AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನಿಸಿ, ಆಯುಷ್ಮಾನ್ ಕಾರ್ಡ್ ಜೊತೆಗೆ ABHA ಕೂಡ ಇದ್ದರೆ ಪ್ರಯೋಜನ ಹೆಚ್ಚು; ಅದು ಹೇಗೆ, ಇಲ್ಲಿದೆ ಮಾಹಿತಿ

ABJAY and ABHA combination: 2018ರಲ್ಲಿ ಆರಂಭವಾದ ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಅಡಿ ವರ್ಷಕ್ಕೆ 5 ಲಕ್ಷ ರೂವರೆಗೆ ಹೆಲ್ತ್ ಇನ್ಷೂರೆನ್ಸ್ ಕವರೇಜ್ ಇರುತ್ತದೆ. ಇತ್ತೀಚೆಗೆ, 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಈ ಯೋಜನೆ ಅಡಿ ಅರ್ಹರು ಆಯುಷ್ಮಾನ್ ಕಾರ್ಡ್ ಪಡೆಯಬಹುದು. ಇದರ ಜೊತೆಗೆ ABHA ಹೆಲ್ತ್ ಐಡಿ ಕೂಡ ಇದ್ದರೆ ಹೆಚ್ಚು ಪ್ರಯೋಜನ ಪಡೆಯಬಹುದು.

ಗಮನಿಸಿ, ಆಯುಷ್ಮಾನ್ ಕಾರ್ಡ್ ಜೊತೆಗೆ ABHA ಕೂಡ ಇದ್ದರೆ ಪ್ರಯೋಜನ ಹೆಚ್ಚು; ಅದು ಹೇಗೆ, ಇಲ್ಲಿದೆ ಮಾಹಿತಿ
ಆಯುಷ್ಮಾನ್ ಕಾರ್ಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 08, 2025 | 4:29 PM

Share

ಹತ್ತಿರ ಹತ್ತಿರ ಏಳು ವರ್ಷದ ಹಿಂದೆ ಆರಂಭವಾದ ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ (AB-JAY- Ayushman Bharat Jan Aarogya Yojana) ದುರ್ಬಲ ಸಮುದಾಯಕ್ಕೆ ಬಹಳ ಉಪಯುಕ್ತ ಎನಿಸಿದೆ. ನಿರ್ಗತಿಕರು, ವಿಶೇಷ ಚೇತನರು ಇತ್ಯಾದಿ ದುರ್ಬಲ ಸಮುದಾಯಗಳ ಜೊತೆಗೆ 70 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲಾ ವರ್ಗಗಳ ಹಿರಿಯ ನಾಗರಿಕರಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಈಗ ಈ ಸ್ಕೀಮ್ ಹಿಂದೆಂದಿಗಿಂತಲೂ ಗಮನಾರ್ಹ ಎನಿಸಿದೆ.

ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಅಡಿ ಹಿರಿಯ ನಾಗರಿಕರು ಆಯುಷ್ಮಾನ್ ವಯ ವಂದನ ಕಾರ್ಡ್ ಅಥವಾ ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯಬಹುದು. ಇದು ವರ್ಷಕ್ಕೆ 5 ಲಕ್ಷ ರೂವರೆಗೆ ಉಚಿತ ಹೆಲ್ತ್ ಇನ್ಷೂರೆನ್ಸ್ ಕವರೇಜ್ ನೀಡುವ ಯೋಜನೆಯಾಗಿದೆ. ಆಧಾರ್ ಕಾರ್ಡ್ ದಾಖಲೆ ಇದ್ದರೆ ಸಾಕು ಈ ಹೆಲ್ತ್ ಇನ್ಷೂರೆನ್ಸ್ ಕಾರ್ಡ್ ಅನ್ನು ಪಡೆಯಬಹುದು.

ಇದನ್ನೂ ಓದಿ: ಮೋದಿ ನೇತೃತ್ವದಲ್ಲಿ ಬದಲಾಗಿದೆ ಭಾರತ: ಹೀನಾ ಖಾನ್, ಸುಭಾಷ್ ಘಾಯ್ ಅನಿಸಿಕೆ

ದೇಶಾದ್ಯಂತ ಈ ಯೋಜನೆ ಅಡಿ ಎನ್​​ಲಿಸ್ಟ್ ಆಗಿರುವ ಸಾವಿರಾರು ಆಸ್ಪತ್ರೆಗಳಲ್ಲಿ ಎಲ್ಲಿ ಬೇಕಾದರೂ ಕಾರ್ಡ್​​ದಾರರು ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶ ಸಿಗುತ್ತದೆ. ಆಯುಷ್ಮಾನ್ ಭಾರತ್ ಸ್ಕೀಮ್​​ನ ಆ್ಯಪ್​ಗೆ ಹೋಗಿ ಸುಲಭವಾಗಿ ನೊಂದಾಯಿಸಿ ಕಾರ್ಡ್ ಪಡೆಯಿರಿ.

