AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿದಂಬರಂ, ರಾಜನ್​ರಿಗೆ ಮ್ಯಾನುಫ್ಯಾಕ್ಚರಿಂಗ್ ಪಾಠ ಬೋಧಿಸಿ, ಟ್ರೋಲ್ ಮಾಡಿದ ಸಚಿವ ಎ ವೈಷ್ಣವ್

Ashwini Vaishnaw Trolls Raghuram Rajan: ಭಾರತದ ಮ್ಯಾನುಫ್ಯಾಕ್ಚರಿಂಗ್ ಯೋಜನೆ ಬಗ್ಗೆ ಟೀಕಿಸುವ ರಘುರಾಮ್ ರಾಜನ್, ಪಿ ಚಿದಂಬರಂಗೆ ಸಚಿವ ಎ ವೈಷ್ಣವ್ ತಿರುಗೇಟು ನೀಡಿದ್ದಾರೆ. ಮ್ಯಾನುಫ್ಯಾಕ್ಚರಿಂಗ್ ಮತ್ತು ಅಸೆಂಬ್ಲಿಂಗ್ ಮಧ್ಯೆ ಏನು ವ್ಯತ್ಯಾಸ ಎಂಬುದನ್ನು ಅವರಿಬ್ಬರು ಮೊದಲು ತಿಳಿದುಕೊಳ್ಳಲಿ ಎಂದಿದ್ದಾರೆ ವೈಷ್ಣವ್. ಎಎನ್​ಐ ಸಂದರ್ಶನದಲ್ಲಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಹೇಗೆ ನಡೆಯುತ್ತಿದೆ ಎಂದು ಸ್ಯಾಂಪಲ್ ಸಹಿತ ಉದಾಹರಣೆ ನೀಡಿದ್ದಾರೆ.

ಚಿದಂಬರಂ, ರಾಜನ್​ರಿಗೆ ಮ್ಯಾನುಫ್ಯಾಕ್ಚರಿಂಗ್ ಪಾಠ ಬೋಧಿಸಿ, ಟ್ರೋಲ್ ಮಾಡಿದ ಸಚಿವ ಎ ವೈಷ್ಣವ್
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 07, 2023 | 6:22 PM

Share

ಮುಖ್ಯಾಂಶಗಳು

  • ಭಾರತದ ಮ್ಯಾನುಫ್ಯಾಕ್ಚರಿಂಗ್ ಯೋಜನೆ ಬಗ್ಗೆ ಟೀಕಿಸುವ ರಘುರಾಮ್ ರಾಜನ್, ಪಿ ಚಿದಂಬರಂಗೆ ಸಚಿವ ಎ ವೈಷ್ಣವ್ ತಿರುಗೇಟು ನೀಡಿದ್ದಾರೆ.
  • ಮ್ಯಾನುಫ್ಯಾಕ್ಚರಿಂಗ್ ಮತ್ತು ಅಸೆಂಬ್ಲಿಂಗ್ ಮಧ್ಯೆ ಏನು ವ್ಯತ್ಯಾಸ ಎಂಬುದನ್ನು ಅವರಿಬ್ಬರು ಮೊದಲು ತಿಳಿದುಕೊಳ್ಳಲಿ ಎಂದಿದ್ದಾರೆ ವೈಷ್ಣವ್.
  • ಎಎನ್​ಐ ಸಂದರ್ಶನದಲ್ಲಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಹೇಗೆ ನಡೆಯುತ್ತಿದೆ ಎಂದು ಸ್ಯಾಂಪಲ್ ಸಹಿತ ಉದಾಹರಣೆ ನೀಡಿದ್ದಾರೆ.

