ಅಯೋಧ್ಯೆಯಲ್ಲಿ ಭೂಮಿಗೆ ಡಿಮ್ಯಾಂಡ್; ಮಾರ್ಗಸೂಚಿ ದರವೇ ಶೇ. 200ರಷ್ಟು ಹೆಚ್ಚಳ ಸಾಧ್ಯತೆ

Ayodhya circle rates set to be revised: ಕಳೆದ ನಾಲ್ಕೈದು ವರ್ಷಗಳಿಂದ ಅಯೋಧ್ಯೆಯಲ್ಲಿ ಭೂಮಿಗೆ ಭಾರೀ ಬೇಡಿಕೆ ಬಂದಿದೆ. ರಾಮಮಂದಿರ ನಿರ್ಮಾಣದ ಪರಿಣಾಮ ಇದು. ಭೂಮಿ ಬಹಳ ಹೆಚ್ಚಿನ ಮಟ್ಟದಲ್ಲಿ ಮಾರಾಟವಾಗುತ್ತಿದ್ದರೂ ಸರ್ಕಲ್ ರೇಟ್ ಅಥವಾ ಮಾರ್ಗಸೂಚಿ ದರ ಏಳು ವರ್ಷದ ಹಿಂದಿನದ್ದೇ ಇದೆ. ಇದೀಗ ಜಿಲ್ಲಾ ದಂಡಾಧಿಕಾರಿಗಳು ಮಾರ್ಗಸೂಚಿ ದರವನ್ನು ಶೇ. 50ರಿಂದ 200ರವರೆಗೂ ಹೆಚ್ಚಿಸಲು ಯೋಜಿಸಿದ್ದಾರೆ.

ಅಯೋಧ್ಯೆಯಲ್ಲಿ ಭೂಮಿಗೆ ಡಿಮ್ಯಾಂಡ್; ಮಾರ್ಗಸೂಚಿ ದರವೇ ಶೇ. 200ರಷ್ಟು ಹೆಚ್ಚಳ ಸಾಧ್ಯತೆ
ರಾಮಮಂದಿರ
Follow us
|

Updated on: Aug 30, 2024 | 4:06 PM

ಲಕ್ನೋ, ಆಗಸ್ಟ್ 30: ರಾಮಮಂದಿರ ನಿರ್ಮಾಣದ ಫಲವಾಗಿಯೋ ಅಯೋಧ್ಯೆಯಲ್ಲಿ ಭೂಮಿಗೆ ಬಹಳ ಬೇಡಿಕೆ ಬಂದಿದೆ. ಅಂತೆಯೇ, ಸರ್ಕಾರ ಅಯೋಧ್ಯೆಯಲ್ಲಿ ಸರ್ಕಾರಿ ಮಾರ್ಗಸೂಚಿ ದರಗಳನ್ನು ಹೆಚ್ಚಿಸಲು ಯೋಜಿಸಿದೆ. ವರದಿ ಪ್ರಕಾರ ಜಿಲ್ಲಾ ದಂಡಾಧಿಕಾರಿಗಳು (ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್) ಹೊಸ ಸರ್ಕಲ್ ರೇಟ್ ಅಥವಾ ಮಾರುಕಟ್ಟೆ ಮಾರ್ಗಸೂಚಿ ದರಗಳ ಪಟ್ಟಿ ಮಾಡಿದ್ದು, ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಿದೆ.

2017ರ ಆಗಸ್ಟ್​ನಿಂದ ಜಾರಿಯಲ್ಲಿರುವ ಮಾರ್ಗಸೂಚಿ ದರಗಳಿಗಿಂತ ಈಗ ಪ್ರಸ್ತಾವಿತ ದರಗಳು ಶೇ. 50ರಿಂದ ಶೇ. 200ರಷ್ಟು ಹೆಚ್ಚಿವೆ. ಸೆಪ್ಟಂಬರ್ 4ರವರೆಗೂ ಸಾರ್ವಜನಿಕರು ತಮ್ಮ ಅನಿಸಿಕೆಗಳನ್ನು ತಿಳಿಸಲು ಅವಕಾಶ ಇದೆ. ಅದಾದ ಬಳಿಕ ದರಗಳನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲಾಗುತ್ತದೆ.