ಆಯುಷ್ಮಾನ್ ಕಾರ್ಡ್ ಜೊತೆಗೆ ABHA ಇದ್ದರೆ ಮತ್ತಷ್ಟು ಸಹಾಯಕ

ABHA ಎಂದರೆ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್. ಇದು ಡಿಜಿಟಲ್ ಹೆಲ್ತ್ ಐಡಿಯಾಗಿದೆ. ಪ್ಯಾನ್ ಕಾರ್ಡ್ ಹೇಗೆ ನಿಮ್ಮ ಹಣಕಾಸು ವಹಿವಾಟುಗಳನ್ನು ಒಂದೇ ಕಡೆ ಕ್ರೋಢೀಕರಿಸುತ್ತದೋ, ಯುಎಎನ್ ಹೇಗೆ ನಿಮ್ಮ ಎಲ್ಲಾ ಇಪಿಎಫ್ ದಾಖಲೆಗಳನ್ನು ಒಳಗೊಂಡಿರುತ್ತದೋ, ಹಾಗೆಯೇ, ಆಭಾ ಕಾರ್ಡ್ ಕೂಡ ನಿಮ್ಮ ಎಲ್ಲಾ ಆರೋಗ್ಯ ದಾಖಲೆಗಳನ್ನು ಒಂದೇ ಕಡೆ ಸೇರಿಸುತ್ತದೆ.

ಇದನ್ನೂ ಓದಿ: 500 ರೂ ನೋಟು ನಿಷೇಧ ಆಗುತ್ತೆ ಅನ್ನೋದು ಸುಳ್ಳು ಸುದ್ದಿ; ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟನೆ ಇದು

ನೀವು ಆಸ್ಪತ್ರೆಗೆ ದಾಖಲಾದಾಗೆಲ್ಲಾ ಅಥವಾ ಒಪಿಡಿಗೆ ಹೋದಾಗೆಲ್ಲಾ ಇನ್ಷೂರೆನ್ಸ್ ಕಾರ್ಡ್ ಜೊತೆಗೆ ಆಭಾ ಐಡಿಯನ್ನೂ ನೀಡಬಹುದು. ಇದರಿಂದ ನಿಮ್ಮ ಹೆಲ್ತ್ ಹಿಸ್ಟರಿ ಒಂದೇ ಕಡೆ ದಾಖಲಾಗುತ್ತಾ ಹೋಗುತ್ತದೆ. ನೀವು ಆಸ್ಪತ್ರೆಗೆ ದಾಖಲಾದಾಗ ವೈದ್ಯರಿಗೆ ನಿಮ್ಮ ಮೆಡಿಕಲ್ ಹಿಸ್ಟರಿ ಸುಲಭವಾಗಿ ಸಿಗುತ್ತದೆ. ಇದರಿಂದ ಚಿಕಿತ್ಸೆ ನೀಡುವುದು ಬಹಳ ಸುಲಭವಾಗುತ್ತದೆ.ಹಾಗೆಯೇ, ಆಭಾ ಐಡಿ ಇದ್ದರೆ ನೀವು ಸುಲಭವಾಗಿ ಇನ್ಷೂರೆನ್ಸ್ ಕ್ಲೇಮ್ ಸೆಟಲ್ಮೆಂಟ್ ಮಾಡಬಹುದು.

ಆಭಾ ಐಡಿ ಪಡೆಯುವುದು ಹೇಗೆ?

ನೀವು ಈ ವೆಬ್​​ಸೈಟ್​​ಗೆ ಹೋಗಿ: abha.abdm.gov.in

ಕ್ರಿಯೇಟ್ ಆಭಾ ನಂಬರ್ ಕ್ಲಿಕ್ ಮಾಡಿ. ಇಲ್ಲಿ ಆಧಾರ್ ನಂಬರ್ ಇತ್ಯಾದಿ ವಿವರಗಳನ್ನು ನಮೂದಿಸಿದಾಗ ನಿಮಗೆ 14 ಅಂಕಿಗಳ ಆಭಾ ಐಡಿ ಜನರೇಟ್ ಆಗುತ್ತದೆ. ಇದನ್ನು ನೀವು ಆಯುಷ್ಮಾನ್ ಭಾರತ್ ಸ್ಕೀಮ್​​ನಲ್ಲಿ ಬಳಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!