AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಭಾರತ್: ಕೇವಲ 40 ದಿನದಲ್ಲಿ 25 ಲಕ್ಷ ಹಿರಿಯ ನಾಗರಿಕರಿಗೆ ಹೆಲ್ತ್ ಇನ್ಷೂರೆನ್ಸ್ ಕಾರ್ಡ್

AB PM JAY scheme for senior citizens: ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆ ಅಡಿ 70 ವರ್ಷ ವಯಸ್ಸು ದಾಟಿದ ಹಿರಿಯ ನಾಗರಿಕರಿಗೆ 5 ಲಕ್ಷ ವಿಮಾ ಕವರೇಜ್ ನೀಡಲಾಗುತ್ತಿದೆ. 2024ರ ಅಕ್ಟೋಬರ್ 29ರಂದು ಚಾಲನೆಗೊಂಡ ವಯ ವಂದನ ಸ್ಕೀಮ್​ನಲ್ಲಿ 50 ದಿನದಲ್ಲಿ 25 ಲಕ್ಷ ವೃದ್ಧರಿಗೆ ಕಾರ್ಡ್ ನೀಡಲಾಗಿದೆ. 22 ಸಾವಿರಕ್ಕೂ ಅಧಿಕ ವೃದ್ಧರು ಈಗಾಗಲೇ ಟ್ರೀಟ್ಮೆಂಟ್ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಆಯುಷ್ಮಾನ್ ಭಾರತ್: ಕೇವಲ 40 ದಿನದಲ್ಲಿ 25 ಲಕ್ಷ ಹಿರಿಯ ನಾಗರಿಕರಿಗೆ ಹೆಲ್ತ್ ಇನ್ಷೂರೆನ್ಸ್ ಕಾರ್ಡ್
ಹಿರಿಯ ನಾಗರಿಕರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 09, 2024 | 2:43 PM

Share

ನವದೆಹಲಿ, ಡಿಸೆಂಬರ್ 9: ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಬಹಳ ಜನಪ್ರಿಯವಾಗುತ್ತಿದೆ. 2024ರ ಅಕ್ಟೋಬರ್ 29ಕ್ಕೆ ಆರಂಭವಾದ ಈ ಯೋಜನೆ ಅಡಿ ಆಯುಷ್ಮಾನ್ ವಯ ವಂದನ ಇನ್ಷೂರೆನ್ಸ್ ಕಾರ್ಡ್​ಗಳನ್ನು ಪಡೆದವರ ಸಂಖ್ಯೆ 25 ಲಕ್ಷ ದಾಟಿದೆ. 40 ದಿನಗಳ ಒಳಗೆಯೇ ಈ ಮೈಲಿಗಲ್ಲು ಮುಟ್ಟಿರುವುದು ಯೋಜನೆಯ ಜನಪ್ರಿಯತೆಗೆ ಕೈಗನ್ನಡಿಯಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಈವರೆಗೆ 25 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರು ಆಯುಷ್ಮಾನ್ ಕಾರ್ಡ್ ಪಡೆದಿದ್ದಾರೆ. 22,000ಕ್ಕೂ ಹೆಚ್ಚು ವೃದ್ಧರು ಈ ಇನ್ಷೂರೆನ್ಸ್ ಸೌಲಭ್ಯದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಒಟ್ಟಾರೆ 40 ಕೋಟಿ ರೂಗೂ ಅಧಿಕ ವೆಚ್ಚವನ್ನು ವಿಮೆಯಲ್ಲಿ ಭರಿಸಲಾಗಿದೆ.

ಕೊರೋನರಿ ಏಂಜಿಯೋಪ್ಲಾಸ್ಟಿ, ಹಿಪ್ ರೀಪ್ಲೇಸ್ಮೆಂಟ್, ಗ್ಯಾಲ್ ಬ್ಲ್ಯಾಡ್ ತೆಗೆದಿರುವುದು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಪ್ರೋಸ್ಟೇಟ್ ರಿಸೆಕ್ಷನ್, ಸ್ಟ್ರೋಕ್, ಹೀಮೋಡಯಾಲಿಸಿಸ್, ಎಂಟೆರಿಕ್ ಫಿವರ್ ಮತ್ತಿತರ ಬೇರೆ ಬೇರೆ ಕಾಯಿಲೆ ಹಾಗೂ ಆರೋಗ್ಯ ಸಮಸ್ಯೆಗಳಿಗೆ ಆಯುಷ್ಮಾನ್ ವಯ ವಂದನಾ ಕಾರ್ಡ್ ಅನ್ನು ಬಳಸಿ ಚಿಕಿತ್ಸೆ ಪಡೆಯಲಾಗಿದೆ.

