Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Cost: ಸರ್ಕಾರದ ಧನಸಹಾಯ ಇಲ್ಲದೇ ರಾಮ ಮಂದಿರ ನಿರ್ಮಾಣ; ಇದಕ್ಕೆ ಎಷ್ಟು ವೆಚ್ಚ? ಯಾರಿಂದ ಫಂಡಿಂಗ್?

Ram Janmabhoomi: ಸುಪ್ರೀಂಕೋರ್ಟ್ ಆದೇಶದನ್ವಯ 2020ರಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಮೊದಲುಗೊಂಡಿತು. 3 ವರ್ಷದಲ್ಲಿ ದೇವಸ್ಥಾನ ಸಿದ್ಧವಾಗಿದೆ. ಅಂದಾಜು ಪ್ರಕಾರ ಮುಖ್ಯ ರಾಮಮಂದಿರದ ನಿರ್ಮಾಣಕ್ಕೆ 1,800 ಕೋಟಿ ರೂ ವೆಚ್ಚವಾಗಿರುವ ಅಂದಾಜಿದೆ. ಒಟ್ಟಾರೆ 18,000 ಕೋಟಿ ರೂ ಬಜೆಟ್ ಇಡಲಾಗಿತ್ತು. ಎಲ್ ಅಂಡ್ ಟಿ ಸಂಸ್ಥೆ ಲಾಭಾಪೇಕ್ಷೆ ಇಲ್ಲದೇ ಮಂದಿರ ನಿರ್ಮಾಣ ಮಾಡಿದೆ. ಮುಖ್ಯ ದೇವಸ್ಥಾನ 2.7 ಎಕರೆಯಷ್ಟು ವಿಶಾಲವಾಗಿದೆ.

Ram Temple Cost: ಸರ್ಕಾರದ ಧನಸಹಾಯ ಇಲ್ಲದೇ ರಾಮ ಮಂದಿರ ನಿರ್ಮಾಣ; ಇದಕ್ಕೆ ಎಷ್ಟು ವೆಚ್ಚ? ಯಾರಿಂದ ಫಂಡಿಂಗ್?
ರಾಮ ಮಂದಿರ ನಿರ್ಮಾಣ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 02, 2024 | 11:42 AM

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ (Ayodhya Sri Ram Temple) ಉದ್ಘಾಟನೆಗೆ ದಿನಗಣನೆ ನಡೆದಿದೆ. ರಾಮಮಂದಿರದಂತೆ ಇಡೀ ಅಯೋಧ್ಯೆ ನಗರಿಯ ರೂಪುರೇಖೆಯೇ ಬದಲಾಗಿ ಹೋಗಿದೆ. 2019-2020ರಲ್ಲಿ ಇದರ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಮೂರು ವರ್ಷದಲ್ಲಿ ಮಂದಿರ ಸಿದ್ಧವಾಗಿದೆ. ಒಟ್ಟು 70 ಎಕರೆ ವಿಶಾಲ ಅಂಗಳದಲ್ಲಿ 2.7 ಎಕರೆಯಷ್ಟು ಜಾಗದಲ್ಲಿ ಮಂದಿರದ ನಿರ್ಮಾಣ ಮಾಡಲಾಗಿದೆ. ಉಚ್ಚತಮ ಗುಣಮಟ್ಟದ ಕೆಲಸಗಳಿಗೆ ಹೆಸರುವಾಸಿಯಾಗಿರುವ ಲಾರ್ಸನ್ ಅಂಡ್ ಟೌಬ್ರೋ ಸಂಸ್ಥೆ ಮಂದಿರ ನಿರ್ಮಿಸಿದೆ. ಎಲ್ ಅಂಟ್ ಟಿ ಸಂಸ್ಥೆ ಯಾವುದೇ ಲಾಭದ ಅಪೇಕ್ಷೆ ಇಲ್ಲದೇ ಕಾಮಗಾರಿ ಪೂರ್ಣಗೊಳಿಸಿದೆ.

ರಾಮ ಮಂದಿರ ನಿರ್ಮಾಣಕ್ಕೆ ಎಷ್ಟು ವೆಚ್ಚ?

