ಸೆಪ್ಟೆಂಬರ್​ನಲ್ಲಿ 1.47 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹ: ಕರ್ನಾಟಕ ನಂಬರ್ 2

2022ರ ಸೆಪ್ಟೆಂಬರ್ ತಿಂಗಳ ಜಿಎಸ್​ಟಿ ಸಂಗ್ರಹದಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡ 26ರಷ್ಟು ಏರಿಕೆ ಕಂಡಿದೆ. ಇದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಸೆಪ್ಟೆಂಬರ್​ನಲ್ಲಿ 1.47 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹ: ಕರ್ನಾಟಕ ನಂಬರ್ 2
ಜಿಎಸ್​ಟಿ ಹೇರಿಕೆ ಖಂಡಿಸಿ ಯಶವಂತಪುರ ಎಪಿಎಂಸಿ ವರ್ತಕರು, ಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ (ಸಂಗ್ರಹ ಚಿತ್ರ)
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 02, 2022 | 4:46 PM

ನವದೆಹಲಿ: 2022ರ ಸೆಪ್ಟೆಂಬರ್ ತಿಂಗಳಲ್ಲಿ 1,47,686 ಕೋಟಿ ರೂಪಾಯಿ ಸರಕು ಮತ್ತು ಸೇವೆ ತೆರಿಗೆ (GST) ಸಂಗ್ರಹವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡ 26ರಷ್ಟು ಏರಿಕೆ ಕಂಡಿದೆ.

ಜಿಎಸ್​ಟಿ ಸಂಗ್ರಹ ಸತತ ಏಳನೇ ತಿಂಗಳು 1.40 ಲಕ್ಷ ಕೋಟಿ ರೂಪಾಯಿ ಗಡಿಯನ್ನು ದಾಟಿದೆ, ಒಟ್ಟು ಕೇಂದ್ರೀಯ ಜಿಎಸ್​ಟಿ 25,271 ಕೋಟಿ ರೂ. ಹಾಗೂ ರಾಜ್ಯ ಜಿಎಸ್​ಟಿ 31,813 ಕೋಟಿ ರೂ. ಮತ್ತು ಏಕೀಕೃತ ಜಿಎಸ್​ಟಿ 80,464 ಕೋಟಿ ರೂ. ಇದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Stock Market: ಅಕ್ಟೋಬರ್ ತಿಂಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದೊಡ್ಡ ಲಾಭ

2021ರ ಸೆಪ್ಟೆಂಬರ್‌ನಲ್ಲಿ 1,17,010 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. 2022ರ ಸೆಪ್ಟೆಂಬರ್ ತಿಂಗಳಲ್ಲಿ 1,47,686 ಕೋಟಿ ಸಂಗ್ರಹವಾಗಿದ್ದು.ಶೇಕಡ 26ರಷ್ಟು ಏರಿಕೆಯಾಗಿದೆ.

ಎರಡನೇ ಸ್ಥಾನದಲ್ಲಿ ಕರ್ನಾಟಕ

21,403 ಕೋಟಿ ರೂ. ಜಿಎಸ್‌ಟಿ ಸಂಗ್ರಹದ ಮೂಲಕ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದ್ರೆ, ಕರ್ನಾಟಕ 9,760 ಕೋಟಿ ರೂ. ಸಂಗ್ರಹದೊಂದಿಗೆ ಎರಡನೇ ಸ್ಥಾನದಲ್ಲಿದೆ. 2021 ಸೆಪ್ಟೆಂಬರ್ ತಿಂಗಳಲ್ಲಿ 7,783 ಕೋಟಿ ರೂ. ಸಂಗ್ರಹವಾಗಿತ್ತು.  ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಕರ್ನಾಟಕ ಶೇ. 25ರಷ್ಟು ಏರಿಕೆ ಸಾಧಿಸಿದೆ.

ಸೆಪ್ಟೆಂಬರ್‌ ಅಂಕಿ-ಅಂಶವು ತೆರಿಗೆ ಸಂಗ್ರಹದಲ್ಲಿ ಚೇತರಿಕೆ ಮತ್ತು ಜಿಎಸ್‌ಟಿ ನೆಟ್‌ವರ್ಕ್‌222 ಸ್ಥಿರವಾಗಿದೆ ಎಂಬುದನ್ನು ಸೂಚಿಸುತ್ತದೆ. ಸದ್ಯ ಸರಣಿ ಹಬ್ಬಗಳು ಇರುವುದರಿಂದ ಜಿಎಸ್‌ಟಿ ಸಂಗ್ರಹದಲ್ಲಿ ಈ ತಿಂಗಳು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಅಲ್ಲದೇ ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಕಾರಣದಿಂದ ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Daily Devotional: ದಿನ ನಿತ್ಯ ದೇವರನಾಮ ಜಪದ ಫಲ ತಿಳಿಯಿರಿ
Daily Devotional: ದಿನ ನಿತ್ಯ ದೇವರನಾಮ ಜಪದ ಫಲ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಇಂದು ಧನಯೋಗ, ಆರು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಧನಯೋಗ, ಆರು ಗ್ರಹಗಳ ಶುಭ ಫಲವಿದೆ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್