AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾರಿಫ್ ಎಂದರೆ ಭಯೋತ್ಪಾದನೆ; 3ನೇ ವಿಶ್ವಮಹಾಯುದ್ಧ ಇದು: ಟ್ರಂಪ್ ನೀತಿ ಖಂಡಿಸಿದ ಬಾಬಾ ರಾಮದೇವ್

Baba Ramdev criticizes US tariff policy: ಅಮೆರಿಕದ ಟ್ಯಾರಿಫ್ ನೀತಿಯನ್ನು ಕಟ್ಟರ್ ಭಯೋತ್ಪಾದನೆಗೆ ಹೋಲಿಕೆ ಮಾಡಿರುವ ಬಾಬಾ ರಾಮದೇವ್, ಸ್ವದೇಶೀ ತತ್ವದ ಮೂಲಕ ಉತ್ತರ ಕೊಡಬೇಕೆಂದು ಕರೆ ನೀಡಿದ್ದಾರೆ. ಟ್ಯಾರಿಫ್ ನೀತಿಯ ಮೂಲಕ ಅಮೆರಿಕವು ಆರ್ಥಿಕ ಯುದ್ಧ ಘೋಷಿಸಿದೆ. ಮೂರನೇ ವಿಶ್ವ ಮಹಾಯುದ್ಧವೇನಾದರೂ ಆಗುವಂತಿದ್ದರೆ ಅದು ಈ ಆರ್ಥಿಕ ಯುದ್ಧವೇ ಆಗಿದೆ ಎಂದು ಪತಂಜಲಿ ಸಹ-ಸಂಸ್ಥಾಪಕರು ಅಭಿಪ್ರಾಪಟ್ಟಿದ್ದಾರೆ.

ಟ್ಯಾರಿಫ್ ಎಂದರೆ ಭಯೋತ್ಪಾದನೆ; 3ನೇ ವಿಶ್ವಮಹಾಯುದ್ಧ ಇದು: ಟ್ರಂಪ್ ನೀತಿ ಖಂಡಿಸಿದ ಬಾಬಾ ರಾಮದೇವ್
ಬಾಬಾ ರಾಮದೇವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 05, 2025 | 2:22 PM

Share

ನವದೆಹಲಿ, ನವೆಂಬರ್ 5: ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ನೀತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದು ದೇಶದ ಮೇಲೆ ಟ್ಯಾರಿಫ್ ವಿಧಿಸುವುದು ಭಯೋತ್ಪಾದನೆ ಹರಿಬಿಟ್ಟಂತೆ ಎಂದು ಬಾಬಾ ರಾಮದೇವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಅಮೆರಿಕದ ಟ್ಯಾರಿಫ್ ಕ್ರಮವು ಭಾರತವೂ ಒಳಗೊಂಡಂತೆ ಇತರ ದೇಶಗಳ ಮೇಲೆ ಮಾಡಲಾಗುತ್ತಿರುವ ಆರ್ಥಿಕ ಯುದ್ಧವಾಗಿದೆ ಎಂದು ವಿಷಾದಿಸಿರುವ ಅವರು, ಈ ಆರ್ಥಿಕ ಯುದ್ಧವನ್ನು ಮೂರನೇ ವಿಶ್ವ ಮಹಾಯುದ್ಧದಂತೆ ಎಂದು ತುಲನೆ ಮಾಡಿದ್ದಾರೆ.

ಆರ್ಥಿಕ ಯುದ್ಧಕ್ಕೆ ಸ್ವದೇಶೀ ಉತ್ತರ: ಬಾಬಾ ಕರೆ

ಅಮೆರಿಕ ಘೋಷಿಸಿರುವ ಆರ್ಥಿಕ ಯುದ್ಧಕ್ಕೆ ಭಾರತೀಯರು ಸ್ವದೇಶೀ ಮೂಲಕ ಪ್ರತ್ಯುತ್ತರ ಕೊಡಬೇಕು ಎಂದು ಪತಂಜಲಿ ಸಂಸ್ಥಾಪಕರು ಕರೆ ಕೊಟ್ಟಿದ್ದಾರೆ. ಸ್ವದೇಶೀ ವಸ್ತುಗಳನ್ನು ಜನರು ಖರೀದಿಸಿದರೆ ಸರ್ವಜನರ ಏಳ್ಗೆ ಸಾಧ್ಯವಾಗುತ್ತದೆ ಎಂಬುದು ಅವರ ಅನಿಸಿಕೆ.