ನವದೆಹಲಿ, ಡಿಸೆಂಬರ್ 7: ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರಕ್ಕೆ ಉತ್ತೇಜನ ನೀಡುವ ಕೇಂದ್ರ ಸರ್ಕಾರದ ಪ್ರಯತ್ನವನ್ನು ಟೀಕಿಸುತ್ತಿರುವ ಮಾಜಿ ಸಚಿವ ಪಿ ಚಿದಂಬರಂ ಮತ್ತು ಮಾಜಿ ಆರ್​ಬಿಐ ಗವರ್ನರ್ ರಘುರಾಮ್ ರಾಜನ್ ಅವರನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಟ್ರೋಲ್ ಮಾಡಿದ್ದಾರೆ. ಚಿದಂಬರಂ ಮತ್ತು ರಘುರಾಮ್ ರಾಜನ್ ಅವರಿಗೆ ಮ್ಯಾನುಫ್ಯಾಕ್ಚರಿಂಗ್ ಬಗ್ಗೆ ಅಶ್ವಿನಿ ವೈಷ್ಣವ್ ಪಾಠ ಮಾಡಿರುವ ವಿಡಿಯೋವನ್ನು ಎಎನ್​ಐ ಬಿಡುಗಡೆ ಮಾಡಿದೆ. ಎಎನ್​ಐ ಸುದ್ದಿಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ವೈಷ್ಣವ್ ಅವರು ಅವರಿಬ್ಬರನ್ನು ಟ್ರೋಲ್ ಮಾಡಿದ್ದಾರೆ.

‘ಚಿದಂಬರಂ ಮತ್ತು ರಘುರಾಮ್ ರಾಜನ್ ಅವರು ಮ್ಯಾನುಫ್ಯಾಕ್ಚರಿಂಗ್ ಮತ್ತು ಅಸೆಂಬ್ಲಿಂಗ್ ಮಧ್ಯೆ ವ್ಯತ್ಯಾಸ ತಿಳಿಯಬೇಕು. ಭಾರತದ ಯುವಕ ಯುವತಿಯರು ಪ್ರಿಸಿಶನ್ ಮ್ಯಾನುಫ್ಯಾಕ್ಚರಿಂಗ್ ಮಾಡುತ್ತಿದ್ದಾರೆ. ಇದಕ್ಕೆ ಹೆಮ್ಮ ಪಡಬೇಕು,’ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಆ್ಯಪಲ್ ಐಫೋನ್​ನ ಹೊರಕವಚ ತಯಾರಿಸಲು ಉಪಯೋಗಿಸುವ ಮೆಷೀನ್​ನಿಂದಲೇ ತಯಾರಿಸಲಾಗಿರುವ ಉತ್ಪನ್ನವೊಂದನ್ನು ಅವರು ಆ ವಿಡಿಯೋದಲ್ಲಿ ತೋರಿಸಿ ವಿವರಣೆ ನೀಡಿದ್ದಾರೆ. ಇದು ಮ್ಯಾನುಫ್ಯಾಕ್ಚರಿಂಗ್ ಅಲ್ಲದಿದ್ದರೆ ಮತ್ತೇನು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾರ್ಬನ್ ಟ್ಯಾಕ್ಸ್ ಹೇರಿಕೆ ಕ್ರಮ ನೈತಿಕವಲ್ಲ; ಶ್ರೀಮಂತ ದೇಶಗಳ ವಿರುದ್ಧ ಸಚಿವೆ ನಿರ್ಮಲಾ ಸೀತಾರಾಮನ್ ಕಿಡಿ

ಕೇಂದ್ರ ಎಲೆಕ್ಟ್ರಾನಿಕ್ ಮತ್ತು ಐಟಿ ಖಾತೆ, ರೈಲ್ವೆ ಮತ್ತು ಕಮ್ಯೂನಿಕೇಶನ್ಸ್ ಖಾತೆ ಸಚಿವರಾಗಿರುವ ಡಾ. ಅಶ್ವಿನಿ ವೈಷ್ಣವ್ ಅವರು ಈ ಹಿಂದೆಯೂ ಸಾಕಷ್ಟು ಬಾರಿ ಪಿ ಚಿದಂಬರಂ ಮತ್ತು ರಘುರಾಮ್ ರಾಜನ್ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಿದೆ.