ಅಯೋಧ್ಯೆ ರಾಮ ಮಂದಿರದ ನಿರ್ಮಾಣಕ್ಕೆ ಎಷ್ಟು ಹಣ ಖರ್ಚಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಎಲ್ಲಿಯೂ ಬಹಿರಂಗವಾಗಿಲ್ಲ. ಈ ಮಂದಿರ ನಿರ್ಮಾಣದ ಒಟ್ಟು ವೆಚ್ಚ 18,000 ಕೋಟಿ ರೂ ಎಂದು ಅಂದಾಜಿಸಲಾಗಿದೆ ಎಂದು ಕೆಲ ವರದಿಗಳು ಹೇಳಿವೆ. ಆದರೆ, ಮಂದಿರ ಕಟ್ಟಲು ಆದ ಕಾಮಗಾರಿ ವೆಚ್ಚ 1,800 ಇರಬಹುದು ಎನ್ನಲಾಗಿದೆ. ಸುಪ್ರೀಂ ಕೋರ್ಟ್​ನಿಂದ ಮಂದಿರ ನಿರ್ಮಾಣಕ್ಕಾಗಿ ರಚನೆಯಾದ ಶ್ರೀ ರಾಮ್ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಂಸ್ಥೆ ರಾಮ ಮಂದಿರ ನಿರ್ಮಾಣ ಕಾಮಗಾರಿಗೆ 1,800 ಕೋಟಿ ರೂ ವೆಚ್ಚವಾಗುತ್ತದೆ ಎಂದು ಅಂದಾಜು ಮಾಡಿತ್ತು.

2020ರ ಫೆಬ್ರುವರಿಯಿಂದ 2023ರ ಮಾರ್ಚ್ 31ರವರೆಗೆ ಟ್ರಸ್ಟ್​ನಿಂದ 900 ಕೋಟಿ ರೂ ಬಿಡುಗಡೆ ಆಗಿದೆ. ಇನ್ನೂ ಕೂಡ 3,000 ಕೋಟಿ ರೂ ಹಣ ಖಾತೆಯಲ್ಲಿ ಉಳಿದಿದೆ ಎಂದು ಟ್ರಸ್ಟ್​ನ ಕಾರ್ಯದರ್ಶಿ ಚಂಪತ್ ರಾಯ್ ಕಳೆದ ವಾರವಷ್ಟೇ (ಡಿ. 30) ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ 24‌ ಅರ್ಚಕರಲ್ಲಿ ಇಬ್ಬರು ಎಸ್ಸಿ, ಓರ್ವ ಒಬಿಸಿ ಅರ್ಚಕರು, ಮೂರು ತಿಂಗಳ ಗುರುಕುಲ ತರಬೇತಿ

ಮಂದಿರ ನಿರ್ಮಾಣ ವೆಚ್ಚದ ಜೊತೆಗೆ, ಭೂಸ್ವಾಧೀನ, ಮಂದಿರ ಅಂಗಳದ ಅಭಿವೃದ್ಧಿ ಇತ್ಯಾದಿ ಎಲ್ಲವಕ್ಕೂ ಸುಮಾರು 18,000 ಕೋಟಿ ರೂನಷ್ಟು ವೆಚ್ಚವಾಗಬಹುದು.

ಮಂದಿರ ನಿರ್ಮಾಣದ ವೆಚ್ಚಕ್ಕೆ ಯಾರಿಂದ ಹಣ ಸಹಾಯ?

ರಾಮ ಮಂದಿರ ನಿರ್ಮಾಣಕ್ಕೆ ಸರ್ಕಾರಿಂದ ಧನಸಹಾಯ ಪಡೆಯಲಾಗಿಲ್ಲ ಎಂಬುದು ಗಮನಾರ್ಹ. ಸಾರ್ವಜನಿಕರಿಂದ ಚಂದಾ ಹಣ ಪಡೆದು ಮಂದಿರ ಕಟ್ಟಲು ಬಳಸಲಾಗಿದೆ. ಅಯೋಧ್ಯೆಯ ಪ್ರತೀ ಮನೆ ಮನೆಯೂ ಹಣವನ್ನು ಕೊಟ್ಟಿವೆ. ಅಯೋಧ್ಯೆ ಮಾತ್ರವಲ್ಲ, ದೇಶಾದ್ಯಂತ ಬಹಳ ಕಡೆಗಳಿಂದ ಸಾರ್ವಜನಿಕರು ಮಂದಿರ ನಿರ್ಮಾಣಕ್ಕೆ ಚಂದಾ ಕೊಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್