AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ: ಆಯುಷ್ಮಾನ್ ಆರೋಗ್ಯ ಕಾರ್ಡ್ ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧಾರ

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್‌ಗಳನ್ನು ರಾಜ್ಯ ಅರೋಗ್ಯ ಯೋಜನೆಗಳಿಗೂ ಬಳಸುವಂತಾಗಲಿದೆ.

ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ: ಆಯುಷ್ಮಾನ್ ಆರೋಗ್ಯ ಕಾರ್ಡ್ ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧಾರ
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್
TV9 Web
| Edited By: |

Updated on: Aug 26, 2022 | 4:23 PM

Share

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧರಿಸುವ ಮೂಲಕ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಕೇವಲ ಕೇಂದ್ರ ಸರ್ಕಾರದ ಲೋಗೋವನ್ನು ಹೊಂದಿದ್ದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳು ಮುಂದಿನ ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳ ಲೋಗೋಗಳು ಕೂಡ ಇರಲಿದೆ. ಅಲ್ಲದೆ ಈ ಕಾರ್ಡ್​ ಅನ್ನು ರಾಜ್ಯ ಆರೋಗ್ಯ ಯೋಜನೆಗಳಿಗೂ ಬಳಸಬಹುದು. ದೆಹಲಿ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಿಂದ ದೂರವಿದ್ದು, ತಮ್ಮ ರಾಜ್ಯಗಳಲ್ಲಿ ಇದನ್ನು ಜಾರಿಗೆ ತಂದಿಲ್ಲ. ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳೊಂದಿಗೆ ಚರ್ಚೆ ನಡೆಯುತ್ತಿದ್ದು, ಇನ್ನುಳಿದಂತೆ ಎಲ್ಲಾ ರಾಜ್ಯಗಳಲ್ಲಿ ಆಯುಷ್ಮಾನ್ ಕಾರ್ಡ್​ಗಳನ್ನು ಬಳಸಲಾಗುತ್ತಿದೆ.

ಏನಿದು ಆಯುಷ್ಮಾನ್ ಆರೋಗ್ಯ ಕಾರ್ಡ್?

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರ ಸೆಪ್ಟೆಂಬರ್​ನಲ್ಲಿ ಪ್ರಾರಂಭಿಸಿದ್ದರು. ದೇಶದ ಪ್ರತಿಯೊಬ್ಬ ನಾಗರಿಕರಿಕನಿಗೂ ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದರು.

ಆಯುಷ್ಮಾನ್ ಭಾರತ್ ಯೋಜನೆ (PM-JAY) ಅಡಿಯಲ್ಲಿ COVID-19 ನಿಂದಾಗಿ ತಮ್ಮ ಹೆತ್ತವರನ್ನು ಕಳೆದುಕೊಂಡಿರುವ ಎಲ್ಲಾ ಮಕ್ಕಳಿಗೆ ಉಚಿತ ಆರೋಗ್ಯ ವಿಮೆಯನ್ನು ನೀಡಲು ಭಾರತ ಸರ್ಕಾರ ನಿರ್ಧರಿಸಿದೆ. ಅಲ್ಲದೆ ಎಲ್ಲಾ ಮಕ್ಕಳು 5 ಲಕ್ಷ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಫಲಾನುಭವಿಗಳಾಗಿ ದಾಖಲಾಗುತ್ತಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ರೋಗಿಗಳು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