AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

EPFO Clarification: ವೇತನ ರಹಿತ ರಜೆಯಲ್ಲಿದ್ದಾಗ ಮೃತಪಟ್ಟರೂ ಡೆತ್ ಬೆನಿಫಿಟ್​ ಪಡೆಯಬಹುದು; ಇಪಿಎಫ್​ಒ

ಉದ್ಯೋಗಿಯು ವೇತನ ರಹಿತ ರಜೆಯಲ್ಲಿದ್ದ ಸಂದರ್ಭದಲ್ಲಿ ಮೃತಪಟ್ಟರೂ ಅವರು ನಾಮನಿರ್ದೇಶನ ಮಾಡಿದ ವ್ಯಕ್ತಿ ಡೆತ್ ಬೆನಿಫಿಟ್​ಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಸ್ಪಷ್ಟಪಡಿಸಿದೆ.

EPFO Clarification: ವೇತನ ರಹಿತ ರಜೆಯಲ್ಲಿದ್ದಾಗ ಮೃತಪಟ್ಟರೂ ಡೆತ್ ಬೆನಿಫಿಟ್​ ಪಡೆಯಬಹುದು; ಇಪಿಎಫ್​ಒ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 21, 2022 | 3:58 PM

Share

ನವದೆಹಲಿ: ಉದ್ಯೋಗಿಯು ವೇತನ ರಹಿತ ರಜೆಯಲ್ಲಿದ್ದ ಸಂದರ್ಭದಲ್ಲಿ ಮೃತಪಟ್ಟರೂ ಭವಿಷ್ಯ ನಿಧಿ ಖಾತೆದಾರರಾಗಿದ್ದರೆ (PF) ಅವರು ನಾಮನಿರ್ದೇಶನ ಮಾಡಿದ ವ್ಯಕ್ತಿ ಡೆತ್ ಬೆನಿಫಿಟ್​ಗಳನ್ನು (ಉದ್ಯೋಗಿಗಳ ಠೇವಣಿ ಸಂಬಂಧಿತ ವಿಮೆ ಅಥವಾ EDLI) ಪಡೆಯಲು ಅರ್ಹರಾಗಿರುತ್ತಾರೆ ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO) ಸ್ಪಷ್ಟಪಡಿಸಿದೆ. ಉದ್ಯೋಗಿಗಳು ವೇತನ ರಹಿತ ರಜೆಯಲ್ಲಿದ್ದಾರೆ ಹಾಗೂ ಅವರಿಂದ ಭವಿಷ್ಯ ನಿಧಿ ಖಾತೆಗೆ ಹಣ ಸಂದಾಯವಾಗುತ್ತಿಲ್ಲ ಎಂದಾದರೂ ಡೆತ್ ಬೆನಿಫಿಟ್​ಗಳನ್ನು ನಿರಾಕರಿಸುವಂತಿಲ್ಲ ಎಂದು ಇಪಿಎಫ್​ಒ ಹೇಳಿದೆ.

ಈ ವಿಚಾರವಾಗಿ ಇಪಿಎಫ್​ಒ ಅಧಿಸೂಚನೆ ಹೊರಡಿಸಿದೆ. ಉದ್ಯೋಗಿಯು ವೇತನ ರಹಿತ ಅಥವಾ ಇತರ ಯಾವುದೇ ಕಾರಣದ ರಜೆಯಲ್ಲಿದ್ದರೆ, ಆ ಸಂದರ್ಭದಲ್ಲಿ ಉದ್ಯೋಗದಾತರಿಂದ ಭವಿಷ್ಯ ನಿಧಿ ಖಾತೆಗೆ ಹಣ ಸಂದಾಯವಾಗದೇ ಇದ್ದರೆ ಮತ್ತು ಈ ಅವಧಿಯಲ್ಲಿ ಅವರು ಮೃತಪಟ್ಟರೆ ಖಾತರಿ ನೀಡಲಾದ ಭರವಸೆಗಳನ್ನು ನಿರಾಕರಿಸುವಂತಿಲ್ಲ. ಮರಣ ಹೊಂದಿದ ಸಂದರ್ಭದಲ್ಲಿ ಅವರು ಉದ್ಯೋಗಿಯಾಗಿಯೇ ಇದ್ದರೆ ಮತ್ತು ಇತರ ನಿಗದಿತ ಷರತ್ತುಗಳನ್ನೆಲ್ಲ ಪೂರೈಸಿದ್ದರೆ ಅವರು ನಾಮನಿರ್ದೇಶನ ಮಾಡಿದವರಿಗೆ ಸವಲತ್ತುಗಳನ್ನು ನೀಡಬೇಕು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: EPF: ಇಪಿಎಫ್​ಒನಿಂದ ಉದ್ಯೋಗದಾತರ ಇಪಿಎಫ್​ ಟ್ರಸ್ಟ್‌ಗೆ ಇಪಿಎಫ್​ ಖಾತೆ ವರ್ಗಾವಣೆ ಹೇಗೆ? ಇಲ್ಲಿದೆ ಎಲ್ಲ ಮಾಹಿತಿ

