AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ: ಆಯುಷ್ಮಾನ್ ಆರೋಗ್ಯ ಕಾರ್ಡ್ ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧಾರ

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್‌ಗಳನ್ನು ರಾಜ್ಯ ಅರೋಗ್ಯ ಯೋಜನೆಗಳಿಗೂ ಬಳಸುವಂತಾಗಲಿದೆ.

ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ: ಆಯುಷ್ಮಾನ್ ಆರೋಗ್ಯ ಕಾರ್ಡ್ ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧಾರ
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್
TV9 Web
| Edited By: Rakesh Nayak Manchi|

Updated on: Aug 26, 2022 | 4:23 PM

Share

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧರಿಸುವ ಮೂಲಕ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಕೇವಲ ಕೇಂದ್ರ ಸರ್ಕಾರದ ಲೋಗೋವನ್ನು ಹೊಂದಿದ್ದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳು ಮುಂದಿನ ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳ ಲೋಗೋಗಳು ಕೂಡ ಇರಲಿದೆ. ಅಲ್ಲದೆ ಈ ಕಾರ್ಡ್​ ಅನ್ನು ರಾಜ್ಯ ಆರೋಗ್ಯ ಯೋಜನೆಗಳಿಗೂ ಬಳಸಬಹುದು. ದೆಹಲಿ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಿಂದ ದೂರವಿದ್ದು, ತಮ್ಮ ರಾಜ್ಯಗಳಲ್ಲಿ ಇದನ್ನು ಜಾರಿಗೆ ತಂದಿಲ್ಲ. ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳೊಂದಿಗೆ ಚರ್ಚೆ ನಡೆಯುತ್ತಿದ್ದು, ಇನ್ನುಳಿದಂತೆ ಎಲ್ಲಾ ರಾಜ್ಯಗಳಲ್ಲಿ ಆಯುಷ್ಮಾನ್ ಕಾರ್ಡ್​ಗಳನ್ನು ಬಳಸಲಾಗುತ್ತಿದೆ.

ಏನಿದು ಆಯುಷ್ಮಾನ್ ಆರೋಗ್ಯ ಕಾರ್ಡ್?

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರ ಸೆಪ್ಟೆಂಬರ್​ನಲ್ಲಿ ಪ್ರಾರಂಭಿಸಿದ್ದರು. ದೇಶದ ಪ್ರತಿಯೊಬ್ಬ ನಾಗರಿಕರಿಕನಿಗೂ ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದರು.

ಆಯುಷ್ಮಾನ್ ಭಾರತ್ ಯೋಜನೆ (PM-JAY) ಅಡಿಯಲ್ಲಿ COVID-19 ನಿಂದಾಗಿ ತಮ್ಮ ಹೆತ್ತವರನ್ನು ಕಳೆದುಕೊಂಡಿರುವ ಎಲ್ಲಾ ಮಕ್ಕಳಿಗೆ ಉಚಿತ ಆರೋಗ್ಯ ವಿಮೆಯನ್ನು ನೀಡಲು ಭಾರತ ಸರ್ಕಾರ ನಿರ್ಧರಿಸಿದೆ. ಅಲ್ಲದೆ ಎಲ್ಲಾ ಮಕ್ಕಳು 5 ಲಕ್ಷ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಫಲಾನುಭವಿಗಳಾಗಿ ದಾಖಲಾಗುತ್ತಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ರೋಗಿಗಳು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’