿಂಗಳಲ್ಲಿ ಟೆಲಿಕಾಂ ವಲಯದ ಸುಧಾರಣೆಗಳು ಜಾರಿಗೆ ಬರುತ್ತವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದರಲ್ಲಿ ಒಂದು ಐಡಿ ಗುರುತಿಗೆ ಕೊಡಲಾಗುವ ಸಿಮ್ ಕಾರ್ಡ್ ಸಂಖ್ಯೆಯನ್ನು 9ಕ್ಕಿಂತ ಕಡಿಮೆಗೆ ಇಳಿಸಿವುದೂ ಒಂದು.

SIM Cards: ಒಬ್ಬರಿಗೆ ಹೆಚ್ಚು ಸಿಮ್ ಕಾರ್ಡ್​ಗಳು ಸಿಗದು; ಈ ವರ್ಷ ಜಾರಿಗೆ ಬರುವ ಟೆಲಿಕಾಂ ಸುಧಾರಣೆಗಳ ಮುಖ್ಯಾಂಶಗಳನ್ನು ತಿಳಿದಿರಿ
ಟೆಲಿಕಾಂ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 06, 2023 | 4:44 PM

ನವದೆಹಲಿ: ಕೇಂದ್ರ ಸರ್ಕಾರ 2021ರಲ್ಲಿ ಪ್ರಸ್ತಾಪಿಸಿದ್ದ ಟೆಲಿಕಾಂ ವಲಯದ ಸುಧಾರಣಾ ಕ್ರಮಗಳು ಈ ವರ್ಷದೊಳಗೆ ಜಾರಿಯಾಗುವ ಸಾಧ್ಯತೆ ಇದೆ. ಮೊನ್ನೆಯಷ್ಟೇ ಕೇಂದ್ರ ಟೆಲಿಕಾಂ ಸಚಿವ ಎ ವೈಷ್ಣವ್ (Union Minister Ashwini Vaishnaw) ಅವರು ಈ ಬಗ್ಗೆ ಮಾತನಾಡಿ ಮುಂದಿನ ಕೆಲ ತಿಂಗಳಲ್ಲಿ ಟೆಲಕಾಂ ಸುಧಾರಣೆಗಳನ್ನು ಅಳವಡಿಸಲಾಗುವುದು ಎಂದಿದ್ದ್ದಾರೆ. ಬಳಕೆದಾರರ ರಕ್ಷಣೆಗೆ ಆದ್ಯತೆ ಕೊಟ್ಟು ಸುಧಾರಣಾ ಕ್ರಮಗಳನ್ನು ರೂಪಿಸಲಾಗಿದೆ ಎಂದು ಹೇಳಿರುವ ಅಶ್ವಿನಿ ವೈಷ್ಣವ್, ಒಂದು ಗುರುತಿನ ಚೀಟಿಗೆ ನೀಡಲಾಗುವ ಸಿಮ್ ಕಾರ್ಡ್​ಗಳ ಸಂಖ್ಯೆಯ ಮಿತಿ ಇಳಿಸುವುದೂ ಈ ಸುಧಾರಣಾ ಕ್ರಮಗಳಲ್ಲಿ ಒಂದೆಂದು ಹೇಳಿದ್ದಾರೆ.

ಇದೀಗ ಒಬ್ಬ ವ್ಯಕ್ತಿಯ ಆಧಾರ್ ಕಾರ್ಡ್ ಹೆಸರಿನಲ್ಲಿ 9 ಸಿಮ್ ಕಾರ್ಡ್​ಗಳನ್ನು ಪಡೆಯಲು ಅವಕಾಶ ಇದೆ. ಮುಂದೆ ಜಾರಿಗೆ ಬರಲಿರುವ ಸುಧಾರಣಾ ಕ್ರಮದಲ್ಲಿ ಈ ಅವಕಾಶದಲ್ಲಿ ಬದಲಾವಣೆ ಮಾಡಲಾಗಲಿದೆ. ಒಂದು ಆಧಾರ್ ಗುರುತಿನ ಚೀಟಿಗೆ ನೀಡಲಾಗುವ ಸಿಮ್ ಕಾರ್ಡ್​ಗಳ ಸಂಖ್ಯೆಯನ್ನು 9ಕ್ಕಿಂತ ಕಡಿಮೆಗೆ ಇಳಿಸುವ ಪ್ರಸ್ತಾಪ ಇದೆ. ಆದರೆ, ಎಷ್ಟು ಸಿಮ್ ಕಾರ್ಡ್​ಗಳನ್ನು ನೀಡಲಾಗುವುದು ಎಂಬುದನ್ನು ತಿಳಿಸಿಲ್ಲ. ಆದರೆ ಭದ್ರತೆ ದೃಷ್ಟಿಯಿಂದ ಸಿಮ್ ಕಾರ್ಡ್ ಸಂಖ್ಯೆ ಕಡಿಮೆಗೊಳಿಸುವ ಆಲೋಚನೆ ಸರ್ಕಾರದ್ದಾಗಿದೆ.

