AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಭೂಮಿಗೆ ಡಿಮ್ಯಾಂಡ್; ಮಾರ್ಗಸೂಚಿ ದರವೇ ಶೇ. 200ರಷ್ಟು ಹೆಚ್ಚಳ ಸಾಧ್ಯತೆ

Ayodhya circle rates set to be revised: ಕಳೆದ ನಾಲ್ಕೈದು ವರ್ಷಗಳಿಂದ ಅಯೋಧ್ಯೆಯಲ್ಲಿ ಭೂಮಿಗೆ ಭಾರೀ ಬೇಡಿಕೆ ಬಂದಿದೆ. ರಾಮಮಂದಿರ ನಿರ್ಮಾಣದ ಪರಿಣಾಮ ಇದು. ಭೂಮಿ ಬಹಳ ಹೆಚ್ಚಿನ ಮಟ್ಟದಲ್ಲಿ ಮಾರಾಟವಾಗುತ್ತಿದ್ದರೂ ಸರ್ಕಲ್ ರೇಟ್ ಅಥವಾ ಮಾರ್ಗಸೂಚಿ ದರ ಏಳು ವರ್ಷದ ಹಿಂದಿನದ್ದೇ ಇದೆ. ಇದೀಗ ಜಿಲ್ಲಾ ದಂಡಾಧಿಕಾರಿಗಳು ಮಾರ್ಗಸೂಚಿ ದರವನ್ನು ಶೇ. 50ರಿಂದ 200ರವರೆಗೂ ಹೆಚ್ಚಿಸಲು ಯೋಜಿಸಿದ್ದಾರೆ.

ಅಯೋಧ್ಯೆಯಲ್ಲಿ ಭೂಮಿಗೆ ಡಿಮ್ಯಾಂಡ್; ಮಾರ್ಗಸೂಚಿ ದರವೇ ಶೇ. 200ರಷ್ಟು ಹೆಚ್ಚಳ ಸಾಧ್ಯತೆ
ರಾಮಮಂದಿರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 30, 2024 | 4:06 PM

Share

ಲಕ್ನೋ, ಆಗಸ್ಟ್ 30: ರಾಮಮಂದಿರ ನಿರ್ಮಾಣದ ಫಲವಾಗಿಯೋ ಅಯೋಧ್ಯೆಯಲ್ಲಿ ಭೂಮಿಗೆ ಬಹಳ ಬೇಡಿಕೆ ಬಂದಿದೆ. ಅಂತೆಯೇ, ಸರ್ಕಾರ ಅಯೋಧ್ಯೆಯಲ್ಲಿ ಸರ್ಕಾರಿ ಮಾರ್ಗಸೂಚಿ ದರಗಳನ್ನು ಹೆಚ್ಚಿಸಲು ಯೋಜಿಸಿದೆ. ವರದಿ ಪ್ರಕಾರ ಜಿಲ್ಲಾ ದಂಡಾಧಿಕಾರಿಗಳು (ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್) ಹೊಸ ಸರ್ಕಲ್ ರೇಟ್ ಅಥವಾ ಮಾರುಕಟ್ಟೆ ಮಾರ್ಗಸೂಚಿ ದರಗಳ ಪಟ್ಟಿ ಮಾಡಿದ್ದು, ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಿದೆ.

2017ರ ಆಗಸ್ಟ್​ನಿಂದ ಜಾರಿಯಲ್ಲಿರುವ ಮಾರ್ಗಸೂಚಿ ದರಗಳಿಗಿಂತ ಈಗ ಪ್ರಸ್ತಾವಿತ ದರಗಳು ಶೇ. 50ರಿಂದ ಶೇ. 200ರಷ್ಟು ಹೆಚ್ಚಿವೆ. ಸೆಪ್ಟಂಬರ್ 4ರವರೆಗೂ ಸಾರ್ವಜನಿಕರು ತಮ್ಮ ಅನಿಸಿಕೆಗಳನ್ನು ತಿಳಿಸಲು ಅವಕಾಶ ಇದೆ. ಅದಾದ ಬಳಿಕ ದರಗಳನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲಾಗುತ್ತದೆ.