ಇದನ್ನೂ ಓದಿ: ವಂದೇ ಭಾರತ್ ಸ್ಲೀಪರ್ ಟ್ರೈನುಗಳ ಬಿಡುಗಡೆ ಮತ್ತಷ್ಟು ವಿಳಂಬ; ಕೆಲ ಸಮಸ್ಯೆಗಳು ಪತ್ತೆ

‘ಟ್ಯಾರಿಫ್ ಎಂಬುದು ಭೀಕರವಾಗಿರುವ ಭಯೋತ್ಪಾದನೆ. ಮೂರನೇ ವಿಶ್ವ ಮಹಾಯುದ್ಧ ಎಂಬುದು ಇದ್ದರೆ ಅದು ಈ ಆರ್ಥಿಕ ಯುದ್ಧವೇ ಆಗಿದೆ. ಈ ಸಂದರ್ಭದಲ್ಲಿ ಬಡ ಮತ್ತು ಅಭಿವೃದ್ಧಿಶೀಲ ದೇಶಗಳ ಯೋಗಕ್ಷೇಮವು ಕನಿಷ್ಠ ಅಗತ್ಯವಾಗಿದೆ. ಅಧಿಕಾರದಲ್ಲಿರುವವರು ಸಾಮ್ರಾಜ್ಯವಾದಿ ಮತ್ತು ವಿಸ್ತರಣಾವಾದಿಗಳಾಗಿದ್ದಾರೆ’ ಎಂದು ಡೊನಾಲ್ಡ್ ಟ್ರಂಪ್ ವಿರುದ್ಧ ಬಾಬಾ ರಾಮದೇವ್ ಸಿಡಿಗುಟ್ಟಿದ್ದಾರೆ.

ಜಗತ್ತಿನಲ್ಲಿ ಕೆಲವೇ ವ್ಯಕ್ತಿಗಳ ಬಳಿ ಅಧಿಕಾರ ಕೇಂದ್ರಿತವಾಗಿದೆ. ಇದರಿಂದಾಗಿ ಅಸಮಾನತೆ, ಅನ್ಯಾಯ, ಶೋಷಣೆ ಹೆಚ್ಚುವಂತಹ ವ್ಯವಸ್ಥೆ ನಿರ್ಮಾಣ ಆಗುತ್ತದೆ. ವಿಶ್ವಾದ್ಯಂತ ರಕ್ತಪಾತ, ಸಂಘರ್ಷ ಹೆಚ್ಚುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಕೂಡ ತಮ್ಮ ಮಿತಿಯೊಳಗೆ ಇದ್ದು ಎಲ್ಲರೂ ಒಟ್ಟಿಗೆ ಅಭಿವೃದ್ಧಿಹೊಂದುವಂತಹ ಧೋರಣೆಯನ್ನು ಬೆಳೆಸಿಕೊಳ್ಳಬೇಕು ಎಂದು ಪತಂಜಲಿ ಸಹ-ಸಂಸ್ಥಾಪಕರು ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಸ್ವರ್ಗಸ್ಥ ಅಮ್ಮನ ಆಸೆ ತೀರಿಸಿದ ಮಗ; ಊರಿನ ಎಲ್ಲ ರೈತರ ಸಾಲ ತೀರಿಸಿದ ಉದ್ಯಮಿ

ಆರ್ಥಿಕ ಯುದ್ಧಕ್ಕೆ ಸ್ವದೇಶೀ ಉತ್ತರ

ಅಮೆರಿಕದ ಟ್ಯಾರಿಫ್ ಕ್ರಮವು ಆರ್ಥಿಕ ಯುದ್ಧವಾಗಿದೆ. ಇದಕ್ಕೆ ಸ್ವದೇಶೀ ತತ್ವದ ಮೂಲಕ ಉತ್ತರ ಕೊಡಬಹುದು ಎಂದು ಹೇಳಿದ ರಾಮದೇವ್, ಭಾರತದ ಮಹೋನ್ನತ ವ್ಯಕ್ತಿಗಳಾದ ಮಹರ್ಷಿ ದಯಾನಂದ್, ಸ್ವಾಮಿ ವಿವೇಕಾನಂದ್ ಮೊದಲಾದ ಮಹನೀಯರು ಸ್ವದೇಶೀ ತತ್ವದ ಪ್ರತಿಪಾದನೆ ಮಾಡುತ್ತಿದ್ದುದನ್ನು ಉಲ್ಲೇಖಿಸಿದ್ದಾರೆ.

‘ಸ್ವದೇಶೀ ಎಂಬುದು ಸ್ವಾವಲಂಬನೆ, ಹಾಗೂ ಕೊತ್ತಕೊನೆಯ ವ್ಯಕ್ತಿಯ ಅಭ್ಯುದಯ ಸಾಧಿಸುವಂತಹ ತತ್ವವಾಗಿದೆ. ಮಹರ್ಷಿ ದಯಾನಂದರಿಂದ ಹಿಡಿದಿ ಸ್ವಾಮಿ ವಿವೇಕಾನಂದರವರೆಗೆ ಬಹಳಷ್ಟು ಮನೀಯರು ಸ್ವದೇಶೀ ತತ್ವ ಪ್ರತಿಪಾದನೆ ಮಾಡಿದ್ದಾರೆ. ಸರ್ವಜನರ ಏಳ್ಗೆ ಆಗಬೇಕೆಂದು ಇವರೆಲ್ಲರೂ ಹೇಳಿದ್ದಾರೆ. ನಿಮ್ಮ ಜೊತೆಗೆ, ನಿಮ್ಮ ಸುತ್ತಲಿರುವ ಜನರ ಏಳ್ಗೆಗೆ ಬದ್ಧರಾಗಿ. ಇದು ಸ್ವದೇಶೀ ತತ್ವದ ಮೂಲ’ ಎಂದು ಯೋಗ ಗುರುಗಳು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು