AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Economy: ರಾಮಮಂದಿರದಿಂದಾಗಿ ಉತ್ತರಪ್ರದೇಶಕ್ಕೆ ಒಂದು ವರ್ಷದಲ್ಲಿ 25,000 ಕೋಟಿ ರೂ ಹೆಚ್ಚುವರಿ ತೆರಿಗೆ ಸಂಗ್ರಹವಾಗುತ್ತದಾ?

Ram Temple Effect on Uttar Pradesh Economy: ಅಯೋಧ್ಯೆಯ ರಾಮಮಂದಿರದ ದೆಸೆಯಿಂದ ಉತ್ತರಪ್ರದೇಶದ ಪ್ರವಾಸೋದ್ಯಮಕ್ಕೆ ಭಾರೀ ಪುಷ್ಟಿ ಸಿಕ್ಕಿದೆ. ಉತ್ತರಪ್ರದೇಶಕ್ಕೆ ಹೋಗುವ ಪ್ರವಾಸಿಗರ ಸಂಖ್ಯೆ ಬಹಳಷ್ಟು ಹೆಚ್ಚಲಿದೆ. ಎಸ್​ಬಿಐ ರಿಸರ್ಚ್ ವರದಿ ಪ್ರಕಾರ 2024-25ರ ವರ್ಷದಲ್ಲಿ ಉತ್ತರಪ್ರದೇಶಕ್ಕೆ 25,000 ಕೋಟಿ ರೂನಷ್ಟು ತೆರಿಗೆ ಆದಾಯ ಹೆಚ್ಚಳವಾಗಲಿದೆ.

UP Economy: ರಾಮಮಂದಿರದಿಂದಾಗಿ ಉತ್ತರಪ್ರದೇಶಕ್ಕೆ ಒಂದು ವರ್ಷದಲ್ಲಿ 25,000 ಕೋಟಿ ರೂ ಹೆಚ್ಚುವರಿ ತೆರಿಗೆ ಸಂಗ್ರಹವಾಗುತ್ತದಾ?
ಅಯೋಧ್ಯೆ ರಾಮಮಂದಿರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 23, 2024 | 6:36 PM

ನವದೆಹಲಿ, ಜನವರಿ 23: ಉತ್ತರಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ನಿನ್ನೆ ಪ್ರಾಣ ಪ್ರತಿಷ್ಠಾಪನಾ (Ram temple desecration ceremony) ಕಾರ್ಯಕ್ರಮ ನಡೆದಿದೆ. ಇಡೀ ದೇಶಕ್ಕೆ ದೇಶವೇ ನಿನ್ನೆ ಕೇಸರೀಮಯವಾಗಿತ್ತು. ರಾಮಮಂದಿರ ಬಹಳಷ್ಟು ಭಾರತೀಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅಯೋಧ್ಯೆಗೆ ಹೋಗಿ ಬಾಲರಾಮನನ್ನು ಕಣ್ತುಂಬಿಸಿಕೊಳ್ಳಬೇಕೆಂದು ಹಪಹಪಿಸುತ್ತಿರುವವರ ಸಂಖ್ಯೆ ಬಹಳ ದೊಡ್ಡದಿದೆ. ಇದು ಉತ್ತರಪ್ರದೇಶ ರಾಜ್ಯದ ಪ್ರವಾಸೋದ್ಯಮಕ್ಕೆ ಸಿಗಲಿರುವ ಭಾರೀ ಪುಷ್ಟಿಯ ವಿಚಾರವಾಗಿದೆ. ಗ್ಲೋಬಲ್ ಬ್ರೋಕರೇಜ್ ಸಂಸ್ಥೆಯಾದ ಜೆಫ್ರೀಸ್ ಈ ರಾಮಮಂದಿರದಿಂದ ಭಾರತದ ಪ್ರವಾಸೋದ್ಯಮಕ್ಕೆ ಎಷ್ಟು ಲಾಭ ತರಬಹುದು ಎಂದು ವಿಶ್ಲೇಷಿಸಿ ವರದಿ ಬಿಡುಗಡೆ ಮಾಡಿತ್ತು. ಈಗ ಎಸ್​ಬಿಐ ರಿಸರ್ಚ್ ಸಂಸ್ಥೆಯ ವರದಿಯೊಂದರ ಪ್ರಕಾರ ರಾಮಮಂದಿರದ ಫಲವಾಗಿ ಉತ್ತರಪ್ರದೇಶಕ್ಕೆ ಒಂದು ವರ್ಷದಲ್ಲಿ 25,000 ಕೋಟಿ ರೂನಷ್ಟು ತೆರಿಗೆ ಲಾಭ ತರಬಹುದು.

2025ರ ಅಂತ್ಯದೊಳಗೆ ಉತ್ತರಪ್ರದೇಶದಲ್ಲಿ ಪ್ರವಾಸಿಗರು ಮಾಡುವ ವೆಚ್ಚ 4 ಲಕ್ಷ ಕೋಟಿ ರೂ ದಾಟಿ ಹೋಗಬಹುದು. 2024-25ರ ಹಣಕಾಸು ವರ್ಷದಲ್ಲಿ ಉತ್ತರಪ್ರದೇಶದ ತೆರಿಗೆ ಆದಾಯ 20,000 ದಿಂದ 25,000 ಕೋಟಿ ರೂನಷ್ಟು ಹೆಚ್ಚಾಗಬಹುದು ಎಂದು ಎಸ್​ಬಿಐ ರಿಸರ್ಚ್ ಜನವರಿ 21ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ರಾಮಮಂದಿರ ಜಾಗದಲ್ಲಿ ಫ್ಯಾಕ್ಟರಿ ಕಟ್ಟಬೇಕಿತ್ತಾ? ತಪ್ಪು, ಮಂದಿರದಿಂದ ಆರ್ಥಿಕತೆಗೆ ಎಷ್ಟು ಲಾಭ ಆಗಬಹುದು ಗೊತ್ತಾ?

ಉತ್ತರಪ್ರದೇಶ ನಾಗಾಲೋಟ

ಒಂದು ಕಾಲದಲ್ಲಿ ಬಿಮಾರು ರಾಜ್ಯಗಳಲ್ಲಿ ಒಂದೆಂದು ಹಂಗಿಸಲಾಗುತ್ತಿದ್ದ ಉತ್ತರಪ್ರದೇಶ ಈಗ ಬಹಳಷ್ಟು ಬೆಳವಣಿಗೆ ಕಾಣುತ್ತಿದೆ. 2028ರಲ್ಲಿ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿ ಉತ್ತರಪ್ರದೇಶದ ಪಾತ್ರ ಮಹತ್ವದ್ದಿರಲಿದೆ. 2027ರಲ್ಲಿ 500 ಬಿಲಿಯನ್ ಡಾಲರ್ ಜಿಡಿಪಿ ಗಾತ್ರ ಮುಟ್ಟಬಹುದು ಎಂದು ನಿರೀಕ್ಷಿಸಲಾಗಿರುವ ಎರಡು ರಾಜ್ಯಗಳಲ್ಲಿ ಉತ್ತರಪ್ರದೇಶವೂ ಒಂದು. ಮಹಾರಾಷ್ಟ್ರ ಮತ್ತೊಂದು ರಾಜ್ಯವಾಗಿದೆ.

ಇದನ್ನೂ ಓದಿ: ರಾಮಮಂದಿರಕ್ಕೆ 3 ಲಕ್ಷ ಭಕ್ತರ ಆಗಮನ, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ: ಅರ್ಚಕರು

ಉತ್ತರಪ್ರದೇಶ ಮತ್ತು ಮಹಾರಾಷ್ಟ್ರ ಭಾರತದ ಅತಿದೊಡ್ಡ ರಾಜ್ಯಗಳ ಪೈಕಿ ಸೇರಿದೆ. ಮಹಾರಾಷ್ಟ್ರಕ್ಕೆ ಮುಂಬೈ ನಗರದ ಅನುಕೂಲ ಇದೆ. ಉತ್ತರಪ್ರದೇಶಕ್ಕೆ ಹೆಚ್ಚು ಆದಾಯ ತರಬಲ್ಲ ಪ್ರಮುಖ ನಗರ ಇಲ್ಲ. ನವದೆಹಲಿ ಪಕ್ಕದ ನೋಯ್ಡಾ, ಘಾಜಿಯಾಬಾದ್ ಮುಂತಾದ ಪ್ರದೇಶಗಳು ಹೆಚ್ಚಿನ ಆದಾಯ ತರುತ್ತವೆ. ಈಗ ಧಾರ್ಮಿಕ ಸ್ಥಳಗಳಾದ ಅಯೋಧ್ಯೆ ಮತ್ತು ವಾರಾಣಸಿ ಉತ್ತರಪ್ರದೇಶದ ಪ್ರವಾಸೋದ್ಯಮಕ್ಕೆ ಪುಷ್ಟಿ ಕೊಡಲಿದ್ದು ಆರ್ಥಿಕತೆಯ ಬೆಳವಣಿಗೆಯ ವೇಗ ಹೆಚ್ಚಿಸಬಹುದು.

ಉತ್ತರಪ್ರದೇಶದ ಆರ್ಥಿಕತೆ ನಾರ್ವೆಯಂತಹ ದೇಶವನ್ನು ಮೀರಿಸಬಹುದು ಎಂಬ ಎಣಿಕೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್