ಇದನ್ನೂ ಓದಿ: ಸಣ್ಣ ವಯಸ್ಸಲ್ಲೇ ಕೋಟಿಕೋಟಿ ಹಣ, ಫೆರಾರಿ ಕಾರು; ಬಳಿಕ ಎಲ್ಲವೂ ಠುಸ್; ಬಂದಷ್ಟೇ ವೇಗದಲ್ಲಿ ಸಿರಿತನ ಮಾಯ: ಆ ದಿನಗಳ ಸ್ಮರಿಸಿದ ಉದ್ಯಮಿ ಅನುಪಮ್ ಮಿಟ್ಟಲ್

2019ರಲ್ಲಿ ಸುಪ್ರೀಂ ಕೋರ್ಟ್ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ಕೊಟ್ಟ ಬಳಿಕ ಅಯೋಧ್ಯೆಯಲ್ಲಿ ಭೂಮಿ ಬೆಲೆ ಗಗನಕ್ಕೇರುತ್ತಿದೆ. ಆದರೂ ಕೂಡ ಇಲ್ಲಿ ಸರ್ಕಲ್ ರೇಟ್​ಗಳನ್ನು ಪರಿಷ್ಕರಿಸಲಾಗಿಲ್ಲ. ಈಗ ಮಂದಿರ ನಿರ್ಮಾಣವಾದ ಬಳಿಕ ಭೂಮಿಗೆ ಬೇಡಿಕೆ ಹೆಚ್ಚುತ್ತಿದೆ. ಮಾರ್ಗಸೂಚಿ ದರ ಪರಿಷ್ಕರಣೆ ಆಗದೇ ಇರುವ ಕಾರಣ ಸರ್ಕಾರ ಬಹಳಷ್ಟು ಆದಾಯದಿಂದ ವಂಚಿತವಾಗಿದೆ.

ಸರ್ಕಲ್ ರೇಟ್ ಪರಿಷ್ಕರಣೆಯಿಂದ ಸರ್ಕಾರಕ್ಕೂ ಅನುಕೂಲ, ಭೂಮಾಲೀಕರಿಗೂ ಅನುಕೂಲ

ಜಿಲ್ಲೆಯ ಯಾವ್ಯಾವ ಭಾಗದಲ್ಲಿ ಜಮೀನಿನ ಮೌಲ್ಯ ಎಷ್ಟಿದೆ, ಮಾರುಕಟ್ಟೆ ಬೆಲೆ ಎಷ್ಟಿದೆ ಎಂದು ಜಿಲ್ಲಾಡಳಿತ ಅಂದಾಜು ಮಾಡಿ ಮಾರ್ಗಸೂಚಿ ದರ ಸಿದ್ಧಪಡಿಸುತ್ತದೆ. ಈ ದರದ ಮೇಲೆ ಜಮೀನು ವಹಿವಾಟಿನಲ್ಲಿ ಮುದ್ರಾಂಕ ಶುಲ್ಕ ನಿಗದಿಯಾಗುತ್ತದೆ. ಭೂಮಾಲೀಕರಾದ ರೈತರಿಂದ ಸರ್ಕಾರವಾಗಲೀ, ಸರ್ಕಾರಿ ಸಂಸ್ಥೆಯಾಗಲೀ ಭೂಮಿ ಸ್ವಾಧೀನಪಡಿಸಿಕೊಳ್ಳುತ್ತಿದ್ದರೆ ಇದೇ ಮಾರ್ಗಸೂಚಿ ದರ ಪ್ರಕಾರ ಹಣ ನೀಡಬೇಕಾಗುತ್ತದೆ. ಒಂದು ಕಡೆ ಸರ್ಕಾರಕ್ಕೆ ಮುದ್ರಾಂಕ ಶುಲ್ಕಗಳ ಮೂಲಕ ಆದಾಯ ಬರುತ್ತದೆ. ಭೂಮಾಲೀಕರಿಗೆ ಜಮೀನು ಮಾರಾಟದಿಂದ ಹೆಚ್ಚು ಆದಾಯ ಸಿಗುತ್ತದೆ.

ಇದನ್ನೂ ಓದಿ: ಭಾರತದ ಜಿಡಿಪಿ 2024ರಲ್ಲಿ ಶೇ. 6.8 ಅಲ್ಲ, ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಮೂಡೀಸ್

ಅಯೋಧ್ಯೆಯ ತಿಹುರಾ ಮಾಂಝಾ ಪ್ರದೇಶದಲ್ಲಿ ಒಂದು ಹೆಕ್ಟೇರ್ ಕೃಷಿ ಜಮೀನಿಗೆ 2017ರಿಂದ 11 ಲಕ್ಷ ರೂ ಸರ್ಕಲ್ ರೇಟ್ ಇದೆ. ಈಗ ಇದನ್ನು 23 ಲಕ್ಷಕ್ಕೆ ಏರಿಸಲು ಪ್ರಸ್ತಾಪಿಸಲಾಗಿದೆ. ಅಯೋಧ್ಯೆಯ ಬಹುತೇಕ ಎಲ್ಲಾ ಪ್ರದೇಶಗಳಲ್ಲೂ ಸರ್ಕಲ್ ರೇಟ್ ಪರಿಷ್ಕರಿಸಲಾಗುತ್ತಿದೆ. ಕನಿಷ್ಠವೆಂದರೂ ಶೇ. 50ರಷ್ಟು ದರ ಹೆಚ್ಚಳ ಆಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