AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಬಿಆರ್​ವೈ ಸ್ಕೀಮ್ ಮೂಲಕ ನಿರೀಕ್ಷೆಮೀರಿ ಹೊಸ ಉದ್ಯೋಗಸೃಷ್ಟಿ; ಸರ್ಕಾರದಿಂದ ದತ್ತಾಂಶ ಬಿಡುಗಡೆ

Atmanirbhar Rozgar Yojana: ಹೊಸ ಉದ್ಯೋಗಸೃಷ್ಟಿಗೆ ಉತ್ತೇಜನ ನೀಡಲೆಂದು ರೂಪಿಸಲಾದ ಸ್ವಾವಲಂಬಿ ಭಾರತ ಉದ್ಯೋಗ ಯೋಜನೆ ಅಥವಾ ಆತ್ಮನಿರ್ಭರ್ ರೋಜಗಾರ್ ಯೋಜನೆ (ಎಬಿಆರ್​ವೈ) ತನ್ನ ಆರಂಭಿಕ ಗುರಿಯನ್ನು ಸುಲಭವಾಗಿ ದಾಟಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದೆ.

ಎಬಿಆರ್​ವೈ ಸ್ಕೀಮ್ ಮೂಲಕ ನಿರೀಕ್ಷೆಮೀರಿ ಹೊಸ ಉದ್ಯೋಗಸೃಷ್ಟಿ; ಸರ್ಕಾರದಿಂದ ದತ್ತಾಂಶ ಬಿಡುಗಡೆ
ಇಪಿಎಫ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 31, 2023 | 12:02 PM

Share

ನವದೆಹಲಿ, ಆಗಸ್ಟ್ 31: ಉದ್ಯೋಗಸೃಷ್ಟಿಗೆಂದು ಕೇಂದ್ರ ಸರ್ಕಾರ ರೂಪಿಸಿದ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆ (ABRY- Atmanirbhar Rozgar Yojana) ಶುಭಾರಂಭ ಮಾಡಿರುವುದು ತಿಳಿದುಬಂದಿದೆ. ಕೋವಿಡ್-19 ಸಾಂಕ್ರಾಮಿಕ ಸಂದರ್ಭದಿಂದ ಉದ್ಯೋಗ ವಾತಾವರಣದ ಚೇತರಿಕೆ ಮತ್ತು ಉದ್ಯೋಗಸೃಷ್ಟಿಸಲು ಅಂದುಕೊಂಡಿದ್ದ ಆರಂಭಿಕ ಗುರಿಯನ್ನು ಸುಲಭವಾಗಿ ಮುಟ್ಟಲಾಗಿರುವುದು ತಿಳಿದುಬಂದಿದೆ. ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಹೇಳಿಕೆ ಪ್ರಕಾರ ರೋಜಗಾರ್ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕವಾಗಿರುವ 2022ರ ಮಾರ್ಚ್​ವರೆಗೆ ಭಾರತದಾದ್ಯಂತ 71.8 ಲಕ್ಷ ಮಂದಿಗೆ ಉದ್ಯೋಗ ಕೊಡುವ ಗುರಿ ಇಡಲಾಗಿತ್ತು. ಆದರೆ, 2023ರ ಜುಲೈ 31ರೊಳಗೆ 75.8 ಲಕ್ಷ ಹೊಸ ಉದ್ಯೋಗಿಗಳ ನೊಂದಣಿ ಆಗಿದೆ ಎನ್ನಲಾಗಿದೆ.

60,44,155 ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡ 1,52,3890 ಸಂಸ್ಥೆಗಳು ಆತ್ಮನಿರ್ಭರ್ ರೋಜಗಾರ್ ಯೋಜನೆ ಅಡಿಯಲ್ಲಿ 9,669 ಕೋಟಿ ರೂನಷ್ಟು ಅನುಕೂಲಗಳನ್ನು ಪಡೆದುಕೊಂಡಿವೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮಾಹಿತಿ ನೀಡಿದೆ.

2020ರಲ್ಲಿ ಆರಂಭವಾದ ಎಬಿಆರ್​ವೈ ಸ್ಕೀಮ್​ನ ಮುಖ್ಯ ಉದ್ದೇಶವು ಹೊಸ ಉದ್ಯೋಗಾವಕಾಶಗಳಿಗೆ ಉತ್ತೇಜನ ನಿಡುವುದು. ಇಪಿಎಫ್​ಒಗೆ ನೊಂದಾಯಿತವಾಗಿರುವ ಸಂಸ್ಥೆಗಳ ಉದ್ಯೋಗದಾತರಿಗೆ ಹಣಕಾಸು ನೆರವನ್ನು ಈ ಯೋಜನೆ ಕೊಡುತ್ತದೆ.

ಇದನ್ನೂ ಓದಿ: ಅದಾನಿ ಕಂಪನಿಗಳ ವಿರುದ್ಧ ಮತ್ತೆ ವಂಚನೆ ಆರೋಪ; ಇದು ಸೋರೋಸ್ ಪಿತೂರಿ ಎಂದ ಅದಾನಿ ಗ್ರೂಪ್

ಉದಾಹರಣೆಗೆ, ಕೆಲಸ ಕಳೆದುಕೊಂಡಿರುವ ಮತ್ತು ನಿರುದ್ಯೋಗಿಗಳಾಗಿರುವ ವ್ಯಕ್ತಿಗಳಿಗೆ ಕೆಲಸ ಕೊಟ್ಟರೆ ಎಪಿಎಫ್ ಖಾತೆಗೆ ಕೊಡಲಾಗುವ ವೇತನದ ಶೇ. 24ರಷ್ಟು ಹಣವನ್ನು ಈ ಯೋಜನೆಯಿಂದಲೇ ಒದಗಿಸಲಾಗುತ್ತದೆ. ಅಂದರೆ ಉದ್ಯೋಗಿಯ ಕೊಡುಗೆ ಮತ್ತು ಕಂಪನಿಯ ಕೊಡುಗೆ ಎರಡನ್ನೂ ಸರ್ಕಾರವೇ ಭರಿಸುತ್ತದೆ. ಒಂದು ಸಂಸ್ಥೆಯಲ್ಲಿ ಒಂದು ಸಾವಿರ ಉದ್ಯೋಗಿಗಳವರೆಗೆ ಈ ಕೊಡುಗೆ ಇರುತ್ತದೆ. ಆದರೆ, ಒಂದು ಸಾವಿರಕ್ಕಿಂತ ಹೆಚ್ಚಿನ ಉದ್ಯೋಗಿಗಳು ಇದ್ದಲ್ಲಿ ಹೊಸ ಉದ್ಯೋಗಿಗಳ ಇಪಿಎಫ್ ಖಾತೆಗೆ ಶೇ. 12ರಷ್ಟು ಹಣವನ್ನು ಮಾತ್ರ ಯೋಜನೆಯಿಂದ ನೀಡಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!