ಇದನ್ನೂ ಓದಿVishnaw: ಒಂದೆರಡು ತಿಂಗಳಲ್ಲಿ ಟೆಲಿಕಾಂ ಸುಧಾರಣೆಗಳು ಜಾರಿ; ಬಳಕೆದಾರ ರಕ್ಷಣೆಗೆ ಆದ್ಯತೆ- ಸಚಿವ ವೈಷ್ಣವ್

ಎರಡು ತಿಂಗಳ ಹಿಂದೆ (ಮೇ 2023) ಕೇಂದ್ರದ ದೂರಸಂಪರ್ಕ ಇಲಾಖೆ ಸಂಚಾರ್ ಸಾಥಿ (Sanchar Sathi Portal) ಹೆಸರಿನ ಪೋರ್ಟಲ್​ವೊಂದನ್ನು ಬಿಡುಗಡೆ ಮಾಡಿತ್ತು. ಆಧಾರ್ ಗುರುತಿನ ಚೀಟಿ ಜೊತೆ ಮೊಬೈಲ್ ನಂಬರ್​ಗಳು ಜೋಡಿತವಾಗಿವೆಯಾ ಎಂಬುದನ್ನು ಈ ಪೋರ್ಟಲ್ ಮೂಲಕ ಪರಿಶೀಲಿಸಬಹುದು. ಹಾಗೆಯೇ, ಮೊಬೈಲ್ ಫೋನ್ ಕಳೆದುಹೋದರೆ ಈ ಪೋರ್ಟಲ್ ಮೂಲಕ ಟ್ರ್ಯಾಕ್ ಮಾಡಲು ಸಾಧ್ಯ. ಇಂಥ ಕೆಲ ವಿಧಾನಾತ್ಮಕ ಹಾಗೂ ರಚನಾತ್ಮಕ ಸುಧಾರಣೆಗಳನ್ನು ಇಲಾಖೆ ಕೈಗೊಂಡಿದೆ.

ಟೆಲಿಕಾಂ ವಲಯದಲ್ಲಿನ ಇತರ ಪ್ರಮುಖ ಸುಧಾರಣಾ ಕ್ರಮಗಳು

  • ಎಜಿಆರ್ ಹಂಚಿಕೆ ನೀತಿ
  • ಬ್ಯಾಂಕ್ ಗ್ಯಾರಂಟಿ (ಬಿಜಿ) ಹಂಚಿಕೆ ನೀತಿ
  • ಬಡ್ಡಿ ದರ ನೀತಿ ಮತ್ತು ದಂಡವಿಧಿಸುವಿಕೆ ಕ್ರಮ ತೆಗೆದುಹಾಕುವುದು
  • ಸ್ಪೆಕ್ಟ್ರಂ ಹರಾಜಿಗೆ ಬ್ಯಾಂಕ್ ಗ್ಯಾರಂಟಿ ಒದಗಿಸುವ ನಿಯಮ ಕೈಬಿಡುವುದು
  • ಮುಂದಿನ ಹರಾಜು ವೇಳೆ ಸ್ಪೆಕ್ಟ್ರಂ ಅವಧಿಯನ್ನು 20ರಿಂದ 30 ವರ್ಷಕ್ಕೆ ಹೆಚ್ಚಿಸುವುದು
  • 10 ವರ್ಷದ ಬಳಿಕ ಸ್ಪೆಕ್ಟ್ರಂ ವಾಪಸ್ ಮಾಡುವ ಅನುಮತಿ ನೀಡುವುದು
  • ಸ್ಪೆಕ್ಟ್ರಂ ಬಳಕೆ ಶುಲ್ಕ (ಎಸ್​ಯುಸಿ) ಒದಗಿಸಬೇಕೆನ್ನುವ ನಿಯಮ ಕೈಬಿಡುವುದು
  • ಕೆಲ ಷರುತ್ತುಗಳಿಗೆ ಅನ್ವಯವಾಗಿ ಟೆಲಿಕಾಂ ವಲಯಕ್ಕೆ ನೂರು ಪ್ರತಿಶತದಷ್ಟು ಎಫ್​ಡಿಐ ಹೂಡಿಕೆಗೆ ಅನುಮತಿ
  • ಸ್ಪೆಕ್ಟ್ರಂ ಹರಾಜುಗಳಿಗೆ ನಿಗದಿತ ಸಮಯ
  • ಸೆಲ್ಫ್ ಕೆವೈಸಿಗೆ ಅನುಮತಿ
  • ಇಕೆವೈಸಿ ಸಲ್ಲಿಕೆಗೆ ಒಂದು ರೂ ದರ
  • ಪ್ರೀಪೇಡ್ ಮತ್ತು ಪೋಸ್ಟ್ ಪೇಡ್ ಸೇವೆ ಅದಲುಬದಲು ಮಾಡಿಕೊಂಡರೆ ಹೊಸದಾಗಿ ಕೆವೈಸಿ ಸಲ್ಲಿಸುವ ಅವಶ್ಯಕತೆ ಇಲ್ಲ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!