ಇದನ್ನೂ ಓದಿ: ಸಣ್ಣ ವಯಸ್ಸಲ್ಲೇ ಕೋಟಿಕೋಟಿ ಹಣ, ಫೆರಾರಿ ಕಾರು; ಬಳಿಕ ಎಲ್ಲವೂ ಠುಸ್; ಬಂದಷ್ಟೇ ವೇಗದಲ್ಲಿ ಸಿರಿತನ ಮಾಯ: ಆ ದಿನಗಳ ಸ್ಮರಿಸಿದ ಉದ್ಯಮಿ ಅನುಪಮ್ ಮಿಟ್ಟಲ್

2019ರಲ್ಲಿ ಸುಪ್ರೀಂ ಕೋರ್ಟ್ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ಕೊಟ್ಟ ಬಳಿಕ ಅಯೋಧ್ಯೆಯಲ್ಲಿ ಭೂಮಿ ಬೆಲೆ ಗಗನಕ್ಕೇರುತ್ತಿದೆ. ಆದರೂ ಕೂಡ ಇಲ್ಲಿ ಸರ್ಕಲ್ ರೇಟ್​ಗಳನ್ನು ಪರಿಷ್ಕರಿಸಲಾಗಿಲ್ಲ. ಈಗ ಮಂದಿರ ನಿರ್ಮಾಣವಾದ ಬಳಿಕ ಭೂಮಿಗೆ ಬೇಡಿಕೆ ಹೆಚ್ಚುತ್ತಿದೆ. ಮಾರ್ಗಸೂಚಿ ದರ ಪರಿಷ್ಕರಣೆ ಆಗದೇ ಇರುವ ಕಾರಣ ಸರ್ಕಾರ ಬಹಳಷ್ಟು ಆದಾಯದಿಂದ ವಂಚಿತವಾಗಿದೆ.

ಸರ್ಕಲ್ ರೇಟ್ ಪರಿಷ್ಕರಣೆಯಿಂದ ಸರ್ಕಾರಕ್ಕೂ ಅನುಕೂಲ, ಭೂಮಾಲೀಕರಿಗೂ ಅನುಕೂಲ

ಜಿಲ್ಲೆಯ ಯಾವ್ಯಾವ ಭಾಗದಲ್ಲಿ ಜಮೀನಿನ ಮೌಲ್ಯ ಎಷ್ಟಿದೆ, ಮಾರುಕಟ್ಟೆ ಬೆಲೆ ಎಷ್ಟಿದೆ ಎಂದು ಜಿಲ್ಲಾಡಳಿತ ಅಂದಾಜು ಮಾಡಿ ಮಾರ್ಗಸೂಚಿ ದರ ಸಿದ್ಧಪಡಿಸುತ್ತದೆ. ಈ ದರದ ಮೇಲೆ ಜಮೀನು ವಹಿವಾಟಿನಲ್ಲಿ ಮುದ್ರಾಂಕ ಶುಲ್ಕ ನಿಗದಿಯಾಗುತ್ತದೆ. ಭೂಮಾಲೀಕರಾದ ರೈತರಿಂದ ಸರ್ಕಾರವಾಗಲೀ, ಸರ್ಕಾರಿ ಸಂಸ್ಥೆಯಾಗಲೀ ಭೂಮಿ ಸ್ವಾಧೀನಪಡಿಸಿಕೊಳ್ಳುತ್ತಿದ್ದರೆ ಇದೇ ಮಾರ್ಗಸೂಚಿ ದರ ಪ್ರಕಾರ ಹಣ ನೀಡಬೇಕಾಗುತ್ತದೆ. ಒಂದು ಕಡೆ ಸರ್ಕಾರಕ್ಕೆ ಮುದ್ರಾಂಕ ಶುಲ್ಕಗಳ ಮೂಲಕ ಆದಾಯ ಬರುತ್ತದೆ. ಭೂಮಾಲೀಕರಿಗೆ ಜಮೀನು ಮಾರಾಟದಿಂದ ಹೆಚ್ಚು ಆದಾಯ ಸಿಗುತ್ತದೆ.

ಇದನ್ನೂ ಓದಿ: ಭಾರತದ ಜಿಡಿಪಿ 2024ರಲ್ಲಿ ಶೇ. 6.8 ಅಲ್ಲ, ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಮೂಡೀಸ್

ಅಯೋಧ್ಯೆಯ ತಿಹುರಾ ಮಾಂಝಾ ಪ್ರದೇಶದಲ್ಲಿ ಒಂದು ಹೆಕ್ಟೇರ್ ಕೃಷಿ ಜಮೀನಿಗೆ 2017ರಿಂದ 11 ಲಕ್ಷ ರೂ ಸರ್ಕಲ್ ರೇಟ್ ಇದೆ. ಈಗ ಇದನ್ನು 23 ಲಕ್ಷಕ್ಕೆ ಏರಿಸಲು ಪ್ರಸ್ತಾಪಿಸಲಾಗಿದೆ. ಅಯೋಧ್ಯೆಯ ಬಹುತೇಕ ಎಲ್ಲಾ ಪ್ರದೇಶಗಳಲ್ಲೂ ಸರ್ಕಲ್ ರೇಟ್ ಪರಿಷ್ಕರಿಸಲಾಗುತ್ತಿದೆ. ಕನಿಷ್ಠವೆಂದರೂ ಶೇ. 50ರಷ್ಟು ದರ ಹೆಚ್ಚಳ ಆಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