ಇದನ್ನೂ ಓದಿ
Image
Petrol Price Today: ಇಳಿಕೆಯಾಯಿತಾ ಪೆಟ್ರೋಲ್ ಬೆಲೆ?; ನಿಮ್ಮ ನಗರಗಳಲ್ಲಿ ಇಂದಿನ ಡೀಸೆಲ್ ದರ ಹೀಗಿದೆ
Image
Gold Price Today: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ, ಪ್ರಮುಖ ನಗರಗಳ ಬೆಲೆ ಇಲ್ಲಿದೆ
Image
Health Insurance: ಆರೋಗ್ಯ ವಿಮೆ ಮಾಡಿಸುತ್ತಿದ್ದೀರಾ? ಅಸ್ತಿತ್ವದಲ್ಲಿರುವ ಕಾಯಿಲೆಗಳ ವಿವರ ನೀಡಲು ಮರೆಯಬೇಡಿ
Image
Amazon Great Indian Festival: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ ಸೇಲ್​, ಕೋಟ್ಯಧಿಪತಿಗಳಾದ 650 ಮಾರಾಟಗಾರರು

ಉದ್ಯೋಗಿಯು ಮೃತಪಟ್ಟ ಕೆಲವು ಪ್ರಕರಣಗಳಲ್ಲಿ, ಅವರಿಂದ ಪಿಎಫ್​ ಖಾತೆಗೆ ಹಣ ಸಂದಾಯವಾಗುತ್ತಿಲ್ಲ ಎಂದು ಆರೋಪಿಸಿ ಕಂಪನಿಗಳು ಮರಣಾನಂತರ ನೀಡಬೇಕಾದ ಸವಲತ್ತುಗಳನ್ನು ನೀಡಲು ನಿರಾಕರಿಸಿದ್ದವು. ಈ ಕುರಿತು ಹಲವು ದೂರುಗಳು ದಾಖಲಾಗಿದ್ದವು. ಹೀಗಾಗಿ ಇಪಿಎಫ್​ಒ ಸ್ಪಷ್ಟೀಕರಣ ನೀಡಿದೆ.

ಪಿಎಫ್ ಖಾತೆದಾರರು ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬದವರಿಗೆ ಕಿರುಕುಳ ನೀಡಬಾರದು. 7 ದಿನಗಳ ಒಳಗೆ ದೃಢೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಉದ್ಯೋಗಿಯು ಕರ್ತವ್ಯದಲ್ಲಿದ್ದೂ ಉದ್ಯೋಗದಾತರು ಬೇರೆಯೇ ಕಾರಣ ನೀಡಿದರೆ ಇದು ನಮಗೆ ಸ್ವೀಕಾರಾರ್ವಲ್ಲ. ಈ ವಿಚಾರವಾಗಿ ಕಚೇರಿಯಲ್ಲಿ ಪರಿಶೀಲನೆ ನಡೆಸಿ ದೃಢೀಕರಿಸಬೇಕು ಎಂದು ಇಪಿಎಫ್​ಒ ಅಧಿಸೂಚನೆ ಉಲ್ಲೇಖಿಸಿದೆ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಇತ್ತೀಚೆಗಷ್ಟೇ ತನ್ನ ಚಂದಾದಾರರಿಗೆ ಇ-ನಾಮನಿರ್ದೇಶನವನ್ನು ಕಡ್ಡಾಯಗೊಳಿಸಿತ್ತು. ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಪಡೆಯಲು ​​ಇ-ನಾಮನಿರ್ದೇಶನವನ್ನು ಸಲ್ಲಿಸಬೇಕು ಮತ್ತು ಉದ್ಯೋಗಿಗಳ ಠೇವಣಿ ಸಂಯೋಜಿತ ವಿಮಾ ಯೋಜನೆ ಅನ್ನು ಸಲ್ಲಿಸಬೇಕು ಎಂದು ಸೂಚಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