ಇದನ್ನೂ ಓದಿ: ಕಲಿಕೆಗೆ ವಯಸ್ಸಿನ ಅಡ್ಡಿ ಇಲ್ಲ; ಎಐ, ಡ್ರೋನ್ ಇತ್ಯಾದಿ ವಿದ್ಯೆ ಕಲಿಯುತ್ತಿರುವ ಹಿರಿಯ ನಾಗರಿಕರು

ಏನಿದು ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆ?

ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆಯು (ಎಬಿ ಪಿಎಂ ಜೆಎವೈ) ಮೂಲತಃ ಅಶಕ್ತರು, ನಿರ್ಬಲರು, ಶೋಷಿತರು, ಬಡವರಿಗೆ ಉಚಿತ ಆರೋಗ್ಯ ವಿಮೆ ನೀಡುವ ಸ್ಕೀಮ್ ಆಗಿದೆ. ಅಕ್ಟೋಬರ್ 29ರಂದು ಈ ಯೋಜನೆಯನ್ನು 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೂ ವಿಸ್ತರಿಸಲಾಗಿದೆ. ಹಿರಿಯ ನಾಗರಿಕಗೆ ಆಯುಷ್ಮಾನ್ ವಯ ವಂದನ ಕಾರ್ಡ್ ಅನ್ನು ವಿತರಿಸಲಾಗುತ್ತಿದೆ.

ಈ ಯೋಜನೆಯಲ್ಲಿ ಒಂದು ಕುಟುಂಬಕ್ಕೆ ಒಂದು ವರ್ಷದಲ್ಲಿ 5 ಲಕ್ಷ ರೂವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುತ್ತದೆ. ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ಈ ಸೌಲಭ್ಯ ಸಿಗುತ್ತದೆ. ಖಾಸಗಿ ಇನ್ಷೂರೆನ್ಸ್ ಪಾಲಿಸಿ ಅಥವಾ ಇಎಸ್ಐ ಸ್ಕೀಮ್ ಹೊಂದಿರುವವರೂ ಕೂಡ ಆಯುಷ್ಮಾನ್ ಭಾರತ್ ಸ್ಕೀಮ್ ಅಡಿಯಲ್ಲಿ ಹೆಲ್ತ್ ಇನ್ಷೂರೆನ್ಸ್ ಪಡೆಯಲು ಅವಕಾಶ ಇದೆ.

ಇದನ್ನೂ ಓದಿ: ಭಾರತದ ಸಮಗ್ರ ಬೆಳವಣಿಗೆ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದಿಂದ ಮೆಚ್ಚುಗೆ: ಐಎಂಎಫ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕೆವಿ ಸುಬ್ರಮಣಿಯನ್

ಬೇರೆ ಖಾಸಗಿ ಹೆಲ್ತ್ ಇನ್ಷೂರೆನ್ಸ್ ಪಾಲಿಸಿಗಳಿಗೆ ಹೋಲಿಸಿದರೆ ಆಯುಷ್ಮಾನ್ ಭಾರತ್ ಯೋಜನೆ ವಿಭಿನ್ನ ಎನಿಸುವುದು ಅದರ ಕವರೇಜ್ ವ್ಯಾಪ್ತಿ. ಯಾವುದೇ ಪೂರ್ವ ರೋಗಗಳಿದ್ದರೂ ಈ ಸ್ಕೀಮ್ ಅನ್ವಯ ಆಗುತ್ತದೆ. ನೀವು ಕಾರ್ಡ್ ಮಾಡಿಸಿದ ಮೊದಲ ದಿನದಿಂದಲೇ ಚಿಕಿತ್ಸೆ ಪಡೆಯಲು ಆರಂಭಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