ಭಾರತ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಹೆಚ್ಚು ಮುಂದುವರಿಯಲಾಗದು. ಪಿಎಲ್​ಐ ಸ್ಕೀಮ್​ನಲ್ಲಿ ನಡೆಯುತ್ತಿರುವುದು ಮ್ಯಾನುಫ್ಯಾಕ್ಚರಿಂಗ್ ಅಲ್ಲ, ಕೇವಲ ಅಸೆಂಬ್ಲಿಂಗ್ ಮಾತ್ರ. ಐಫೋನ್​ಗಳನ್ನು ಭಾರತದಲ್ಲಿ ಅಸೆಂಬ್ಲಿಂಗ್ ಮಾಡಲು ಸಬ್ಸಿಡಿ ಕೊಡಲಾಗುತ್ತಿದೆ. ಭಾರತ ಚೀನಾದಂತೆ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಪೈಪೋಟಿಗೆ ಇಳಿಯುವ ಬದಲು ಸರ್ವಿಸ್ ಸೆಕ್ಟರ್​ನತ್ತ ಗಮನ ಹರಿಸಬೇಕು ಎಂದು ರಘುರಾಮ್ ರಾಜನ್ ಸಾಕಷ್ಟು ಬಾರಿ ಹೇಳುತ್ತಲೇ ಬಂದಿದ್ದಾರೆ. ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಕೂಡ ಭಾರತದ ಪಿಎಲ್​ಐ ಸ್ಕೀಮ್ ವಿರುದ್ಧ ಸಾಕಷ್ಟು ಬಾರಿ ಮಾತನಾಡಿದ್ದಾರೆ.

ಇದನ್ನೂ ಓದಿ: Starbucks: ಒಂದು ಟ್ವೀಟ್ ಕಾರಣಕ್ಕೆ ಲಕ್ಷ ಕೋಟಿ ರೂ ನಷ್ಟ ಮಾಡಿಕೊಂಡ ಸ್ಟಾರ್​ಬಕ್ಸ್

ಮೊನ್ನೆಯಷ್ಟೇ ಟಿವಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಸಚಿವ ಎ ವೈಷ್ಣವ್ ಅವರು ರಘುರಾಮ್ ರಾಜನ್ ಅವರನ್ನು ವ್ಯಂಗ್ಯ ಮಾಡಿದ್ದರು. ‘ರಘುರಾಮ್ ರಾಜನ್ ಅವರಿಗೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಅಸೆಂಬ್ಲಿಂಗ್ ಬಗ್ಗೆ ವ್ಯತ್ಯಾಸ ಗೊತ್ತಿದೆ. ಆದರೂ ಕೂಡ ಗೊತ್ತಿಲ್ಲದವರಂತೆ ಮಾಡನಾಡಿ ತಮ್ಮ ಆಷಾಡಭೂತಿತನ ತೋರುತ್ತಿದ್ದಾರೆ,’ ಎಂದು ವೈಷ್ಣವ್ ಟೀಕಿಸಿದ್ದರು.

‘ರಘುರಾಮ್ ರಾಜನ್ ಅವರ ಸಮಸ್ಯೆ ಏನೆಂದರೆ ಅವರು ತಮ್ಮನ್ನು ತಾವು ಮುಂದಿನ ಹಣಕಾಸು ಸಚಿವ ಎಂದು ಭಾವಿಸಿಕೊಂಡಿದ್ದಾರೆ. ಅವರು ಪೂರ್ಣವಾಗಿ ರಾಜಕೀಯಕ್ಕೆ ಇಳಿಯದೆಯೇ ರಾಜಕಾರಣಿಯಂತೆ ಮಾತನಾಡುತ್ತಿದ್ದಾರೆ’ ಎಂದು ಟ್ರೋಲ್ ಮಾಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:14 pm, Thu, 7 December 23

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